AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಧಾರಾವಾಹಿ ನಟಿ ಬಗ್ಗೆ ಮಂಜು ಪಾವಗಡ ಹೇಳಿದ ಒಗಟನ್ನು ನಿಮ್ಮಿಂದ ಬಿಡಿಸೋಕೆ ಸಾಧ್ಯವಾ?

ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳಿಗೆ ಒಂದು ಟಾಸ್ಕ್​ ನೀಡಲಾಗಿತ್ತು. ಈ ಟಾಸ್ಕ್​ ಪ್ರಕಾರ ಎರಡು ತಂಡಗಳು ಸೀಟ್​ ಮೇಲೆ ಕೂರಬೇಕು. ಮಂಜು ಪಾವಗಡ, ಶಮಂತ್​, ಪ್ರಶಾಂತ್​, ವೈಷ್ಣವಿ ಗೌಡ, ನಿಧಿ ಸುಬ್ಬಯ್ಯ ಹಾಗೂ ಪ್ರಿಯಾಂಕಾ ತಿಮ್ಮೇಶ್​ ಎರಡು ತಂಡಗಳನ್ನು ಪ್ರತಿನಿಧಿಸಿ ಕೂತಿದ್ದಾರೆ.

ಖ್ಯಾತ ಧಾರಾವಾಹಿ ನಟಿ ಬಗ್ಗೆ ಮಂಜು ಪಾವಗಡ ಹೇಳಿದ ಒಗಟನ್ನು ನಿಮ್ಮಿಂದ ಬಿಡಿಸೋಕೆ ಸಾಧ್ಯವಾ?
ಮಂಜು ಪಾವಗಡ
Follow us
TV9 Web
| Updated By: ಮದನ್​ ಕುಮಾರ್​

Updated on: Jun 26, 2021 | 9:57 AM

ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಸೆಕೆಂಡ್ ಇನ್ನಿಂಗ್ಸ್​ ಆರಂಭದಿಂದಲೇ ಉತ್ತಮ ಮೈಲೇಜ್​ ಪಡೆದುಕೊಂಡಿದೆ. ಮಂಜು ಪಾವಗಡ ಸಾಕಷ್ಟು ಮನರಂಜನೆ ನೀಡುತ್ತಿದ್ದಾರೆ. ಮನೆಗೆ ಬಂದ ದಿನದಿಂದಲೂ ಎಲ್ಲರನ್ನೂ ನಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಈಗ ಅವರು ಹೀರೋಯಿನ್​ ಒಬ್ಬರ ಬಗ್ಗೆ ಒಂದು ಒಗಟನ್ನು ಹೇಳಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳಿಗೆ ಕುರ್ಚಿ ಪಾಲಿಟಿಕ್ಸ್​ ಟಾಸ್ಕ್​ ನೀಡಲಾಗಿತ್ತು. ಈ ಟಾಸ್ಕ್​ ಪ್ರಕಾರ ಎರಡು ತಂಡಗಳು ಸೀಟ್​ ಮೇಲೆ ಕೂರಬೇಕು. ಮಂಜು ಪಾವಗಡ, ಶಮಂತ್​, ಪ್ರಶಾಂತ್​, ವೈಷ್ಣವಿ ಗೌಡ, ನಿಧಿ ಸುಬ್ಬಯ್ಯ ಹಾಗೂ ಪ್ರಿಯಾಂಕಾ ತಿಮ್ಮೇಶ್​ ಎರಡು ತಂಡಗಳನ್ನು ಪ್ರತಿನಿಧಿಸಿ ಕೂತಿದ್ದರು. ಈ ವೇಳೆ ಮಂಜು ಸಾಕಷ್ಟು ನಗಿಸುವ ಕೆಲಸ ಮಾಡಿದ್ದಾರೆ. ಅಲ್ಲದೆ, ಪಕ್ಕದಲ್ಲಿ ಕೂತಿದ್ದ ಶಮಂತ್​ಗೆ ಒಗಟೊಂದನ್ನು ಹೇಳಿದ್ದಾರೆ.

‘ಅವರು ಎಂಟೂವರೆ ಅಡಿ ಎತ್ತರ ಇದ್ದಾರೆ. ಈ ಹೀರೋಯಿನ್​ ಒಂದು ಸೀರಿಯಲ್​ ಮಾಡಿದ್ರು. 7-8 ವರ್ಷ ಬರೀ ಅದೇ ಸೌಂಡ್​. ಹೀರೋಯಿನ್​ ವರ್ಲ್ಡ್​​​​ ಫೇಮಸ್​. ಗೊತ್ತಿದ್ದೂ ಸುಮ್ಮನಿರುತ್ತಾರೆ. ಗಂಡ ಎಂದರೆ ಆಕೆಗೆ ಭಯ-ಭಕ್ತಿ. ಗಂಡ-ಹೆಂಡತಿ ಸಂಬಂಧ ಹೆಚ್ಚು ಗಟ್ಟಿ. ಈ ಹೀರೋಯಿನ್​ ಯಾರು? ಸೀರಿಯಲ್​ ಕೊನೆಯ ಪದ ‘..ಸಾಕ್ಷಿ’ ಮೊದಲು ‘ಬೆಂಕಿ’ ಇಟ್ಟಾಗ ಮುಂದೆ ‘ಸಾಕ್ಷಿ’ ಬರುತ್ತೆ’ ಎಂದರು.

ಈ ಮಾತನ್ನು ದಿವ್ಯಾ ಉರುಡುಗ, ವೈಷ್ಣವಿ ಹಾಗೂ ಶಮಂತ್ ಕೇಳುತ್ತಿದ್ದರು. ಈ ವೇಳೆ ‘ಅಗ್ನಿ ಸಾಕ್ಷಿ ಸನ್ನಿಧಿ ವೈಷ್ಣವಿ ಗೌಡ’ ಎಂದು ಒಗಟನ್ನು ಬಿಡಿಸಿದರು ಶಮಂತ್​. ಈ ಮಾತನ್ನು ಕೇಳಿದ ವೈಷ್ಣವಿ ಕೂಡ ಬಿದ್ದು ಬಿದ್ದು ನಕ್ಕರು.

‘ನಿಮ್ಮ ಉಪಕಾರ ಏಳು ಜನ್ಮ ಕಳೆದರೂ ಮರೆಯಲ್ಲ. ನಿಮ್ಮ ಕೈ ಕೊಡಿ. ಕಾಲು ಎಂದು ಹಿಡಿದುಕೊಳ್ತೇನೆ’ ಎಂದರು ವೈಷ್ಣವಿ. ಈ ಚರ್ಚೆ ಸಾಕಷ್ಟು ನಗು ತರಿಸಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಕ್ಯಾಪ್ಟನ್​ ರೂಂನಲ್ಲಿ ಭೂತ? ಕಪ್ಪಗಿನ ಆಕೃತಿ ಕಂಡು ಬೆಚ್ಚಿಬಿದ್ದ ಶಮಂತ್​

ವಾರ್ನಿಂಗ್​ ನಂತರವೂ ಬಿಗ್​ ಬಾಸ್​ ಹೆಸರು ದುರ್ಬಳಕೆ ಮಾಡಿಕೊಂಡ 11 ಸ್ಪರ್ಧಿಗಳು; ಕಾದಿದೆಯಾ ದೊಡ್ಡ ಶಿಕ್ಷೆ?

ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ