AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮಣ್ಣನ ಕೂದಲ ಸುದ್ದಿಗೆ ಬಂದ್ರೆ ಸರಿ ಇರಲ್ಲ; ಬಿಗ್​ ಬಾಸ್​ಗೆ ಮಂಜು ಎಚ್ಚರಿಕೆ

ಬಿಗ್​ ಬಾಸ್​ ಮನೆಯಲ್ಲಿ ಗುರುವಾರ (ಮಾ.18) ಮನೆ ಮಂದಿಯೆಲ್ಲ ಕೂತು ಮಾತನಾಡುತ್ತಿದ್ದರು. ಈ ವೇಳೆ ರಾಜೀವ್​ ತಮ್ಮ ಉದ್ದ ಕೂದಲನ್ನು ಬಿಚ್ಚಿದ್ದಾರೆ. ಅವರ ನೀಳ ಕೂದಲನ್ನು ಕಂಡು ಮನೆ ಮಂದಿಯೆಲ್ಲ ಅಚ್ಚರಿಗೊಂಡಿದ್ದಾರೆ.

ನಮ್ಮಣ್ಣನ ಕೂದಲ ಸುದ್ದಿಗೆ ಬಂದ್ರೆ ಸರಿ ಇರಲ್ಲ; ಬಿಗ್​ ಬಾಸ್​ಗೆ ಮಂಜು ಎಚ್ಚರಿಕೆ
ಮಂಜು ಪಾವಗಡ
ರಾಜೇಶ್ ದುಗ್ಗುಮನೆ
| Edited By: |

Updated on: Mar 19, 2021 | 8:22 AM

Share

ಕಳೆದ ಬಾರಿಯ ಸೀಸನ್​ನಲ್ಲಿ ಶೈನ್​ ಶೆಟ್ಟಿ ಕೂದಲು-ಗಡ್ಡ ಬಿಟ್ಟಿದ್ದರು. ಇದರ ಮೇಲೆ ಬಿಗ್​ ಬಾಸ್​ ಕಣ್ಣು ಬಿದ್ದಿತ್ತು. ಅಷ್ಟೇ ಅಲ್ಲ, ಒಂದು ಸೀಕ್ರೆಟ್​ ಟಾಸ್ಕ್​ ನೀಡಿ ಅದನ್ನು ಕತ್ತರಿಸಿಬಿಟ್ಟಿದ್ದರು. ಈ ಬಾರಿ ಬಿಗ್​​ ಬಾಸ್​ ಮನೆ ಒಳಗೆ ಉದ್ದ ಕೂದಲ ಬಿಟ್ಟೋರು ರಾಜೀವ್​. ಇವರ ಕೂದಲ ಮೇಲೆ ಮನೆಯವರ ಕಣ್ಣು ಬಿದ್ದಿದೆ. ಅಷ್ಟೇ ಅಲ್ಲ, ಈ ವಿಚಾರದಲ್ಲಿ ಮಂಜು ಪಾವಗಡ ಎಚ್ಚರಿಕೆಯನ್ನು ಕೂಡ ನೀಡಿದ್ದಾರೆ. ಬಿಗ್​ ಬಾಸ್​ಮನೆಯಲ್ಲಿ ಗುರುವಾರ (ಮಾ.18) ಮನೆ ಮಂದಿಯೆಲ್ಲ ಕೂತು ಮಾತನಾಡುತ್ತಿದ್ದರು. ಈ ವೇಳೆ ರಾಜೀವ್​ ತಮ್ಮ ಉದ್ದ ಕೂದಲನ್ನು ಬಿಚ್ಚಿದ್ದಾರೆ. ಅವರ ನೀಳ ಕೂದಲನ್ನು ನೋಡಿ ಮನೆ ಮಂದಿಯೆಲ್ಲ ಅಚ್ಚರಿಗೊಂಡಿದ್ದಾರೆ.

ಈ ವೇಳೆ ಮಾತನಾಡಿದ್ದ ಮಂಜು, ರಾಜೀವ್​ ಬೇಸಿಗೆಯಲ್ಲಿ ಇಷ್ಟೊಂದು ಉದ್ದ ಕೂದಲ ಬಿಡಬಾರದು. ಬಿಗ್​ ಬಾಸ್​ ಮನೆಯಲ್ಲಿ ನಮಗೆ ಬೇಕಷ್ಟು ಆಹಾರ ಸಿಗಲ್ಲ. ಹೀಗಾಗಿ, ಈ ಆಹಾರವನ್ನೆಲ್ಲ ನಿಮ್ಮ ಕೂದಲೇ ತಿಂದು ಬಿಡುತ್ತದೆ. ಹೀಗಾಗಿ ಕೂದಲನ್ನು ಕತ್ತರಿಸಿ ಬಿಡಿ ಎಂದರು.

ಆಗ ರಾಜೀವ್​, ನನ್ನ ಕೂದಲ ಮೇಲೇಕೆ ಕಣ್ಣು ಎಂದು ಪ್ರಶ್ನೆ ಮಾಡಿದರು. ಆಗ ಮಂಜು, ನಾನು ಕೂದಲ ಮೇಲೆ ಕಣ್ಣನ್ನು ಹಾಕಿಲ್ಲ. ದಯವಿಟ್ಟು ಹಾಗೆ ತಿಳಿಬೇಡಿ ಎಂದು ಕೇಳಿದರು. ಈ ವೇಳೆ ಮಂಜು, ಅಯ್ಯೋ ಆಯ್ತಣ್ಣ ಇನ್ನು ಹಾಗೆ ಹೇಳುವುದಿಲ್ಲ ಎಂದರು. ಅಷ್ಟೇ ಅಲ್ಲ ಬಿಗ್​ ಬಾಸ್​ಗೆ ಒಂದು ಎಚ್ಚರಿಕೆಯನ್ನೂ ನೀಡಿದರು. ‘ರಾಜೀವ್​ ಅವರ ಕೂದಲಿಗೆ ಏನೂ ಆಗಬಾರದು. ಬಿಗ್​ ಬಾಸ್​… ನಮ್ಮಣ್ಣನ ಕೂದಲ ಸುದ್ದಿಗೆ ಬಂದ್ರೆ ಸರಿ ಇರಲ್ಲ’ ಎಂದು ಹೇಳಿದರು. ಇದನ್ನು ಕೇಳಿದ ರಾಜೀವ್​, ನೀವೆಲ್ಲರೂ ಸೇರಿ ನನ್ನ ಕೂದಲಿಗೆ ಒಂದು ಗತಿ ಕಾಣಿಸೋದು ಖಚಿತ ಎಂದು ನಕ್ಕರು.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ-ಮಂಜು ರೊಮ್ಯಾನ್ಸ್​ ಕಂಡು ನಾಚಿ ನೀರಾದ ಪುಟಾಣಿ ವಿಶ್ವ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು