AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಂಜು ವಿನ್ನರ್​, ವೈಷ್ಣವಿ ರನ್ನರ್​ ಅಪ್​’; ಬಿಗ್​ ಬಾಸ್​ ಸ್ಪರ್ಧಿ ನುಡಿದ್ರು ಭವಿಷ್ಯ

ಬಿಗ್​ ಬಾಸ್​ನಲ್ಲಿ ಅರವಿಂದ್​ ಜತೆಗೆ ನಿಧಿ ಕಿತ್ತಾಡಿಕೊಂಡಿದ್ದರು. ಅರವಿಂದ್​ ಮಾಡಿದ ಸಾಧನೆಗೆ ಅವಮಾನ ಮಾಡುವ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದರು. ಮನೆಯಿಂದ ಹೊರ ಹೋಗೋಕೆ ಇದು ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ.

‘ಮಂಜು ವಿನ್ನರ್​, ವೈಷ್ಣವಿ ರನ್ನರ್​ ಅಪ್​’; ಬಿಗ್​ ಬಾಸ್​ ಸ್ಪರ್ಧಿ ನುಡಿದ್ರು ಭವಿಷ್ಯ
ವೈಷ್ಣವಿ -ಮಂಜು
TV9 Web
| Edited By: |

Updated on: Jul 05, 2021 | 11:00 AM

Share

‘ಕನ್ನಡ ಬಿಗ್​​ ಬಾಸ್ ಸೀಸನ್​ 8’ 83 ದಿನಗಳನ್ನು ಪೂರೈಸಿ ಮುನ್ನುಗ್ಗುತ್ತಿದೆ. ಮನೆಯಲ್ಲಿ 11 ಸ್ಪರ್ಧಿಗಳು ಮಾತ್ರ ಉಳಿದುಕೊಂಡಿದ್ದು, ಯಾರು ಗೆಲ್ಲಲಿದ್ದಾರೆ ಎನ್ನುವ ಬಗ್ಗೆ ಚರ್ಚೆ ಜೋರಾಗಿದೆ. ಈ ಮಧ್ಯೆ ಕಳೆದ ವಾರ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್​ ಆದ ನಿಧಿ ಸುಬ್ಬಯ್ಯ ಈ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಸೀಸನ್​ 8 ಯಾರು ಗೆಲ್ಲಬಹುದು ಎಂದು ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಬಿಗ್​ ಬಾಸ್​ನಲ್ಲಿ ಅರವಿಂದ್​ ಜತೆಗೆ ನಿಧಿ ಕಿತ್ತಾಡಿಕೊಂಡಿದ್ದರು. ಅರವಿಂದ್​ ಮಾಡಿದ ಸಾಧನೆಗೆ ಅವಮಾನ ಮಾಡುವ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದರು. ಮನೆಯಿಂದ ಹೊರ ಹೋಗೋಕೆ ಇದು ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ನಿಧಿ ಮನೆಯಿಂದ ಹೊರ ಬರುತ್ತಿದ್ದಂತೆ, ಶುಭಾ ಪೂಂಜಾ ತುಂಬಾನೇ ಕಣ್ಣೀರು ಹಾಕಿದ್ದಾರೆ. ನಂತರ ನಿಧಿ ಅವರು ವೇದಿಕೆ ಮೇಲೆ ಕಿಚ್ಚ ಸುದೀಪ್​ ಅವರ ಜತೆ ಮಾತುಕತೆ ನಡೆಸಿದ್ದಾರೆ.

‘ನಿಮ್ಮ ಪ್ರಕಾರ ಫೈನಲ್​ನಲ್ಲಿ ಯಾರಿರಬಹುದು ಎಂದು ನಿಮಗನ್ನಿಸುತ್ತದೆ’ ಎನ್ನುವ ಪ್ರಶ್ನೆಯನ್ನು ಸುದೀಪ್​ ಕೇಳಿದರು. ‘ದಿವ್ಯಾ ಉರುಡುಗ, ಪ್ರಶಾಂತ್ ಸಂಬರಗಿ,​ ಮಂಜು, ಶುಭಾ, ವೈಷ್ಣವಿ’ ಎನ್ನುವ ಉತ್ತರ ನಿಧಿ ಕಡೆಯಿಂದ ಬಂತು. ಕೊನೆಯದಾಗಿ ಉಳಿಯೋ ಇಬ್ಬರು ಸ್ಪರ್ಧಿಗಳ ಹೆಸರನ್ನು ಹೇಳಿ ಎಂದು ಸುದೀಪ್​ ಕೇಳಿದರು. ‘ಮಂಜು ಮತ್ತು ವೈಷ್ಣವಿ ಕೊನೆಯಲ್ಲಿ ಉಳಿಯುತ್ತಾರೆ. ಇದರಲ್ಲಿ ಗೆಲ್ಲೋದು ಮಂಜು’ ಎಂದು ನಿಧಿ ಹೇಳಿದರು.

‘ಬಿಗ್​ ಬಾಸ್​ ಮನೆಯಿಂದ ಈ ವಾರ ಯಾರು ಹೊರ ಹೋಗಬೇಕು’ ಎಂದು ಕೇಳಿದ ಪ್ರಶ್ನೆಗೆ ಚಕ್ರವರ್ತಿ ಅವರ ಹೆಸರನ್ನು ನಿಧಿ ತೆಗೆದುಕೊಂಡರು. ಮನೆಯಲ್ಲಿ ಚಕ್ರವರ್ತಿ ನಡೆದುಕೊಳ್ಳುತ್ತಿರುವ ರೀತಿ ಅನೇಕರಿಗೆ ಇಷ್ಟವಾಗುತ್ತಿಲ್ಲ. ಈ ಕಾರಣಕ್ಕೆ ನಿಧಿ ಈ ರೀತಿ ಹೇಳಿದ್ದಾರೆ. ಯಾರು ಬಿಗ್​ ಬಾಸ್​ ಮನೆಯಿಂದ ಹೊರ ಹೋಗುತ್ತಾರೆ ಎಂದು ನಿಮಗನಿಸುತ್ತದೆ ಎನ್ನುವ ಪ್ರಶ್ನೆಯನ್ನೂ ನಿಧಿ ಮುಂದೆ ಇಡಲಾಯಿತು. ಇದಕ್ಕೆ ಅವರು ಪ್ರಿಯಾಂಕಾ ತಿಮ್ಮೇಶ್​ ಹೆಸರನ್ನು ಸೂಚಿಸಿದರು. ಅವರಿಗೆ ಕಡಿಮೆ ಸಮಯ ಸಿಕ್ಕಿದೆ. ಹೀಗಾಗಿ, ಅವರು ಮುಂದಿನ ವಾರ ಹೊರ ಹೋಗುತ್ತಾರೆ ಎಂದು ನನಗನ್ನಿಸುತ್ತದೆ ಎಂದರು.

ಇದನ್ನೂ ಓದಿ: ಬಿಗ್ ಬಾಸ್ ಮನೆಯಿಂದ ನಿಧಿ ಸುಬ್ಬಯ್ಯ ಎಲಿಮಿನೇಟ್ ಆಗೋಕೆ ಆ ಒಂದು ಮಾತು ಕಾರಣವಾಯ್ತು

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!