AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manju Pavagada: ಉಳಿದವರು ಸೆಟಲ್​ ಆಗಿರಬಹುದು, ಆದರೆ ನನ್ನ ಜೀವನ ಹಾಗಲ್ಲ; ಇದು ಮಂಜು ದುರಾದೃಷ್ಟ

ಹೊರ ಜಗತ್ತಿನಲ್ಲಿ ಏನಾಗುತ್ತಿದೆ ಎಂಬುದನ್ನು ಬಿಗ್​ ಬಾಸ್​ ಸ್ಪರ್ಧಿಗಳಿಗೆ ಟಿವಿ ಮೂಲಕ ತೋರಿಸಲಾಯಿತು. ಅಲ್ಲದೆ, ಬಿಗ್​ ಬಾಸ್​ ಅರ್ಧಕ್ಕೆ ನಿಲ್ಲುತ್ತಿದೆ ಎಂಬುದನ್ನು ಘೋಷಿಸಲಾಯಿತು. ಆ ನಂತರ ಪ್ರಿಯಾಂಕಾ ಜತೆ ಮಂಜು ಮಾತನಾಡಿದ್ದಾರೆ.  

Manju Pavagada: ಉಳಿದವರು ಸೆಟಲ್​ ಆಗಿರಬಹುದು, ಆದರೆ ನನ್ನ ಜೀವನ ಹಾಗಲ್ಲ; ಇದು ಮಂಜು ದುರಾದೃಷ್ಟ
ಮಂಜು ಪಾವಗಡ
ರಾಜೇಶ್ ದುಗ್ಗುಮನೆ
|

Updated on: May 12, 2021 | 2:11 PM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8 ಅರ್ಧಕ್ಕೆ ನಿಂತಿದೆ. ನೂರಾರು ಕನಸು ಕಂಡು ಮನೆ ಸೇರಿದ್ದ ಬಿಗ್​ ಬಾಸ್​ ಮಂದಿ ಅರ್ಧ ದಾರಿಯಲ್ಲೇ ಹಿಂದಿರುಗುತ್ತಿದ್ದಾರೆ. ಇದು ಸ್ಪರ್ಧಿಗಳಿಗೆ ನುಂಗಲಾರದ ತುತ್ತಾಗಿದೆ. ಅಷ್ಟೇ ಅಲ್ಲ, ಅರ್ಧದಲ್ಲೇ ಬಿಗ್​ ಬಾಸ್​ ನಿಲ್ಲುತ್ತಿರುವುದಕ್ಕೆ ಅವರು ದುಃಖ ವ್ಯಕ್ತಪಡಿಸಿದ್ದಾರೆ. ಮಂಜು ಪಾವಗಡ ಕೂಡ ತಮ್ಮ ದುರಾದೃಷ್ಟ ನೆನೆದು ಬೇಸರ ಹೊರ ಹಾಕಿದ್ದಾರೆ.

ಮಂಜು ಪಾವಗಡ ಬಿಗ್​ ಬಾಸ್​ ಫಿನಾಲೆ ತಲುಪಬಹುದು ಎಂಬುದು ಎಲ್ಲರ ಲೆಕ್ಕಾಚಾರವಾಗಿತ್ತು. ಮಧ್ಯದಲ್ಲಿ ಸ್ವಲ್ಪ ಡಲ್​ ಆದಂತೆ ಕಂಡರೂ ಕೊನೆಯ ವಾರ ಮತ್ತೆ ಫಾರ್ಮ್​​ಗೆ ಮರಳಿದ್ದರು. ಮಂಜು ತಾವು ಜೀವನದಲ್ಲಿ ತುಂಬಾನೇ ಕಷ್ಟಪಟ್ಟಿರುವುದಾಗಿ ಬಿಗ್​ ಬಾಸ್​ ವೇದಿಕೆ ಮೇಲೆ ಹೇಳಿದ್ದರು. ಆರಂಭದಲ್ಲಿ ಒಂದೇ ಹೊತ್ತು ಊಟ ಮಾಡಿಕೊಂಡು ಬದುಕಿದ ಕಥೆಗಳನ್ನು ಅವರು ಬಿಗ್​ ಬಾಸ್​ ಮನೆಯಲ್ಲಿ ಹೇಳಿದ್ದರು. ಆ ಘಟನೆ ವೀಕ್ಷಕರ ಕಣ್ಣಲ್ಲಿ ನೀರು ತರಿಸಿತ್ತು.

ಈಗ ಬಿಗ್​ ಬಾಸ್​ ಅರ್ಧಕ್ಕೆ ನಿಂತಿದೆ. ಒಂದೊಮ್ಮೆ ಮಂಜು ಬಿಗ್​ ಬಾಸ್​ ಸೀಸನ್​ 8ರ ಟ್ರೋಫಿ ಗೆದ್ದಿದ್ದರೆ 50 ಲಕ್ಷ ರೂಪಾಯಿ ಅವರದ್ದಾಗುತ್ತಿತ್ತು. ಆ ಹಣದಿಂದ ಅವರು ಜೀವನ ಕಟ್ಟಿಕೊಳ್ಳಬಹುದಿತ್ತು. ಆದರೆ, ಆ ರೀತಿ ಆಗಲೇ ಇಲ್ಲ. ಬಿಗ್​​ ಬಾಸ್​ ಅರ್ಧಕ್ಕೆ ನಿಂತಿದ್ದರಿಂದ ಯಾರನ್ನೂ ವಿಜೇತರು ಎಂದು ಘೋಷಿಸಿಲ್ಲ. ತಮ್ಮ ದುರಾದೃಷ್ಟದ ಬಗ್ಗೆ ಮಂಜು ಮಾತನಾಡಿಕೊಂಡಿದ್ದಾರೆ.

ಹೊರ ಜಗತ್ತಿನಲ್ಲಿ ಏನಾಗುತ್ತಿದೆ ಎಂಬುದನ್ನು ಬಿಗ್​ ಬಾಸ್​ ಸ್ಪರ್ಧಿಗಳಿಗೆ ಟಿವಿ ಮೂಲಕ ತೋರಿಸಲಾಯಿತು. ಅಲ್ಲದೆ, ಬಿಗ್​ ಬಾಸ್​ ಅರ್ಧಕ್ಕೆ ನಿಲ್ಲುತ್ತಿದೆ ಎಂಬುದನ್ನು ಘೋಷಿಸಲಾಯಿತು. ಆ ನಂತರ ಪ್ರಿಯಾಂಕಾ ಜತೆ ಮಂಜು ಮಾತನಾಡಿದ್ದಾರೆ.

ಸಾವಿರ ಕನಸು ಹೊತ್ತು ಬಿಗ್​ ಬಾಸ್​ ಮನೆಗೆ ಬಂದಾಗಲೇ ಹೊರಗಿನ ಪ್ರಪಂಚ ಹೀಗಾಗಬೇಕಾ? ಇಲ್ಲಿಂದ ನಾವು ಜೀವನ ಕಟ್ಟಿಕೊಳ್ಳಬೇಕು ಎಂದು ಬಂದಿದ್ವಿ. ಈಗ ಹೀಗಾಗಿದೆ. ಬಾಕಿಯವರ ಜೀವನ ಸೆಟಲ್​ ಆಗಿರಬಹುದು. ಆದರೆ, ನನ್ನ ಜೀವನ ಆ ರೀತಿ ಅಲ್ಲ. ಇಲ್ಲಿಂದ ಏನೋ ಒಂದು ಸಿಗತ್ತೆ ಎಂದುಕೊಂಡು ಬಂದಿದ್ದು. ಆದರೆ, ಹೀಗಾಯ್ತು. ನನಗೆ ತುಂಬಾನೇ ಬೇಸರವಾಗುತ್ತಿದೆ ಎಂದು ಮಂಜು ಭಾವುಕರಾದರು.

ಏನೇನೊ ಅಂದ್ಕೊಂಡು ಬಂದಿದ್ದೆ. ಆದರೆ, ಭಗವಂತ ಹೀಗೆ ಮಾಡಿದ. ಪ್ರತೀ ಬಾರಿ ನಾವೇ ಸಿಕ್ತೀವಾ? ಜೀವನದಲ್ಲಿ ಸಾಕಷ್ಟು ಹೊಡೆಸಿಕೊಂಡು ಬಂದಿದ್ದೇನೆ. ಇಂಥ ದೊಡ್ಡ ವೇದಿಕೆಗೆ ಬಂದರೂ ದುರಾದೃಷ್ಟವೇ ಕೈ ಹಿಡಿಯಿತಲ್ಲ ಅನ್ನೋದು ಬೇಸರದ ಸಂಗತಿ ಎಂದರು ಮಂಜು.

ಇದನ್ನೂ ಓದಿ: Bigg Boss Kannada: ಕೊರೊನಾ ವಿಷಯ ಗೊತ್ತಾಗಿ ಕಣ್ಣೀರು ಹಾಕುತ್ತ ಬಿಗ್​ ಬಾಸ್ ಮನೆಯಿಂದ ಹೊರಬಂದ ಸ್ಪರ್ಧಿಗಳು

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು