AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜು ಕೇವಲ ಕಾಮಿಡಿಯನ್​, ಹೀರೋ ಆಗಲ್ಲ; ಮನೆಯಿಂದ ಹೊರ ಬಂದ ಸಂಬರಗಿ ಮಾತು

ಬಿಗ್​ ಬಾಸ್​ ಮನೆಯಲ್ಲಿ ಮಂಜು-ದಿವ್ಯಾ ಸುರೇಶ್​ ಬಗ್ಗೆ ಮಾತನಾಡಿರುವ ಪ್ರಶಾಂತ್​, ಅವರಿಬ್ಬರೂ ಬಿಗ್​ ಬಾಸ್​ ಮನೆಯಲ್ಲಿ ಗಂಡ ಹೆಂಡತಿ ನಾಟಕವಾಡಿದ್ದಾರೆ ಎಂದು ದೂರಿದ್ದಾರೆ.

ಮಂಜು ಕೇವಲ ಕಾಮಿಡಿಯನ್​, ಹೀರೋ ಆಗಲ್ಲ; ಮನೆಯಿಂದ ಹೊರ ಬಂದ ಸಂಬರಗಿ ಮಾತು
ರಾಜೇಶ್ ದುಗ್ಗುಮನೆ
|

Updated on:May 13, 2021 | 8:01 PM

Share

ಬಿಗ್​ ಬಾಸ್​ ಮನೆಯಲ್ಲಿದ್ದಷ್ಟು ದಿನ ಪ್ರಶಾಂತ್​ ಸಂಬರಗಿ ವಾದಗಳ ಮೂಲಕವೇ ಎಲ್ಲರನ್ನೂ ಸೆಳೆಯುವ ಪ್ರಯತ್ನ ಮಾಡಿದ್ದರು. ಈ ವಿಚಾರದಲ್ಲಿ ಅವರು ಸುದೀಪ್​ ಅವರಿಂದ ಕಿವಿಮಾತು ಕೂಡ ಪಡೆದುಕೊಂಡಿದ್ದರು. ಮತ್ತೊಂದು ವಿಚಾರ ಎಂದರೆ, ಬಿಗ್​ ಬಾಸ್​ ಮನೆಯಲ್ಲಿ ಇದ್ದಷ್ಟು ದಿನ ಮಂಜು ಪಾವಗಡ ಜತೆ ಪ್ರಶಾಂತ್​ ಮಾತಿಗೆ ಇಳಿದಿದ್ದರು. ಅನೇಕ ಬಾರಿ ಇಬ್ಬರ ನಡುವೆ ಜಗಳ ಕೂಡ ಏರ್ಪಟ್ಟಿತ್ತು. ಬಿಗ್​ ಬಾಸ್​ ಮನೆಯಿಂದ ಹೊರ ಬಂದ ನಂತರ ಅವರು ಈಗ ವೀಕ್ಷಕರನ್ನು ಉದ್ದೇಶಿಸಿ ಮಾತನಾಡಿದ್ದು, ಮಂಜು ಕೇವಲ ಕಾಮಿಡಿಯನ್​, ಹೀರೋ ಆಗಕ್ಕೆ ಆಗಲ್ಲ ಎಂದಿದ್ದಾರೆ.

ಇಂದು ಕಲರ್ಸ್​ ಕನ್ನಡ ವಾಹಿನಿಯ ಫೇಸ್​ಬುಕ್ ಲೈವ್​ನಲ್ಲಿ​ ಬಂದು ಪ್ರಶಾಂತ್​ ಮಾತನಾಡಿದ್ದಾರೆ. ಈ ವೇಳೆ ಅವರಿಗೆ ಫೇವರೆಟ್​ ಕಂಟೆಸ್ಟಂಟ್​ ಯಾರು ಎನ್ನುವ ಪ್ರಶ್ನೆ ಕೇಳಲಾಯಿತು. ಇದಕ್ಕೆ ಪ್ರಶಾಂತ್​ ಉತ್ತರಿಸಿದ್ದಾರೆ. ‘ಬಿಗ್​ ಬಾಸ್​ ಮನೆಯಲ್ಲಿ ನನ್ನ ನೆಚ್ಚಿನ ಕಂಟೆಸ್ಟಂಟ್​ ಎಂದು ಯಾರೂ ಇರಲಿಲ್ಲ. ಎಲ್ಲರಲ್ಲೂ ಒಂದು ಮೈನಸ್​ ಪಾಯಿಂಟ್​ ಇತ್ತು. ಮಂಜು ಪಾವಗಡ ಅವರಿಗೆ ಶಕ್ತಿ ಇತ್ತು. ಅದೇ ರೀತಿ ವೀಕ್​ನೆಸ್​ ಕೂಡ ಇತ್ತು’ ಎಂದು ಪ್ರಶಾಂತ್​ ಮಾತು ಆರಂಭಿಸಿದರು.

‘ಮಂಜು ಸ್ಕ್ರಿಪ್ಟೆಡ್​ ಲೈನ್​ಗಳನ್ನು ಹೆಚ್ಚು ಬಳಕೆ ಮಾಡುತ್ತಿದ್ದರು. ಹೀಗಾಗಿ, ಬಿಗ್​ ಬಾಸ್​ ಮನೆಯಲ್ಲಿ ಅವರಿಗೆ ಕಷ್ಟವಾಗುತ್ತಿತ್ತು. ಯಾವುದಾದರೂ ಸಿನಿಮಾ ತೆಗೆದುಕೊಂಡರೆ ಹೀರೋ ಹೀರೋನೆ, ಕಾಮಿಡಿಯನ್​ ಕಾಮಿಡಿಯನ್ನೇ. ಕಾಮಿಡಿಯನ್​ ಯಾವಾಗಲೂ ಹೀರೋ ಆಗೋಕೆ ಆಗಲ್ಲ. ಮಂಜು ಅವರ ಸ್ಟಫ್​ ಬರುಬರುತ್ತಾ ಕಡಿಮೆ ಆಯಿತು’ ಎಂದರು ಪ್ರಶಾಂತ್​. ಮಂಜು ಪಾವಗಡ ಮಜಾ ಭಾರತ​ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಂಡು ಎಲ್ಲರನ್ನೂ ನಗಿಸಿದ್ದರು. ಆ ಕಾರಣಕ್ಕೆ ಪ್ರಶಾಂತ್​ ಹೀಗೆ ಹೇಳಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಮಂಜು-ದಿವ್ಯಾ ಸುರೇಶ್​ ಬಗ್ಗೆ ಮಾತನಾಡಿರುವ ಪ್ರಶಾಂತ್​, ಅವರಿಬ್ಬರೂ ಬಿಗ್​ ಬಾಸ್​ ಮನೆಯಲ್ಲಿ ಗಂಡ ಹೆಂಡತಿ ನಾಟಕವಾಡಿದ್ದಾರೆ ಎಂದು ದೂರಿದ್ದಾರೆ. ‘ಬಿಗ್​ ಬಾಸ್​ ಮನೆಯಲ್ಲಿ ನಾವು ಎಮೋಷನಲಿ ಡಿಸ್​ಕನೆಕ್ಟೆಡ್​. 71 ದಿನ ಮನೆಯಲ್ಲಿ ಕಳೆದಿದ್ದೇವೆ. ಮನೆಯಲ್ಲಿ ಯಾರಾದರೂ ಒಬ್ಬರನ್ನೂ ವಿನ್ನರ್​ ಎಂದು ಘೋಷಿಸಬೇಕಿತ್ತು. ಆ ರಿಸಲ್ಟ್​ ಕೊಟ್ಟಿದ್ದರೆ ಖುಷಿ ಆಗುತ್ತಿತ್ತು’ ಎಂದು ಪ್ರಶಾಂತ್​ ಹೇಳಿದ್ದಾರೆ.

ಇದನ್ನೂ ಓದಿ: Prashanth Sambargi: ಸುದೀಪ್​ ಮಾತಿಗೆ ಬೆಲೆಕೊಟ್ಟು ದೊಡ್ಡ ನಿರ್ಧಾರ ತೆಗೆದುಕೊಂಡ ಪ್ರಶಾಂತ್​ ಸಂಬರಗಿ; ಮನೆಯವರಿಗೆ ಶಾಕ್

‘ನಾನು ಕಿತ್ತೂರು ರಾಣಿ ಚೆನ್ನಮ್ಮ ಕುಟುಂಬದವನು’; ಕೊನೆಯ ದಿನ ಅಚ್ಚರಿಯ ವಿಚಾರ ಬಿಚ್ಚಿಟ್ಟ ಪ್ರಶಾಂತ್​ ಸಂಬರಗಿ

Published On - 8:01 pm, Thu, 13 May 21

ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ