ಮೋಹನ್ ಲಾಲ್, ಮಮ್ಮುಟಿಗಳ ದಾಖಲೆಗಳ ಮುರಿದ ಹುಡುಗರು ‘ಮಂಜ್ಞುಮಲ್ ಬಾಯ್ಸ್’

Manjummel Boys: ಕೇವಲ 10 ಕೋಟಿ ಬಜೆಟ್ ನಲ್ಲಿ ನಿರ್ಮಾಣಗೊಂಡು 100 ಕೋಟಿ ಗಳಿಸಿರುವ 'ಮಂಜ್ಞುಮಲ್ ಬಾಯ್ಸ್' ಸಿನಿಮಾ ಇದೀಗ ಮತ್ತೊಂದು ದಾಖಲೆ ಬರೆಯಲು ಸಜ್ಜಾಗಿದೆ.

ಮೋಹನ್ ಲಾಲ್, ಮಮ್ಮುಟಿಗಳ ದಾಖಲೆಗಳ ಮುರಿದ ಹುಡುಗರು 'ಮಂಜ್ಞುಮಲ್ ಬಾಯ್ಸ್'
Follow us
|

Updated on: Mar 10, 2024 | 8:07 AM

ಮಲಯಾಳಂ (Malayalam) ಚಿತ್ರರಂಗದ ಮಾರುಕಟ್ಟೆ ವ್ಯಾಪ್ತಿ ಚಿಕ್ಕದು, ಆದರೆ ಅವರ ಕಂಟೆಂಟ್ ದೇಶದ ಇತರೆ ಚಿತ್ರರಂಗಗಳಿಗೆ ಹೋಲಿಸಿದರೆ ಅತ್ಯುತ್ತಮ. ಈಗಾಗಲೇ ಹಲವು ಅತ್ಯುತ್ತಮ, ಭಿನ್ನ ಸಿನಿಮಾಗಳನ್ನು ಮಲಯಾಳಂ ಚಿತ್ರರಂಗ ನೀಡಿದೆ, ನೀಡುತ್ತಿದೆ. ಎಷ್ಟೆ ಒಳ್ಳೆಯ ಸಿನಿಮಾ ಮಾಡಿದರೂ ಮಾರುಕಟ್ಟೆ ಕಾರಣಕ್ಕೆ ದೊಡ್ಡ ಬಾಕ್ಸ್ ಆಫೋಸ್ ಕಲೆಕ್ಷನ್ ಎಂಬುದು ಮಲಯಾಳಂ ಚಿತ್ರರಂಗಕ್ಕೆ ಮರೀಚಿಕೆಯಾಗಿಯೇ ಇತ್ತು. ಆದರೆ ಇತ್ತೀಚೆಗೆ ಮಲಯಾಳಂ ಚಿತ್ರಗಳು ಮಾರುಕಟ್ಟೆ ಹಿಗ್ಗಿಸಿಕೊಂಡಿದ್ದು ಉತ್ತಮ ಕಲೆಕ್ಷನ್ ಮಾಡುತ್ತಿದೆ.

ಇತ್ತೀಚೆಗೆ ಬಿಡುಗಡೆ ಆಗಿರುವ ಮಲಯಾಳಂ ಸಿನಿಮಾ ಒಂದು ಗಳಿಕೆಯಲ್ಲಿ ಹೊಸ ದಾಖಲೆ ಬರೆಯುತ್ತಿದೆ. ಮಲಯಾಳಂ ಸ್ಟಾರ್ ನಟರ ಬಿಗ್ ಬಜೆಟ್ ಸಿನಿಮಾಗಳ ಕಲೆಕ್ಷನ್ ದಾಖಲೆಗಳನ್ನು ಮೀರಿ ಹೊಸ ದಾಖಲೆ ನಿರ್ಮಿಸುತ್ತಿದೆ. ದಾಖಲೆ ಬರೆಯಲು ಸಜ್ಜಾಗಿರುವ ಸಿನಿಮಾ ‘ಮಂಜ್ಞುಮಲ್ ಬಾಯ್ಸ್’. ಕೆಲವು ದಿನಗಳ‌ ಹಿಂದಷ್ಟೆ ಬಿಡುಗಡೆ ಆದ, ನಿಜ ಘಟನೆ ಆಧರಿಸಿದ ಥ್ರಿಲ್ಲರ್ ಸಿನಿಮಾ ‘ಮಂಜ್ಞುಮಲ್ ಬಾಯ್ಸ್’ ಗಳಿಕೆಯಲ್ಲಿ ಹೊಸ ದಾಖಲೆ ಬರೆಯುತ್ತಿದೆ. ಈಗಾಗಲೆ ನೂರು ಕೋಟಿ ಕಲೆಕ್ಷನ್ ದಾಟಿರುವ ಸಿನಿಮಾ, ಇದೀಗ ಮಲಯಾಳಂ‌ ಚಿತ್ರರಂಗದ ಈವರೆಗಿನ ಅತಿ ಹೆಚ್ಚು ಹಣ ಗಳಿಸಿದ ಸಿನಿಮಾ ಎಂಬ ಖ್ಯಾತಿ ಗಳಿಸುವತ್ತ ದಾಪುಗಾಲು ಹಾಕುತ್ತಿದೆ.

ಇದನ್ನೂ ಓದಿ:ಮಲಯಾಳಂ ಸಿನಿಮಾ ನಿರ್ಮಾಣಕ್ಕೆ ಮುಂದಾದ ಕನ್ನಡದ ‘ಕೆಆರ್​ಜಿ ಸ್ಟುಡಿಯೋಸ್’

ಮೋಹನ್ ಲಾಲ್ ನಟನೆಯ ‘ಪುಲಿಮುರುಗನ್‘, ಆ ನಂತರ ‘ಲುಸಿಫರ್’ ಸಿನಿಮಾಗಳು ಮಲಯಾಳಂ ಚಿತ್ರರಂಗದಲ್ಲೇ ಅತಿಹೆಚ್ಚು ಗಳಿಕೆ ಮಾಡಿದ ಸಿನಿಮಾ ಎಂಬ ಖ್ಯಾತಿ ಗಳಿಸಿತ್ತು. ಆ ದಾಖಲೆಯನ್ನು ಅಳಿಸೊ ಹಾಕಿದ್ದು ‘2018’ ಸಿನಿಮಾ. ಇದು ವಿಶ್ವದಾದ್ಯಂತ 177 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಇದೀಗ ‘ಮಂಜ್ಞುಮಲ್ ಬಾಯ್ಸ್’ ಈಗಾಗಲೆ 130 ಕೋಟಿ ಗಳಿಕೆ ಮಾಡಿದ್ದು ಕೆಲವೇ ದಿನಗಳಲ್ಲಿ ‘2018’ ಸಿನಿಮಾದ ದಾಖಲೆ ಮುರಿದು, ಮೊದಲ ಸ್ಥಾನಕ್ಕೇರಲಿದೆ ಎಂದು ಬಾಕ್ಸ್ ಆಫೀಸ್ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

‘ಮಂಜ್ಞುಮಲ್ ಬಾಯ್ಸ್’ ನಿಜ ಘಟನೆ ಆಧರಿಸಿದ ಸಿನಿಮಾ. ಗೆಳೆಯರ ಗುಂಪೊಂದು ಕೊಡೈಕೆನ್ನಲ್ ಗೆ ಹೋಗಿ ಅಲ್ಲಿ ತಮಿಳಿನ ‘ಗುಣ’ ಸಿನಿಮಾ ಚಿತ್ರೀಕರಣ ಮಾಡಿದ ದುರ್ಗಮ ಗುಹೆಗೆ ಹೋದಾಗ, ಆ ಗೆಳೆಯರ ಗುಂಪಿನ ಒಬ್ಬ ಯುವಕ ದುರ್ಗಮ ಪ್ರಪಾತಕ್ಕೆ ಬೀಳುತ್ತಾನೆ. ಆ ಯುವಕನನ್ನು ಆತನ ಗೆಳೆಯರು ಹೇಗೆ ಕಾಪಾಡುತ್ತಾರೆ ಎಂಬುದೇ ಸಿನಿಮಾದ ಕತೆ. ಸುಮಾರು 10 ಕೋಟಿ ಬಜೆಟ್ ನಲ್ಲಿ ನಿರ್ಮಾಣವಾದ ಈ ಸಿನಿಮಾ 100 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ