Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಕಿತ್ತಾಟ; ರಾಜೀವ್​ ಕೊಟ್ಟ ಏಟಿಗೆ ಮಂಜು ಹಲ್ಲೇ ಉದುರೋಯ್ತು!

ಮಂಜು ಮತ್ತು ರಾಜೀವ್​ ನಡುವೆ ಆದ ಒಂದು ಡಿಕ್ಕಿಯಿಂದ ಮಂಜು ಅವರ ಹಲ್ಲೇ ಮುರಿದು ಹೋಗಿದೆ. ಈ ವಿಚಾರ ಈಗ ಸಾಕಷ್ಟು ಚರ್ಚೆ ಆಗುತ್ತಿದೆ.

ಬಿಗ್​ ಬಾಸ್​ ಮನೆಯಲ್ಲಿ ಕಿತ್ತಾಟ; ರಾಜೀವ್​ ಕೊಟ್ಟ ಏಟಿಗೆ ಮಂಜು ಹಲ್ಲೇ ಉದುರೋಯ್ತು!
ಮಂಜು ಪಾವಗಡ-ರಾಜೀವ್​
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: Mar 31, 2021 | 8:01 AM

ಬಿಗ್​ ಬಾಸ್​ ಮನೆಯಲ್ಲಿ ಸದಾ ಆ್ಯಕ್ಟಿವ್​ ಆಗಿರುವ ಮಂಜು ಹಲ್ಲು ಕಳೆದುಕೊಂಡಿದ್ದಾರೆ! ಬಿಗ್​ ಬಾಸ್​ ಮನೆಯಲ್ಲಿ ನೀಡಿದ ಟಾಸ್ಕ್​ ಒಂದನ್ನು ಆಡುವಾಗ ರಾಜೀವ್​ ಕೈ ತಾಗಿ ಮಂಜು ಅವರ ಹಲ್ಲೇ ಮುರಿದು ಹೋಗಿದೆ. ಸದ್ಯ ಹಲ್ಲು ಕಳೆದುಕೊಂಡ ಮಂಜು ಅವರು ತುಂಬಾನೇ ಬೇಸರಗೊಂಡಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಎರಡು ಟೀಂಗಳನ್ನು ಮಾಡಲಾಗಿದೆ. ಒಂದು ಟೀಂಗೆ ದಿವ್ಯಾ ಕ್ಯಾಪ್ಟನ್​ ಆದರೆ, ಮತ್ತೊಂದು ತಂಡಕ್ಕೆ ಶುಭಾ ಪೂಂಜಾ ಕ್ಯಾಪ್ಟನ್​. ಇಟ್ಟಿಗೆ ಸಂಗ್ರಹಿಸಿ ಗೋಪುರ ಕಟ್ಟಿ ಅದನ್ನು ಕಾಯ್ದುಕೊಳ್ಳಬೇಕು. ಸಾಮಾನ್ಯ ಬಣ್ಣದ ಇಟ್ಟಿಗೆಗೆ 1 ಅಂಕ, ಕಲರ್​ ಫುಲ್​ ಇಟ್ಟಿಗೆಗೆ 3 ಅಂಕ.

ಈ ಗೇಮ್​ ಅನ್ನು ಎರಡೂ ತಂಡದ ಆಟಗಾರರು ಉತ್ಸಾಹದಿಂದ ಆಡುತ್ತಿದ್ದರು. ವೈರಸ್​-ಮನುಷ್ಯ ಟಾಸ್ಕ್​ನಲ್ಲಿ ಎರಡೂ ತಂಡದವರು ಕಿತ್ತಾಡಿಕೊಂಡು ಇಡೀ ಟಾಸ್ಕ್​ ರದ್ದಾಗಿತ್ತು. ಇದು ಈಗ ಮತ್ತೆ ಪುನರಾವರ್ತನೆ ಆಗದಂತೆ ನೋಡಿಕೊಳ್ಳಲು ಎರಡೂ ತಂಡದವರು ಪಣ ತೊಟ್ಟಿದ್ದರು. ಅಷ್ಟೇ ಅಲ್ಲ, ಪರಸ್ಪರ ಕಿತ್ತಾಡಿಕೊಳ್ಳದಂತೆ ಸೂಚನೆ ನೀಡಲಾಗಿತ್ತು.

ಆದರೆ, ಮಂಜು ಮತ್ತು ರಾಜೀವ್​ ನಡುವೆ ಆದ ಒಂದು ಡಿಕ್ಕಿಯಿಂದ ಮಂಜು ಅವರ ಹಲ್ಲೇ ಮುರಿದು ಹೋಗಿದೆ. ಮಂಜು ಅವರು ರಾಜೀವ್​ ಹಿಂದೆ ನಿಂತಿದ್ದರು. ರಾಜೀವ್​ ಹಿಂದೆ ತಿರುಗಲು ಕೈ ಬೀಸಿದ್ದಾರೆ. ಆಗ ಕೈ ಮಂಜು ಬಾಯಿಗೆ ಹೊಡೆದಿದೆ. ಆಗ ಮಂಜು ಹಲ್ಲು ಮುರಿದು ರಾಜೀವ್ ಕೈಗೆ ನಾಟಿದೆ. ಇಬ್ಬರೂ ನೋವಿನಿಂದ ಒದ್ದಾಡಿದ್ದಾರೆ. ಮಂಜು ಬಾಯಿಯಿಂದ ಹಲ್ಲು ಉದುರುತ್ತಿದ್ದಂತೆಯೇ ರಕ್ತ ಕಾಣಿಸಿಕೊಂಡಿದೆ. ಅಷ್ಟೇ ಅಲ್ಲ, ಒಮ್ಮೆ ಅವರಿಗೆ ತಲೆ ಸುತ್ತಿದೆ. ನಂತರ ವಾಷ್​ ರೂಂಗೆ ತೆರಳಿ ಬಾಯಿ ತೊಳೆದುಕೊಂಡಿದ್ದಾರೆ.

ಇದು ಇಬ್ಬರಿಗೂ ಗೊತ್ತಾಗದೆ ಆದ ಘಟನೆ. ಹೀಗಾಗಿ, ಇಬ್ಬರೂ ಪರಸ್ಪರ ಕ್ಷಮೆ ಕೇಳಿದ್ದಾರೆ. ಅಷ್ಟೇ ಅಲ್ಲ, ತಮಗೆ ಆದ ನೋವಿನ ಘಟನೆಯ ಬಗ್ಗೆ ಪರಸ್ಪರ ವಿವರಿಸಿದ್ದಾರೆ.

ಇದನ್ನೂ ಓದಿ: ‘ನನ್ನ ಜೀವನದಲ್ಲಿ ದಿವ್ಯಾಗೆ ಶಾಶ್ವತ ಸ್ಥಾನ; ಮೊದಲು ಇವರೇ, ಕೊನೆಯೂ ಇವರೇ’! ಮಂಜು ಲವ್​ ಇನ್ನಷ್ಟು ಸೀರಿಯಸ್​

ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ