AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಧಾರಾವಾಹಿ ನಟಿ ಬಗ್ಗೆ ಮಂಜು ಪಾವಗಡ ಹೇಳಿದ ಒಗಟನ್ನು ನಿಮ್ಮಿಂದ ಬಿಡಿಸೋಕೆ ಸಾಧ್ಯವಾ?

ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳಿಗೆ ಒಂದು ಟಾಸ್ಕ್​ ನೀಡಲಾಗಿತ್ತು. ಈ ಟಾಸ್ಕ್​ ಪ್ರಕಾರ ಎರಡು ತಂಡಗಳು ಸೀಟ್​ ಮೇಲೆ ಕೂರಬೇಕು. ಮಂಜು ಪಾವಗಡ, ಶಮಂತ್​, ಪ್ರಶಾಂತ್​, ವೈಷ್ಣವಿ ಗೌಡ, ನಿಧಿ ಸುಬ್ಬಯ್ಯ ಹಾಗೂ ಪ್ರಿಯಾಂಕಾ ತಿಮ್ಮೇಶ್​ ಎರಡು ತಂಡಗಳನ್ನು ಪ್ರತಿನಿಧಿಸಿ ಕೂತಿದ್ದಾರೆ.

ಖ್ಯಾತ ಧಾರಾವಾಹಿ ನಟಿ ಬಗ್ಗೆ ಮಂಜು ಪಾವಗಡ ಹೇಳಿದ ಒಗಟನ್ನು ನಿಮ್ಮಿಂದ ಬಿಡಿಸೋಕೆ ಸಾಧ್ಯವಾ?
ಮಂಜು ಪಾವಗಡ
TV9 Web
| Edited By: |

Updated on: Jun 26, 2021 | 9:57 AM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಸೆಕೆಂಡ್ ಇನ್ನಿಂಗ್ಸ್​ ಆರಂಭದಿಂದಲೇ ಉತ್ತಮ ಮೈಲೇಜ್​ ಪಡೆದುಕೊಂಡಿದೆ. ಮಂಜು ಪಾವಗಡ ಸಾಕಷ್ಟು ಮನರಂಜನೆ ನೀಡುತ್ತಿದ್ದಾರೆ. ಮನೆಗೆ ಬಂದ ದಿನದಿಂದಲೂ ಎಲ್ಲರನ್ನೂ ನಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಈಗ ಅವರು ಹೀರೋಯಿನ್​ ಒಬ್ಬರ ಬಗ್ಗೆ ಒಂದು ಒಗಟನ್ನು ಹೇಳಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳಿಗೆ ಕುರ್ಚಿ ಪಾಲಿಟಿಕ್ಸ್​ ಟಾಸ್ಕ್​ ನೀಡಲಾಗಿತ್ತು. ಈ ಟಾಸ್ಕ್​ ಪ್ರಕಾರ ಎರಡು ತಂಡಗಳು ಸೀಟ್​ ಮೇಲೆ ಕೂರಬೇಕು. ಮಂಜು ಪಾವಗಡ, ಶಮಂತ್​, ಪ್ರಶಾಂತ್​, ವೈಷ್ಣವಿ ಗೌಡ, ನಿಧಿ ಸುಬ್ಬಯ್ಯ ಹಾಗೂ ಪ್ರಿಯಾಂಕಾ ತಿಮ್ಮೇಶ್​ ಎರಡು ತಂಡಗಳನ್ನು ಪ್ರತಿನಿಧಿಸಿ ಕೂತಿದ್ದರು. ಈ ವೇಳೆ ಮಂಜು ಸಾಕಷ್ಟು ನಗಿಸುವ ಕೆಲಸ ಮಾಡಿದ್ದಾರೆ. ಅಲ್ಲದೆ, ಪಕ್ಕದಲ್ಲಿ ಕೂತಿದ್ದ ಶಮಂತ್​ಗೆ ಒಗಟೊಂದನ್ನು ಹೇಳಿದ್ದಾರೆ.

‘ಅವರು ಎಂಟೂವರೆ ಅಡಿ ಎತ್ತರ ಇದ್ದಾರೆ. ಈ ಹೀರೋಯಿನ್​ ಒಂದು ಸೀರಿಯಲ್​ ಮಾಡಿದ್ರು. 7-8 ವರ್ಷ ಬರೀ ಅದೇ ಸೌಂಡ್​. ಹೀರೋಯಿನ್​ ವರ್ಲ್ಡ್​​​​ ಫೇಮಸ್​. ಗೊತ್ತಿದ್ದೂ ಸುಮ್ಮನಿರುತ್ತಾರೆ. ಗಂಡ ಎಂದರೆ ಆಕೆಗೆ ಭಯ-ಭಕ್ತಿ. ಗಂಡ-ಹೆಂಡತಿ ಸಂಬಂಧ ಹೆಚ್ಚು ಗಟ್ಟಿ. ಈ ಹೀರೋಯಿನ್​ ಯಾರು? ಸೀರಿಯಲ್​ ಕೊನೆಯ ಪದ ‘..ಸಾಕ್ಷಿ’ ಮೊದಲು ‘ಬೆಂಕಿ’ ಇಟ್ಟಾಗ ಮುಂದೆ ‘ಸಾಕ್ಷಿ’ ಬರುತ್ತೆ’ ಎಂದರು.

ಈ ಮಾತನ್ನು ದಿವ್ಯಾ ಉರುಡುಗ, ವೈಷ್ಣವಿ ಹಾಗೂ ಶಮಂತ್ ಕೇಳುತ್ತಿದ್ದರು. ಈ ವೇಳೆ ‘ಅಗ್ನಿ ಸಾಕ್ಷಿ ಸನ್ನಿಧಿ ವೈಷ್ಣವಿ ಗೌಡ’ ಎಂದು ಒಗಟನ್ನು ಬಿಡಿಸಿದರು ಶಮಂತ್​. ಈ ಮಾತನ್ನು ಕೇಳಿದ ವೈಷ್ಣವಿ ಕೂಡ ಬಿದ್ದು ಬಿದ್ದು ನಕ್ಕರು.

‘ನಿಮ್ಮ ಉಪಕಾರ ಏಳು ಜನ್ಮ ಕಳೆದರೂ ಮರೆಯಲ್ಲ. ನಿಮ್ಮ ಕೈ ಕೊಡಿ. ಕಾಲು ಎಂದು ಹಿಡಿದುಕೊಳ್ತೇನೆ’ ಎಂದರು ವೈಷ್ಣವಿ. ಈ ಚರ್ಚೆ ಸಾಕಷ್ಟು ನಗು ತರಿಸಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಕ್ಯಾಪ್ಟನ್​ ರೂಂನಲ್ಲಿ ಭೂತ? ಕಪ್ಪಗಿನ ಆಕೃತಿ ಕಂಡು ಬೆಚ್ಚಿಬಿದ್ದ ಶಮಂತ್​

ವಾರ್ನಿಂಗ್​ ನಂತರವೂ ಬಿಗ್​ ಬಾಸ್​ ಹೆಸರು ದುರ್ಬಳಕೆ ಮಾಡಿಕೊಂಡ 11 ಸ್ಪರ್ಧಿಗಳು; ಕಾದಿದೆಯಾ ದೊಡ್ಡ ಶಿಕ್ಷೆ?

Follow Us
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್