AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಂಜು ವಿನ್ನರ್​, ವೈಷ್ಣವಿ ರನ್ನರ್​ ಅಪ್​’; ಬಿಗ್​ ಬಾಸ್​ ಸ್ಪರ್ಧಿ ನುಡಿದ್ರು ಭವಿಷ್ಯ

ಬಿಗ್​ ಬಾಸ್​ನಲ್ಲಿ ಅರವಿಂದ್​ ಜತೆಗೆ ನಿಧಿ ಕಿತ್ತಾಡಿಕೊಂಡಿದ್ದರು. ಅರವಿಂದ್​ ಮಾಡಿದ ಸಾಧನೆಗೆ ಅವಮಾನ ಮಾಡುವ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದರು. ಮನೆಯಿಂದ ಹೊರ ಹೋಗೋಕೆ ಇದು ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ.

‘ಮಂಜು ವಿನ್ನರ್​, ವೈಷ್ಣವಿ ರನ್ನರ್​ ಅಪ್​’; ಬಿಗ್​ ಬಾಸ್​ ಸ್ಪರ್ಧಿ ನುಡಿದ್ರು ಭವಿಷ್ಯ
ವೈಷ್ಣವಿ -ಮಂಜು
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jul 05, 2021 | 11:00 AM

Share

‘ಕನ್ನಡ ಬಿಗ್​​ ಬಾಸ್ ಸೀಸನ್​ 8’ 83 ದಿನಗಳನ್ನು ಪೂರೈಸಿ ಮುನ್ನುಗ್ಗುತ್ತಿದೆ. ಮನೆಯಲ್ಲಿ 11 ಸ್ಪರ್ಧಿಗಳು ಮಾತ್ರ ಉಳಿದುಕೊಂಡಿದ್ದು, ಯಾರು ಗೆಲ್ಲಲಿದ್ದಾರೆ ಎನ್ನುವ ಬಗ್ಗೆ ಚರ್ಚೆ ಜೋರಾಗಿದೆ. ಈ ಮಧ್ಯೆ ಕಳೆದ ವಾರ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್​ ಆದ ನಿಧಿ ಸುಬ್ಬಯ್ಯ ಈ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಸೀಸನ್​ 8 ಯಾರು ಗೆಲ್ಲಬಹುದು ಎಂದು ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಬಿಗ್​ ಬಾಸ್​ನಲ್ಲಿ ಅರವಿಂದ್​ ಜತೆಗೆ ನಿಧಿ ಕಿತ್ತಾಡಿಕೊಂಡಿದ್ದರು. ಅರವಿಂದ್​ ಮಾಡಿದ ಸಾಧನೆಗೆ ಅವಮಾನ ಮಾಡುವ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದರು. ಮನೆಯಿಂದ ಹೊರ ಹೋಗೋಕೆ ಇದು ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ನಿಧಿ ಮನೆಯಿಂದ ಹೊರ ಬರುತ್ತಿದ್ದಂತೆ, ಶುಭಾ ಪೂಂಜಾ ತುಂಬಾನೇ ಕಣ್ಣೀರು ಹಾಕಿದ್ದಾರೆ. ನಂತರ ನಿಧಿ ಅವರು ವೇದಿಕೆ ಮೇಲೆ ಕಿಚ್ಚ ಸುದೀಪ್​ ಅವರ ಜತೆ ಮಾತುಕತೆ ನಡೆಸಿದ್ದಾರೆ.

‘ನಿಮ್ಮ ಪ್ರಕಾರ ಫೈನಲ್​ನಲ್ಲಿ ಯಾರಿರಬಹುದು ಎಂದು ನಿಮಗನ್ನಿಸುತ್ತದೆ’ ಎನ್ನುವ ಪ್ರಶ್ನೆಯನ್ನು ಸುದೀಪ್​ ಕೇಳಿದರು. ‘ದಿವ್ಯಾ ಉರುಡುಗ, ಪ್ರಶಾಂತ್ ಸಂಬರಗಿ,​ ಮಂಜು, ಶುಭಾ, ವೈಷ್ಣವಿ’ ಎನ್ನುವ ಉತ್ತರ ನಿಧಿ ಕಡೆಯಿಂದ ಬಂತು. ಕೊನೆಯದಾಗಿ ಉಳಿಯೋ ಇಬ್ಬರು ಸ್ಪರ್ಧಿಗಳ ಹೆಸರನ್ನು ಹೇಳಿ ಎಂದು ಸುದೀಪ್​ ಕೇಳಿದರು. ‘ಮಂಜು ಮತ್ತು ವೈಷ್ಣವಿ ಕೊನೆಯಲ್ಲಿ ಉಳಿಯುತ್ತಾರೆ. ಇದರಲ್ಲಿ ಗೆಲ್ಲೋದು ಮಂಜು’ ಎಂದು ನಿಧಿ ಹೇಳಿದರು.

‘ಬಿಗ್​ ಬಾಸ್​ ಮನೆಯಿಂದ ಈ ವಾರ ಯಾರು ಹೊರ ಹೋಗಬೇಕು’ ಎಂದು ಕೇಳಿದ ಪ್ರಶ್ನೆಗೆ ಚಕ್ರವರ್ತಿ ಅವರ ಹೆಸರನ್ನು ನಿಧಿ ತೆಗೆದುಕೊಂಡರು. ಮನೆಯಲ್ಲಿ ಚಕ್ರವರ್ತಿ ನಡೆದುಕೊಳ್ಳುತ್ತಿರುವ ರೀತಿ ಅನೇಕರಿಗೆ ಇಷ್ಟವಾಗುತ್ತಿಲ್ಲ. ಈ ಕಾರಣಕ್ಕೆ ನಿಧಿ ಈ ರೀತಿ ಹೇಳಿದ್ದಾರೆ. ಯಾರು ಬಿಗ್​ ಬಾಸ್​ ಮನೆಯಿಂದ ಹೊರ ಹೋಗುತ್ತಾರೆ ಎಂದು ನಿಮಗನಿಸುತ್ತದೆ ಎನ್ನುವ ಪ್ರಶ್ನೆಯನ್ನೂ ನಿಧಿ ಮುಂದೆ ಇಡಲಾಯಿತು. ಇದಕ್ಕೆ ಅವರು ಪ್ರಿಯಾಂಕಾ ತಿಮ್ಮೇಶ್​ ಹೆಸರನ್ನು ಸೂಚಿಸಿದರು. ಅವರಿಗೆ ಕಡಿಮೆ ಸಮಯ ಸಿಕ್ಕಿದೆ. ಹೀಗಾಗಿ, ಅವರು ಮುಂದಿನ ವಾರ ಹೊರ ಹೋಗುತ್ತಾರೆ ಎಂದು ನನಗನ್ನಿಸುತ್ತದೆ ಎಂದರು.

ಇದನ್ನೂ ಓದಿ: ಬಿಗ್ ಬಾಸ್ ಮನೆಯಿಂದ ನಿಧಿ ಸುಬ್ಬಯ್ಯ ಎಲಿಮಿನೇಟ್ ಆಗೋಕೆ ಆ ಒಂದು ಮಾತು ಕಾರಣವಾಯ್ತು

ಇದ್ರೆ ನೆಮ್ಮದಿಯಾಗ್ ಇರ್ಬೇಕ್: ದರ್ಶನ್ ಪರಿಸ್ಥಿತಿ ಬಗ್ಗೆ ಕೆ. ಮಂಜು ಮಾತು
ಇದ್ರೆ ನೆಮ್ಮದಿಯಾಗ್ ಇರ್ಬೇಕ್: ದರ್ಶನ್ ಪರಿಸ್ಥಿತಿ ಬಗ್ಗೆ ಕೆ. ಮಂಜು ಮಾತು
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ