AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವ್ಯಾ ಸುರೇಶ್​ ಬಳಿ ಭವಿಷ್ಯದ ಕನಸಿನ ಗುಟ್ಟು ಬಿಚ್ಚಿಟ್ಟ ಮಂಜು

ಬಿಗ್​ ಬಾಸ್​ ಮನೆಯಲ್ಲಿ ಮಂಜು ಹೆಚ್ಚು ಖ್ಯಾತಿ ಹೊಂದಿದ್ದಾರೆ. ಅವರಿಗೆ ಸಾಕಷ್ಟು ಅಭಿಮಾನಿಗಳು ಇದ್ದಾರೆ. ಹೀಗಾಗಿ, ಬಿಗ್​ ಬಾಸ್​ ಕಾರ್ಯಕ್ರಮದಿಂದ ಅವರ ಕೆರಿಯರ್​ಗೆ ಸಾಕಷ್ಟು ಮೈಲೇಜ್​ ಸಿಗುವ ನಿರೀಕ್ಷೆಇದೆ.

ದಿವ್ಯಾ ಸುರೇಶ್​ ಬಳಿ ಭವಿಷ್ಯದ ಕನಸಿನ ಗುಟ್ಟು ಬಿಚ್ಚಿಟ್ಟ ಮಂಜು
ಮಂಜು-ದಿವ್ಯಾ ಸುರೇಶ್​
ರಾಜೇಶ್ ದುಗ್ಗುಮನೆ
| Edited By: |

Updated on: Apr 30, 2021 | 7:27 AM

Share

ದಿವ್ಯಾ ಸುರೇಶ್​ ಹಾಗೂ ಮಂಜು ಪಾವಗಡ ಮನೆಯಲ್ಲಿ ಸದಾ ಒಟ್ಟಾಗಿರುತ್ತಾರೆ. ಬಿಗ್​ ಬಾಸ್​ ಮನೆಯ ವಿಚಾರಗಳನ್ನು ಮಾತ್ರವಲ್ಲ ಮನೆಯ ಹೊರಗಿನ ವಿಚಾರಗಳನ್ನು ಕೂಡ ಹಂಚಿಕೊಳ್ಳುತ್ತಾರೆ. ಬಹುತೇಕ ಸಮಯದಲ್ಲಿ ಇಬ್ಬರೂ ಜೋಕ್​ ಮಾಡುತ್ತಾ ಇರುತ್ತಾರೆ. ಆದರೆ, ಕೆಲವೊಮ್ಮೆ ಇಬ್ಬರೂ ಗಂಭೀರ ವಿಚಾರಗಳನ್ನು ಚರ್ಚೆ ಮಾಡಿದ್ದಿದೆ. ಈಗ ದಿವ್ಯಾ ಎದುರು ಮಂಜು ಪಾವಗಡ ಭವಿಷ್ಯದ ಕನಸಿನ ಗುಟ್ಟನ್ನು ಬಿಚ್ಚಿಟ್ಟಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಮಂಜು ಹೆಚ್ಚು ಖ್ಯಾತಿ ಹೊಂದಿದ್ದಾರೆ. ಅವರಿಗೆ ಸಾಕಷ್ಟು ಅಭಿಮಾನಿಗಳು ಇದ್ದಾರೆ. ಹೀಗಾಗಿ, ಬಿಗ್​ ಬಾಸ್​ ಕಾರ್ಯಕ್ರಮದಿಂದ ಅವರ ಕೆರಿಯರ್​ಗೆ ಸಾಕಷ್ಟು ಮೈಲೇಜ್​ ಸಿಗುವ ನಿರೀಕ್ಷೆ ಇದೆ. ಹೀಗಾಗಿ ಅವರಿಗೆ ಸಿನಿಮಾದಲ್ಲಿ ಚಾನ್ಸ್​ ಸಿಗುವ ಸಾಧ್ಯತೆ ಇದೆ. ಮಂಜು ಕನಸು ಕೂಡ ಅದೇ.

ಎಪ್ರಿಲ್​ 29ರ ಎಪಿಸೋಡ್​ನಲ್ಲಿ ಮಂಜು ಹಾಗೂ ದಿವ್ಯಾ ಸುರೇಶ್​ ಕೂತು ಮಾತನಾಡುತ್ತಿದ್ದರು. ಆಗ ಮಂಜು ಎದುರು ದಿವ್ಯಾ ಪ್ರಶ್ನೆ ಒಂದನ್ನು ಇಟ್ಟರು. 2 ವರ್ಷಗಳ ನಂತರ ನಿನ್ನನ್ನು ನೀನು ಎಲ್ಲಿ ನೋಡಿಕೊಳ್ಳೋಕೆ ಬಯಸುತ್ತೀಯಾ ಎಂದು ಕೇಳಿದರು. ಆಗ ಮಂಜು ಇದಕ್ಕೆ ಸವಿಸ್ತಾರವಾಗಿ ಉತ್ತರಿಸಿದ್ದಾರೆ.

ನಾನು ಒಳ್ಳೆಯ ಕ್ಯಾರೆಕ್ಟರ್​ ಆರ್ಟಿಸ್ಟ್​ ಆಗಬೇಕು. ಕ್ಯಾರೆಕ್ಟರ್​ ಆರ್ಟಿಸ್ಟ್​ ಎಂದರೆ ತಪ್ಪಾಗಬಹುದು. ಹೀಗಾಗಿ, ನಾನೋರ್ವ ಒಳ್ಳೆ ನಟ ಆಗಬೇಕು. ಯಾವ ಪಾತ್ರ ಕೊಟ್ಟರೂ ಜೀವಿಸಬೇಕು ಎಂದು ಕನಸನ್ನು ಬಿಚ್ಚಿಟ್ಟರು ಮಂಜು.

ಅನಂತ್​ನಾಗ್​, ಪ್ರಕಾಶ್ ರೈ, ಸುದೀಪ್​ ಅವರಿಗೆ ಯಾವ ಪಾತ್ರ ಕೊಟ್ಟರೂ ಅದಕ್ಕೆ ನ್ಯಾಯ ಒದಗಿಸುತ್ತಾರೆ. ಅವರ ತರ ಆಗಬೇಕು. ಕಥೆ ಬರೆಯುವವನು ಪಾತ್ರ ಸೃಷ್ಟಿ ಮಾಡುವಾಗ 20 ಪರ್ಸಂಟ್​ ಮಾತ್ರ ಕಲ್ಪನೆ ಮಾಡಿಕೊಂಡಿರುತ್ತಾನೆ. ಆ ಪಾತ್ರಕ್ಕೆ ಜೀವ ತುಂಬೋದು ನಟನ ಕೆಲಸ. ಮಂಜುಗೆ ಪಾತ್ರ ಕೊಟ್ಟರೆ ಸಾಕು ಅದನ್ನು ಸರಿಯಾಗಿ ನಿರ್ವಹಿಸುತ್ತಾನೆ ಎನ್ನುವ ಭರವಸೆ ನಿರ್ದೇಶಕರಿಗೆ ಬರಬೇಕು ಎಂದರು ಮಂಜು.

ಇದನ್ನೂ ಓದಿ: ನಿಂಗೆ ಮರ್ಯಾದೆ ಇಲ್ವಾ, ನನ್ ಹಿಂದೆ ಬರಬೇಡ; ಬಿಗ್​ ಬಾಸ್​ ಚೆಲುವೆಗೆ ಮಂಜು ಹೀಗೆ ಹೇಳಿದ್ದೇಕೆ?

ಜೀವನದಲ್ಲಿ ಜಿಗುಪ್ಸೆ ಬಂದಿದೆ; ವೈಷ್ಣವಿ ಮುಂದೆ ಅಳಲು ತೋಡಿಕೊಂಡ ಮಂಜು

Follow Us
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!