‘ಮಂಜು ವಿನ್ನರ್​, ವೈಷ್ಣವಿ ರನ್ನರ್​ ಅಪ್​’; ಬಿಗ್​ ಬಾಸ್​ ಸ್ಪರ್ಧಿ ನುಡಿದ್ರು ಭವಿಷ್ಯ

ಬಿಗ್​ ಬಾಸ್​ನಲ್ಲಿ ಅರವಿಂದ್​ ಜತೆಗೆ ನಿಧಿ ಕಿತ್ತಾಡಿಕೊಂಡಿದ್ದರು. ಅರವಿಂದ್​ ಮಾಡಿದ ಸಾಧನೆಗೆ ಅವಮಾನ ಮಾಡುವ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದರು. ಮನೆಯಿಂದ ಹೊರ ಹೋಗೋಕೆ ಇದು ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ.

‘ಮಂಜು ವಿನ್ನರ್​, ವೈಷ್ಣವಿ ರನ್ನರ್​ ಅಪ್​’; ಬಿಗ್​ ಬಾಸ್​ ಸ್ಪರ್ಧಿ ನುಡಿದ್ರು ಭವಿಷ್ಯ
ವೈಷ್ಣವಿ -ಮಂಜು
Follow us
| Updated By: ರಾಜೇಶ್ ದುಗ್ಗುಮನೆ

Updated on: Jul 05, 2021 | 11:00 AM

‘ಕನ್ನಡ ಬಿಗ್​​ ಬಾಸ್ ಸೀಸನ್​ 8’ 83 ದಿನಗಳನ್ನು ಪೂರೈಸಿ ಮುನ್ನುಗ್ಗುತ್ತಿದೆ. ಮನೆಯಲ್ಲಿ 11 ಸ್ಪರ್ಧಿಗಳು ಮಾತ್ರ ಉಳಿದುಕೊಂಡಿದ್ದು, ಯಾರು ಗೆಲ್ಲಲಿದ್ದಾರೆ ಎನ್ನುವ ಬಗ್ಗೆ ಚರ್ಚೆ ಜೋರಾಗಿದೆ. ಈ ಮಧ್ಯೆ ಕಳೆದ ವಾರ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್​ ಆದ ನಿಧಿ ಸುಬ್ಬಯ್ಯ ಈ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಸೀಸನ್​ 8 ಯಾರು ಗೆಲ್ಲಬಹುದು ಎಂದು ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಬಿಗ್​ ಬಾಸ್​ನಲ್ಲಿ ಅರವಿಂದ್​ ಜತೆಗೆ ನಿಧಿ ಕಿತ್ತಾಡಿಕೊಂಡಿದ್ದರು. ಅರವಿಂದ್​ ಮಾಡಿದ ಸಾಧನೆಗೆ ಅವಮಾನ ಮಾಡುವ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದರು. ಮನೆಯಿಂದ ಹೊರ ಹೋಗೋಕೆ ಇದು ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ನಿಧಿ ಮನೆಯಿಂದ ಹೊರ ಬರುತ್ತಿದ್ದಂತೆ, ಶುಭಾ ಪೂಂಜಾ ತುಂಬಾನೇ ಕಣ್ಣೀರು ಹಾಕಿದ್ದಾರೆ. ನಂತರ ನಿಧಿ ಅವರು ವೇದಿಕೆ ಮೇಲೆ ಕಿಚ್ಚ ಸುದೀಪ್​ ಅವರ ಜತೆ ಮಾತುಕತೆ ನಡೆಸಿದ್ದಾರೆ.

‘ನಿಮ್ಮ ಪ್ರಕಾರ ಫೈನಲ್​ನಲ್ಲಿ ಯಾರಿರಬಹುದು ಎಂದು ನಿಮಗನ್ನಿಸುತ್ತದೆ’ ಎನ್ನುವ ಪ್ರಶ್ನೆಯನ್ನು ಸುದೀಪ್​ ಕೇಳಿದರು. ‘ದಿವ್ಯಾ ಉರುಡುಗ, ಪ್ರಶಾಂತ್ ಸಂಬರಗಿ,​ ಮಂಜು, ಶುಭಾ, ವೈಷ್ಣವಿ’ ಎನ್ನುವ ಉತ್ತರ ನಿಧಿ ಕಡೆಯಿಂದ ಬಂತು. ಕೊನೆಯದಾಗಿ ಉಳಿಯೋ ಇಬ್ಬರು ಸ್ಪರ್ಧಿಗಳ ಹೆಸರನ್ನು ಹೇಳಿ ಎಂದು ಸುದೀಪ್​ ಕೇಳಿದರು. ‘ಮಂಜು ಮತ್ತು ವೈಷ್ಣವಿ ಕೊನೆಯಲ್ಲಿ ಉಳಿಯುತ್ತಾರೆ. ಇದರಲ್ಲಿ ಗೆಲ್ಲೋದು ಮಂಜು’ ಎಂದು ನಿಧಿ ಹೇಳಿದರು.

‘ಬಿಗ್​ ಬಾಸ್​ ಮನೆಯಿಂದ ಈ ವಾರ ಯಾರು ಹೊರ ಹೋಗಬೇಕು’ ಎಂದು ಕೇಳಿದ ಪ್ರಶ್ನೆಗೆ ಚಕ್ರವರ್ತಿ ಅವರ ಹೆಸರನ್ನು ನಿಧಿ ತೆಗೆದುಕೊಂಡರು. ಮನೆಯಲ್ಲಿ ಚಕ್ರವರ್ತಿ ನಡೆದುಕೊಳ್ಳುತ್ತಿರುವ ರೀತಿ ಅನೇಕರಿಗೆ ಇಷ್ಟವಾಗುತ್ತಿಲ್ಲ. ಈ ಕಾರಣಕ್ಕೆ ನಿಧಿ ಈ ರೀತಿ ಹೇಳಿದ್ದಾರೆ. ಯಾರು ಬಿಗ್​ ಬಾಸ್​ ಮನೆಯಿಂದ ಹೊರ ಹೋಗುತ್ತಾರೆ ಎಂದು ನಿಮಗನಿಸುತ್ತದೆ ಎನ್ನುವ ಪ್ರಶ್ನೆಯನ್ನೂ ನಿಧಿ ಮುಂದೆ ಇಡಲಾಯಿತು. ಇದಕ್ಕೆ ಅವರು ಪ್ರಿಯಾಂಕಾ ತಿಮ್ಮೇಶ್​ ಹೆಸರನ್ನು ಸೂಚಿಸಿದರು. ಅವರಿಗೆ ಕಡಿಮೆ ಸಮಯ ಸಿಕ್ಕಿದೆ. ಹೀಗಾಗಿ, ಅವರು ಮುಂದಿನ ವಾರ ಹೊರ ಹೋಗುತ್ತಾರೆ ಎಂದು ನನಗನ್ನಿಸುತ್ತದೆ ಎಂದರು.

ಇದನ್ನೂ ಓದಿ: ಬಿಗ್ ಬಾಸ್ ಮನೆಯಿಂದ ನಿಧಿ ಸುಬ್ಬಯ್ಯ ಎಲಿಮಿನೇಟ್ ಆಗೋಕೆ ಆ ಒಂದು ಮಾತು ಕಾರಣವಾಯ್ತು

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ