AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮಣ್ಣನ ಕೂದಲ ಸುದ್ದಿಗೆ ಬಂದ್ರೆ ಸರಿ ಇರಲ್ಲ; ಬಿಗ್​ ಬಾಸ್​ಗೆ ಮಂಜು ಎಚ್ಚರಿಕೆ

ಬಿಗ್​ ಬಾಸ್​ ಮನೆಯಲ್ಲಿ ಗುರುವಾರ (ಮಾ.18) ಮನೆ ಮಂದಿಯೆಲ್ಲ ಕೂತು ಮಾತನಾಡುತ್ತಿದ್ದರು. ಈ ವೇಳೆ ರಾಜೀವ್​ ತಮ್ಮ ಉದ್ದ ಕೂದಲನ್ನು ಬಿಚ್ಚಿದ್ದಾರೆ. ಅವರ ನೀಳ ಕೂದಲನ್ನು ಕಂಡು ಮನೆ ಮಂದಿಯೆಲ್ಲ ಅಚ್ಚರಿಗೊಂಡಿದ್ದಾರೆ.

ನಮ್ಮಣ್ಣನ ಕೂದಲ ಸುದ್ದಿಗೆ ಬಂದ್ರೆ ಸರಿ ಇರಲ್ಲ; ಬಿಗ್​ ಬಾಸ್​ಗೆ ಮಂಜು ಎಚ್ಚರಿಕೆ
ಮಂಜು ಪಾವಗಡ
ರಾಜೇಶ್ ದುಗ್ಗುಮನೆ
| Edited By: |

Updated on: Mar 19, 2021 | 8:22 AM

Share

ಕಳೆದ ಬಾರಿಯ ಸೀಸನ್​ನಲ್ಲಿ ಶೈನ್​ ಶೆಟ್ಟಿ ಕೂದಲು-ಗಡ್ಡ ಬಿಟ್ಟಿದ್ದರು. ಇದರ ಮೇಲೆ ಬಿಗ್​ ಬಾಸ್​ ಕಣ್ಣು ಬಿದ್ದಿತ್ತು. ಅಷ್ಟೇ ಅಲ್ಲ, ಒಂದು ಸೀಕ್ರೆಟ್​ ಟಾಸ್ಕ್​ ನೀಡಿ ಅದನ್ನು ಕತ್ತರಿಸಿಬಿಟ್ಟಿದ್ದರು. ಈ ಬಾರಿ ಬಿಗ್​​ ಬಾಸ್​ ಮನೆ ಒಳಗೆ ಉದ್ದ ಕೂದಲ ಬಿಟ್ಟೋರು ರಾಜೀವ್​. ಇವರ ಕೂದಲ ಮೇಲೆ ಮನೆಯವರ ಕಣ್ಣು ಬಿದ್ದಿದೆ. ಅಷ್ಟೇ ಅಲ್ಲ, ಈ ವಿಚಾರದಲ್ಲಿ ಮಂಜು ಪಾವಗಡ ಎಚ್ಚರಿಕೆಯನ್ನು ಕೂಡ ನೀಡಿದ್ದಾರೆ. ಬಿಗ್​ ಬಾಸ್​ಮನೆಯಲ್ಲಿ ಗುರುವಾರ (ಮಾ.18) ಮನೆ ಮಂದಿಯೆಲ್ಲ ಕೂತು ಮಾತನಾಡುತ್ತಿದ್ದರು. ಈ ವೇಳೆ ರಾಜೀವ್​ ತಮ್ಮ ಉದ್ದ ಕೂದಲನ್ನು ಬಿಚ್ಚಿದ್ದಾರೆ. ಅವರ ನೀಳ ಕೂದಲನ್ನು ನೋಡಿ ಮನೆ ಮಂದಿಯೆಲ್ಲ ಅಚ್ಚರಿಗೊಂಡಿದ್ದಾರೆ.

ಈ ವೇಳೆ ಮಾತನಾಡಿದ್ದ ಮಂಜು, ರಾಜೀವ್​ ಬೇಸಿಗೆಯಲ್ಲಿ ಇಷ್ಟೊಂದು ಉದ್ದ ಕೂದಲ ಬಿಡಬಾರದು. ಬಿಗ್​ ಬಾಸ್​ ಮನೆಯಲ್ಲಿ ನಮಗೆ ಬೇಕಷ್ಟು ಆಹಾರ ಸಿಗಲ್ಲ. ಹೀಗಾಗಿ, ಈ ಆಹಾರವನ್ನೆಲ್ಲ ನಿಮ್ಮ ಕೂದಲೇ ತಿಂದು ಬಿಡುತ್ತದೆ. ಹೀಗಾಗಿ ಕೂದಲನ್ನು ಕತ್ತರಿಸಿ ಬಿಡಿ ಎಂದರು.

ಆಗ ರಾಜೀವ್​, ನನ್ನ ಕೂದಲ ಮೇಲೇಕೆ ಕಣ್ಣು ಎಂದು ಪ್ರಶ್ನೆ ಮಾಡಿದರು. ಆಗ ಮಂಜು, ನಾನು ಕೂದಲ ಮೇಲೆ ಕಣ್ಣನ್ನು ಹಾಕಿಲ್ಲ. ದಯವಿಟ್ಟು ಹಾಗೆ ತಿಳಿಬೇಡಿ ಎಂದು ಕೇಳಿದರು. ಈ ವೇಳೆ ಮಂಜು, ಅಯ್ಯೋ ಆಯ್ತಣ್ಣ ಇನ್ನು ಹಾಗೆ ಹೇಳುವುದಿಲ್ಲ ಎಂದರು. ಅಷ್ಟೇ ಅಲ್ಲ ಬಿಗ್​ ಬಾಸ್​ಗೆ ಒಂದು ಎಚ್ಚರಿಕೆಯನ್ನೂ ನೀಡಿದರು. ‘ರಾಜೀವ್​ ಅವರ ಕೂದಲಿಗೆ ಏನೂ ಆಗಬಾರದು. ಬಿಗ್​ ಬಾಸ್​… ನಮ್ಮಣ್ಣನ ಕೂದಲ ಸುದ್ದಿಗೆ ಬಂದ್ರೆ ಸರಿ ಇರಲ್ಲ’ ಎಂದು ಹೇಳಿದರು. ಇದನ್ನು ಕೇಳಿದ ರಾಜೀವ್​, ನೀವೆಲ್ಲರೂ ಸೇರಿ ನನ್ನ ಕೂದಲಿಗೆ ಒಂದು ಗತಿ ಕಾಣಿಸೋದು ಖಚಿತ ಎಂದು ನಕ್ಕರು.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ-ಮಂಜು ರೊಮ್ಯಾನ್ಸ್​ ಕಂಡು ನಾಚಿ ನೀರಾದ ಪುಟಾಣಿ ವಿಶ್ವ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ