AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಕಿತ್ತಾಟ; ರಾಜೀವ್​ ಕೊಟ್ಟ ಏಟಿಗೆ ಮಂಜು ಹಲ್ಲೇ ಉದುರೋಯ್ತು!

ಮಂಜು ಮತ್ತು ರಾಜೀವ್​ ನಡುವೆ ಆದ ಒಂದು ಡಿಕ್ಕಿಯಿಂದ ಮಂಜು ಅವರ ಹಲ್ಲೇ ಮುರಿದು ಹೋಗಿದೆ. ಈ ವಿಚಾರ ಈಗ ಸಾಕಷ್ಟು ಚರ್ಚೆ ಆಗುತ್ತಿದೆ.

ಬಿಗ್​ ಬಾಸ್​ ಮನೆಯಲ್ಲಿ ಕಿತ್ತಾಟ; ರಾಜೀವ್​ ಕೊಟ್ಟ ಏಟಿಗೆ ಮಂಜು ಹಲ್ಲೇ ಉದುರೋಯ್ತು!
ಮಂಜು ಪಾವಗಡ-ರಾಜೀವ್​
ರಾಜೇಶ್ ದುಗ್ಗುಮನೆ
| Edited By: |

Updated on: Mar 31, 2021 | 8:01 AM

Share

ಬಿಗ್​ ಬಾಸ್​ ಮನೆಯಲ್ಲಿ ಸದಾ ಆ್ಯಕ್ಟಿವ್​ ಆಗಿರುವ ಮಂಜು ಹಲ್ಲು ಕಳೆದುಕೊಂಡಿದ್ದಾರೆ! ಬಿಗ್​ ಬಾಸ್​ ಮನೆಯಲ್ಲಿ ನೀಡಿದ ಟಾಸ್ಕ್​ ಒಂದನ್ನು ಆಡುವಾಗ ರಾಜೀವ್​ ಕೈ ತಾಗಿ ಮಂಜು ಅವರ ಹಲ್ಲೇ ಮುರಿದು ಹೋಗಿದೆ. ಸದ್ಯ ಹಲ್ಲು ಕಳೆದುಕೊಂಡ ಮಂಜು ಅವರು ತುಂಬಾನೇ ಬೇಸರಗೊಂಡಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಎರಡು ಟೀಂಗಳನ್ನು ಮಾಡಲಾಗಿದೆ. ಒಂದು ಟೀಂಗೆ ದಿವ್ಯಾ ಕ್ಯಾಪ್ಟನ್​ ಆದರೆ, ಮತ್ತೊಂದು ತಂಡಕ್ಕೆ ಶುಭಾ ಪೂಂಜಾ ಕ್ಯಾಪ್ಟನ್​. ಇಟ್ಟಿಗೆ ಸಂಗ್ರಹಿಸಿ ಗೋಪುರ ಕಟ್ಟಿ ಅದನ್ನು ಕಾಯ್ದುಕೊಳ್ಳಬೇಕು. ಸಾಮಾನ್ಯ ಬಣ್ಣದ ಇಟ್ಟಿಗೆಗೆ 1 ಅಂಕ, ಕಲರ್​ ಫುಲ್​ ಇಟ್ಟಿಗೆಗೆ 3 ಅಂಕ.

ಈ ಗೇಮ್​ ಅನ್ನು ಎರಡೂ ತಂಡದ ಆಟಗಾರರು ಉತ್ಸಾಹದಿಂದ ಆಡುತ್ತಿದ್ದರು. ವೈರಸ್​-ಮನುಷ್ಯ ಟಾಸ್ಕ್​ನಲ್ಲಿ ಎರಡೂ ತಂಡದವರು ಕಿತ್ತಾಡಿಕೊಂಡು ಇಡೀ ಟಾಸ್ಕ್​ ರದ್ದಾಗಿತ್ತು. ಇದು ಈಗ ಮತ್ತೆ ಪುನರಾವರ್ತನೆ ಆಗದಂತೆ ನೋಡಿಕೊಳ್ಳಲು ಎರಡೂ ತಂಡದವರು ಪಣ ತೊಟ್ಟಿದ್ದರು. ಅಷ್ಟೇ ಅಲ್ಲ, ಪರಸ್ಪರ ಕಿತ್ತಾಡಿಕೊಳ್ಳದಂತೆ ಸೂಚನೆ ನೀಡಲಾಗಿತ್ತು.

ಆದರೆ, ಮಂಜು ಮತ್ತು ರಾಜೀವ್​ ನಡುವೆ ಆದ ಒಂದು ಡಿಕ್ಕಿಯಿಂದ ಮಂಜು ಅವರ ಹಲ್ಲೇ ಮುರಿದು ಹೋಗಿದೆ. ಮಂಜು ಅವರು ರಾಜೀವ್​ ಹಿಂದೆ ನಿಂತಿದ್ದರು. ರಾಜೀವ್​ ಹಿಂದೆ ತಿರುಗಲು ಕೈ ಬೀಸಿದ್ದಾರೆ. ಆಗ ಕೈ ಮಂಜು ಬಾಯಿಗೆ ಹೊಡೆದಿದೆ. ಆಗ ಮಂಜು ಹಲ್ಲು ಮುರಿದು ರಾಜೀವ್ ಕೈಗೆ ನಾಟಿದೆ. ಇಬ್ಬರೂ ನೋವಿನಿಂದ ಒದ್ದಾಡಿದ್ದಾರೆ. ಮಂಜು ಬಾಯಿಯಿಂದ ಹಲ್ಲು ಉದುರುತ್ತಿದ್ದಂತೆಯೇ ರಕ್ತ ಕಾಣಿಸಿಕೊಂಡಿದೆ. ಅಷ್ಟೇ ಅಲ್ಲ, ಒಮ್ಮೆ ಅವರಿಗೆ ತಲೆ ಸುತ್ತಿದೆ. ನಂತರ ವಾಷ್​ ರೂಂಗೆ ತೆರಳಿ ಬಾಯಿ ತೊಳೆದುಕೊಂಡಿದ್ದಾರೆ.

ಇದು ಇಬ್ಬರಿಗೂ ಗೊತ್ತಾಗದೆ ಆದ ಘಟನೆ. ಹೀಗಾಗಿ, ಇಬ್ಬರೂ ಪರಸ್ಪರ ಕ್ಷಮೆ ಕೇಳಿದ್ದಾರೆ. ಅಷ್ಟೇ ಅಲ್ಲ, ತಮಗೆ ಆದ ನೋವಿನ ಘಟನೆಯ ಬಗ್ಗೆ ಪರಸ್ಪರ ವಿವರಿಸಿದ್ದಾರೆ.

ಇದನ್ನೂ ಓದಿ: ‘ನನ್ನ ಜೀವನದಲ್ಲಿ ದಿವ್ಯಾಗೆ ಶಾಶ್ವತ ಸ್ಥಾನ; ಮೊದಲು ಇವರೇ, ಕೊನೆಯೂ ಇವರೇ’! ಮಂಜು ಲವ್​ ಇನ್ನಷ್ಟು ಸೀರಿಯಸ್​

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?