AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಂಜುಮ್ಮೇಲ್ ಬಾಯ್ಸ್’ ಬಜೆಟ್ 5 ಕೋಟಿ, ಗಳಿಸಿದ್ದು 180 ಕೋಟಿ ರೂಪಾಯಿ; ಏನಿದೆ ಚಿತ್ರದಲ್ಲಿ?

Manjummel Boys Collection: ‘ಮಂಜುಮ್ಮೇಲ್ ಬಾಯ್ಸ್’ ರಿಲೀಸ್ ಆಗಿ ಒಂದು ತಿಂಗಳು ಕಳೆಯುತ್ತಾ ಬಂದಿದೆ. ಆದರೂ ಚಿತ್ರದ ಅಬ್ಬರ ನಿಂತಿಲ್ಲ. ಬೆಂಗಳೂರಿನಲ್ಲಿ ಈ ಚಿತ್ರಕ್ಕೆ 180ಕ್ಕೂ ಅಧಿಕ ಶೋಗಳು ಸಿಕ್ಕಿವೆ. ಇಲ್ಲಿ ತಂಡದವರು ಬಂದು ಪ್ರಚಾರ ಮಾಡಿಲ್ಲ, ಸುದ್ದಿಗೋಷ್ಠಿ ನಡೆಸಿಲ್ಲ. ಆದಾಗ್ಯೂ ಸಿನಿಮಾಗೆ ಬಾಯಿ ಮಾತಿನ ಪ್ರಚಾರ ಸಿಗುತ್ತಿದೆ.

‘ಮಂಜುಮ್ಮೇಲ್ ಬಾಯ್ಸ್’ ಬಜೆಟ್ 5 ಕೋಟಿ, ಗಳಿಸಿದ್ದು 180 ಕೋಟಿ ರೂಪಾಯಿ; ಏನಿದೆ ಚಿತ್ರದಲ್ಲಿ?
ಮಂಜುಮ್ಮೇಲ್ ಬಾಯ್ಸ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 18, 2024 | 8:11 AM

Share

ಫೆಬ್ರವರಿ 22ರಂದು ರಿಲೀಸ್ ಆದ ‘ಮಂಜುಮ್ಮೇಲ್ ಬಾಯ್ಸ್’ (Manjummel Boys) ಸಿನಿಮಾ ಸೂಪರ್ ಹಿಟ್ ಆಗಿದೆ. ಯಾವುದೇ ಸ್ಟಾರ್ ಪಾತ್ರವರ್ಗ ಇಲ್ಲದೆ, ಯಾವುದೇ ಹೀರೋಯಿನ್ ಇಲ್ಲದೆ ಸಿಂಪಲ್ ಆಗಿ ಮೂಡಿ ಬಂದಿರೋ ಈ ಚಿತ್ರ ಮಲಯಾಳಂ ಚಿತ್ರರಂಗದಲ್ಲೇ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಆಗಿ ಹೊರ ಹೊಮ್ಮಿದೆ. ಈ ಮೂಲಕ ‘2018’ ಚಿತ್ರದ ಗಳಿಕೆಯನ್ನು ಇದು ಹಿಂದಿಕ್ಕಿದೆ. ‘ಮಂಜುಮ್ಮೇಲ್ ಬಾಯ್ಸ್’ ಚಿತ್ರವನ್ನು ಚಿದಂಬರಂ ಅವರು ನಿರ್ದೇಶನ ಮಾಡಿದ್ದಾರೆ. ಇದು ಅವರ ನಿರ್ದೇಶನದ ಎರಡನೇ ಸಿನಿಮಾ.

‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾ ರಿಲೀಸ್ ಮಾಡೋದು ನಿರ್ಮಾಪಕರಿಗೆ ಕಷ್ಟ ಆಗಿತ್ತು. ಆದರೂ ಕಷ್ಟಪಟ್ಟು ಸಿನಿಮಾ ರಿಲೀಸ್ ಮಾಡಲಾಯಿತು. ಈಗ ಚಿತ್ರ ವಿಶ್ವಾದ್ಯಂತ 180 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಮಾಲಿವುಡ್​ನಲ್ಲಿ ಸಿನಿಮಾ ದಾಖಲೆ ಬರೆದಿದೆ. ಸಿನಿಮಾ ಯಶಸ್ಸನ್ನು ತಂಡದವರು ಸಂಭ್ರಮಿಸಿದ್ದು, ಅಭಿಮಾನಿಗಳಿಗೆ ಹಾಗೂ ಪ್ರೇಕ್ಷಕರಿಗೆ ಧನ್ಯವಾದ ಹೇಳಿದ್ದಾರೆ.

ಭಾರತದಲ್ಲಿ ‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾ 120 ಕೋಟಿ ರೂಪಾಯಿ ಬಾಚಿಕೊಂಡಿದೆ. ವಿಶ್ವದ ವಿವಿಧ ಭಾಗದಲ್ಲಿ ಸಿನಿಮಾಗೆ ಬೇಡಿಕೆ ಬಂದಿದ್ದು, 60 ಕೋಟಿ ರೂಪಾಯಿ ಹೊರ ದೇಶಗಳಿಂದ ಬಂದಿದೆ. ಇದು ಸಿನಿಮಾದ ಗೆಲುವಿಗೆ ಕಾರಣ ಆಗಿದೆ. ಮಲಯಾಳಂ ಮಾತ್ರವಲ್ಲದೆ ತಮಿಳುನಾಡಿನಲ್ಲೂ ಸಿನಿಮಾ ಒಳ್ಳೆಯ ಗಳಿಕೆ ಮಾಡುತ್ತಿದೆ. ಈ ಚಿತ್ರ ತಮಿಳಿಗೂ ಡಬ್ ಆಗಿ ರಿಲೀಸ್ ಆಗಿದೆ.

ಇದನ್ನೂ ಓದಿ: ಯಕ್ಷಿಣಿ ಅವತಾರವೆತ್ತಿದ ಅನುಷ್ಕಾ ಶೆಟ್ಟಿ, ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ

ಸಿನಿಮಾ ರಿಲೀಸ್ ಆಗಿ ಒಂದು ತಿಂಗಳು ಕಳೆಯುತ್ತಾ ಬಂದಿದೆ. ಆದರೂ ಚಿತ್ರದ ಅಬ್ಬರ ನಿಂತಿಲ್ಲ. ಬೆಂಗಳೂರಿನಲ್ಲಿ ಈ ಚಿತ್ರಕ್ಕೆ 180ಕ್ಕೂ ಅಧಿಕ ಶೋಗಳು ಸಿಕ್ಕಿವೆ. ಇಲ್ಲಿ ತಂಡದವರು ಬಂದು ಪ್ರಚಾರ ಮಾಡಿಲ್ಲ, ಸುದ್ದಿಗೋಷ್ಠಿ ನಡೆಸಿಲ್ಲ. ಆದಾಗ್ಯೂ ಸಿನಿಮಾಗೆ ಬಾಯಿ ಮಾತಿನ ಪ್ರಚಾರ ಸಿಗುತ್ತಿದೆ. ಇದರಿಂದ ವೀಕೆಂಡ್​ಗಳಲ್ಲಿ ಹಲವು ಶೋಗಳು ಹೌಸ್​ಫುಲ್ ಪ್ರದರ್ಶನ ಕಾಣುತ್ತಿವೆ.

ಬಜೆಟ್ ಹಾಗೂ ಗಳಿಕೆ

‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾದ ಬಜೆಟ್ 4-5 ಕೋಟಿ ರೂಪಾಯಿ ಇದೆ ಎಂದು ಅಂದಾಜಿಸಲಾಗಿದೆ. ಆದರೆ, ಸಿನಿಮಾದ ಗಳಿಕೆ ಮಿತಿ ಮೀರಿದೆ. ಈ ಚಿತ್ರದಲ್ಲಿ ಸೌಬಿನ್ ಶಬೀರ್, ಶ್ರೀನಾತ್ ಭಾಶಿ, ಬಾಲು ವರ್ಗೀಶ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರದ ನಿರ್ಮಾಣದಲ್ಲಿ ಸೌಬಿನ್ ಶಬೀರ್ ಅವರದ್ದು ದೊಡ್ಡ ಪಾಲಿದೆ.

ಏನಿದೆ ಸಿನಿಮಾದಲ್ಲಿ?

ಅದು 2006ರಲ್ಲಿ ನಡೆದ ಘಟನೆ. ಕೇರಳದಿಂದ ತಮಿಳುನಾಡಿನ ಕೊಡೈಕೆನಲ್​ಗೆ ಫ್ರೆಂಡ್ಸ್ ಗ್ರೂಪ್ ಒಂದು ಟ್ರಿಪ್ ತೆರಳುತ್ತದೆ. ಇಲ್ಲಿ ಗುಣ ಕೇವ್​​ನಲ್ಲಿ ಡೆವಿಲ್ಸ್ ಕಿಚನ್ ಹೆಸರಿನ ದೊಡ್ಡ ಹೊಂಡ ಇದೆ. ಇದು ತುಂಬಾನೇ ಆಳ ಇರುತ್ತದೆ. ಇದರಲ್ಲಿ ಸುಭಾಷ್ ಎಂಬಾತ ಬೀಳುತ್ತಾನೆ. ಆತನ ರಕ್ಷಿಸಲು ಫ್ರೆಂಡ್ಸ್ ಪ್ರಯತ್ನಿಸುತ್ತಾರೆ. ಕೊನೆಗೆ ಯಶಸ್ವಿ ಆಗುತ್ತಾರೋ ಅಥವಾ ಇಲ್ಲವೋ ಎನ್ನುವುದೇ ಕಥೆ. ಈ ಚಿತ್ರವನ್ನು ಮೈನವಿರೇಳುವ ರೀತಿಯಲ್ಲಿ ಕಟ್ಟಿಕೊಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು