ನಮ್ಮಣ್ಣನ ಕೂದಲ ಸುದ್ದಿಗೆ ಬಂದ್ರೆ ಸರಿ ಇರಲ್ಲ; ಬಿಗ್​ ಬಾಸ್​ಗೆ ಮಂಜು ಎಚ್ಚರಿಕೆ

ಬಿಗ್​ ಬಾಸ್​ ಮನೆಯಲ್ಲಿ ಗುರುವಾರ (ಮಾ.18) ಮನೆ ಮಂದಿಯೆಲ್ಲ ಕೂತು ಮಾತನಾಡುತ್ತಿದ್ದರು. ಈ ವೇಳೆ ರಾಜೀವ್​ ತಮ್ಮ ಉದ್ದ ಕೂದಲನ್ನು ಬಿಚ್ಚಿದ್ದಾರೆ. ಅವರ ನೀಳ ಕೂದಲನ್ನು ಕಂಡು ಮನೆ ಮಂದಿಯೆಲ್ಲ ಅಚ್ಚರಿಗೊಂಡಿದ್ದಾರೆ.

ನಮ್ಮಣ್ಣನ ಕೂದಲ ಸುದ್ದಿಗೆ ಬಂದ್ರೆ ಸರಿ ಇರಲ್ಲ; ಬಿಗ್​ ಬಾಸ್​ಗೆ ಮಂಜು ಎಚ್ಚರಿಕೆ
ಮಂಜು ಪಾವಗಡ
Follow us
| Updated By: ಮದನ್​ ಕುಮಾರ್​

Updated on: Mar 19, 2021 | 8:22 AM

ಕಳೆದ ಬಾರಿಯ ಸೀಸನ್​ನಲ್ಲಿ ಶೈನ್​ ಶೆಟ್ಟಿ ಕೂದಲು-ಗಡ್ಡ ಬಿಟ್ಟಿದ್ದರು. ಇದರ ಮೇಲೆ ಬಿಗ್​ ಬಾಸ್​ ಕಣ್ಣು ಬಿದ್ದಿತ್ತು. ಅಷ್ಟೇ ಅಲ್ಲ, ಒಂದು ಸೀಕ್ರೆಟ್​ ಟಾಸ್ಕ್​ ನೀಡಿ ಅದನ್ನು ಕತ್ತರಿಸಿಬಿಟ್ಟಿದ್ದರು. ಈ ಬಾರಿ ಬಿಗ್​​ ಬಾಸ್​ ಮನೆ ಒಳಗೆ ಉದ್ದ ಕೂದಲ ಬಿಟ್ಟೋರು ರಾಜೀವ್​. ಇವರ ಕೂದಲ ಮೇಲೆ ಮನೆಯವರ ಕಣ್ಣು ಬಿದ್ದಿದೆ. ಅಷ್ಟೇ ಅಲ್ಲ, ಈ ವಿಚಾರದಲ್ಲಿ ಮಂಜು ಪಾವಗಡ ಎಚ್ಚರಿಕೆಯನ್ನು ಕೂಡ ನೀಡಿದ್ದಾರೆ. ಬಿಗ್​ ಬಾಸ್​ಮನೆಯಲ್ಲಿ ಗುರುವಾರ (ಮಾ.18) ಮನೆ ಮಂದಿಯೆಲ್ಲ ಕೂತು ಮಾತನಾಡುತ್ತಿದ್ದರು. ಈ ವೇಳೆ ರಾಜೀವ್​ ತಮ್ಮ ಉದ್ದ ಕೂದಲನ್ನು ಬಿಚ್ಚಿದ್ದಾರೆ. ಅವರ ನೀಳ ಕೂದಲನ್ನು ನೋಡಿ ಮನೆ ಮಂದಿಯೆಲ್ಲ ಅಚ್ಚರಿಗೊಂಡಿದ್ದಾರೆ.

ಈ ವೇಳೆ ಮಾತನಾಡಿದ್ದ ಮಂಜು, ರಾಜೀವ್​ ಬೇಸಿಗೆಯಲ್ಲಿ ಇಷ್ಟೊಂದು ಉದ್ದ ಕೂದಲ ಬಿಡಬಾರದು. ಬಿಗ್​ ಬಾಸ್​ ಮನೆಯಲ್ಲಿ ನಮಗೆ ಬೇಕಷ್ಟು ಆಹಾರ ಸಿಗಲ್ಲ. ಹೀಗಾಗಿ, ಈ ಆಹಾರವನ್ನೆಲ್ಲ ನಿಮ್ಮ ಕೂದಲೇ ತಿಂದು ಬಿಡುತ್ತದೆ. ಹೀಗಾಗಿ ಕೂದಲನ್ನು ಕತ್ತರಿಸಿ ಬಿಡಿ ಎಂದರು.

ಆಗ ರಾಜೀವ್​, ನನ್ನ ಕೂದಲ ಮೇಲೇಕೆ ಕಣ್ಣು ಎಂದು ಪ್ರಶ್ನೆ ಮಾಡಿದರು. ಆಗ ಮಂಜು, ನಾನು ಕೂದಲ ಮೇಲೆ ಕಣ್ಣನ್ನು ಹಾಕಿಲ್ಲ. ದಯವಿಟ್ಟು ಹಾಗೆ ತಿಳಿಬೇಡಿ ಎಂದು ಕೇಳಿದರು. ಈ ವೇಳೆ ಮಂಜು, ಅಯ್ಯೋ ಆಯ್ತಣ್ಣ ಇನ್ನು ಹಾಗೆ ಹೇಳುವುದಿಲ್ಲ ಎಂದರು. ಅಷ್ಟೇ ಅಲ್ಲ ಬಿಗ್​ ಬಾಸ್​ಗೆ ಒಂದು ಎಚ್ಚರಿಕೆಯನ್ನೂ ನೀಡಿದರು. ‘ರಾಜೀವ್​ ಅವರ ಕೂದಲಿಗೆ ಏನೂ ಆಗಬಾರದು. ಬಿಗ್​ ಬಾಸ್​… ನಮ್ಮಣ್ಣನ ಕೂದಲ ಸುದ್ದಿಗೆ ಬಂದ್ರೆ ಸರಿ ಇರಲ್ಲ’ ಎಂದು ಹೇಳಿದರು. ಇದನ್ನು ಕೇಳಿದ ರಾಜೀವ್​, ನೀವೆಲ್ಲರೂ ಸೇರಿ ನನ್ನ ಕೂದಲಿಗೆ ಒಂದು ಗತಿ ಕಾಣಿಸೋದು ಖಚಿತ ಎಂದು ನಕ್ಕರು.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ-ಮಂಜು ರೊಮ್ಯಾನ್ಸ್​ ಕಂಡು ನಾಚಿ ನೀರಾದ ಪುಟಾಣಿ ವಿಶ್ವ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ