AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮಣ್ಣನ ಕೂದಲ ಸುದ್ದಿಗೆ ಬಂದ್ರೆ ಸರಿ ಇರಲ್ಲ; ಬಿಗ್​ ಬಾಸ್​ಗೆ ಮಂಜು ಎಚ್ಚರಿಕೆ

ಬಿಗ್​ ಬಾಸ್​ ಮನೆಯಲ್ಲಿ ಗುರುವಾರ (ಮಾ.18) ಮನೆ ಮಂದಿಯೆಲ್ಲ ಕೂತು ಮಾತನಾಡುತ್ತಿದ್ದರು. ಈ ವೇಳೆ ರಾಜೀವ್​ ತಮ್ಮ ಉದ್ದ ಕೂದಲನ್ನು ಬಿಚ್ಚಿದ್ದಾರೆ. ಅವರ ನೀಳ ಕೂದಲನ್ನು ಕಂಡು ಮನೆ ಮಂದಿಯೆಲ್ಲ ಅಚ್ಚರಿಗೊಂಡಿದ್ದಾರೆ.

ನಮ್ಮಣ್ಣನ ಕೂದಲ ಸುದ್ದಿಗೆ ಬಂದ್ರೆ ಸರಿ ಇರಲ್ಲ; ಬಿಗ್​ ಬಾಸ್​ಗೆ ಮಂಜು ಎಚ್ಚರಿಕೆ
ಮಂಜು ಪಾವಗಡ
ರಾಜೇಶ್ ದುಗ್ಗುಮನೆ
| Edited By: |

Updated on: Mar 19, 2021 | 8:22 AM

Share

ಕಳೆದ ಬಾರಿಯ ಸೀಸನ್​ನಲ್ಲಿ ಶೈನ್​ ಶೆಟ್ಟಿ ಕೂದಲು-ಗಡ್ಡ ಬಿಟ್ಟಿದ್ದರು. ಇದರ ಮೇಲೆ ಬಿಗ್​ ಬಾಸ್​ ಕಣ್ಣು ಬಿದ್ದಿತ್ತು. ಅಷ್ಟೇ ಅಲ್ಲ, ಒಂದು ಸೀಕ್ರೆಟ್​ ಟಾಸ್ಕ್​ ನೀಡಿ ಅದನ್ನು ಕತ್ತರಿಸಿಬಿಟ್ಟಿದ್ದರು. ಈ ಬಾರಿ ಬಿಗ್​​ ಬಾಸ್​ ಮನೆ ಒಳಗೆ ಉದ್ದ ಕೂದಲ ಬಿಟ್ಟೋರು ರಾಜೀವ್​. ಇವರ ಕೂದಲ ಮೇಲೆ ಮನೆಯವರ ಕಣ್ಣು ಬಿದ್ದಿದೆ. ಅಷ್ಟೇ ಅಲ್ಲ, ಈ ವಿಚಾರದಲ್ಲಿ ಮಂಜು ಪಾವಗಡ ಎಚ್ಚರಿಕೆಯನ್ನು ಕೂಡ ನೀಡಿದ್ದಾರೆ. ಬಿಗ್​ ಬಾಸ್​ಮನೆಯಲ್ಲಿ ಗುರುವಾರ (ಮಾ.18) ಮನೆ ಮಂದಿಯೆಲ್ಲ ಕೂತು ಮಾತನಾಡುತ್ತಿದ್ದರು. ಈ ವೇಳೆ ರಾಜೀವ್​ ತಮ್ಮ ಉದ್ದ ಕೂದಲನ್ನು ಬಿಚ್ಚಿದ್ದಾರೆ. ಅವರ ನೀಳ ಕೂದಲನ್ನು ನೋಡಿ ಮನೆ ಮಂದಿಯೆಲ್ಲ ಅಚ್ಚರಿಗೊಂಡಿದ್ದಾರೆ.

ಈ ವೇಳೆ ಮಾತನಾಡಿದ್ದ ಮಂಜು, ರಾಜೀವ್​ ಬೇಸಿಗೆಯಲ್ಲಿ ಇಷ್ಟೊಂದು ಉದ್ದ ಕೂದಲ ಬಿಡಬಾರದು. ಬಿಗ್​ ಬಾಸ್​ ಮನೆಯಲ್ಲಿ ನಮಗೆ ಬೇಕಷ್ಟು ಆಹಾರ ಸಿಗಲ್ಲ. ಹೀಗಾಗಿ, ಈ ಆಹಾರವನ್ನೆಲ್ಲ ನಿಮ್ಮ ಕೂದಲೇ ತಿಂದು ಬಿಡುತ್ತದೆ. ಹೀಗಾಗಿ ಕೂದಲನ್ನು ಕತ್ತರಿಸಿ ಬಿಡಿ ಎಂದರು.

ಆಗ ರಾಜೀವ್​, ನನ್ನ ಕೂದಲ ಮೇಲೇಕೆ ಕಣ್ಣು ಎಂದು ಪ್ರಶ್ನೆ ಮಾಡಿದರು. ಆಗ ಮಂಜು, ನಾನು ಕೂದಲ ಮೇಲೆ ಕಣ್ಣನ್ನು ಹಾಕಿಲ್ಲ. ದಯವಿಟ್ಟು ಹಾಗೆ ತಿಳಿಬೇಡಿ ಎಂದು ಕೇಳಿದರು. ಈ ವೇಳೆ ಮಂಜು, ಅಯ್ಯೋ ಆಯ್ತಣ್ಣ ಇನ್ನು ಹಾಗೆ ಹೇಳುವುದಿಲ್ಲ ಎಂದರು. ಅಷ್ಟೇ ಅಲ್ಲ ಬಿಗ್​ ಬಾಸ್​ಗೆ ಒಂದು ಎಚ್ಚರಿಕೆಯನ್ನೂ ನೀಡಿದರು. ‘ರಾಜೀವ್​ ಅವರ ಕೂದಲಿಗೆ ಏನೂ ಆಗಬಾರದು. ಬಿಗ್​ ಬಾಸ್​… ನಮ್ಮಣ್ಣನ ಕೂದಲ ಸುದ್ದಿಗೆ ಬಂದ್ರೆ ಸರಿ ಇರಲ್ಲ’ ಎಂದು ಹೇಳಿದರು. ಇದನ್ನು ಕೇಳಿದ ರಾಜೀವ್​, ನೀವೆಲ್ಲರೂ ಸೇರಿ ನನ್ನ ಕೂದಲಿಗೆ ಒಂದು ಗತಿ ಕಾಣಿಸೋದು ಖಚಿತ ಎಂದು ನಕ್ಕರು.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ-ಮಂಜು ರೊಮ್ಯಾನ್ಸ್​ ಕಂಡು ನಾಚಿ ನೀರಾದ ಪುಟಾಣಿ ವಿಶ್ವ

Follow Us
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ