AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

200 ಕೋಟಿ ಕ್ಲಬ್ ಸೇರಿದ ‘ಮಂಜುಮ್ಮೇಲ್ ಬಾಯ್ಸ್’; ಈ ಸಾಧನೆ ಮಾಡಿದ ಮೊದಲ ಸಿನಿಮಾ

‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾದಲ್ಲಿ ಸೌಬಿನ್ ಶಾಹಿರ್, ಶ್ರೀನಾಥ್ ಭಾಶಿ, ಗಣಪತಿ ಪೊಡುವಲ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರವನ್ನು ಸೌಬಿನ್ ಶಾಹಿರ್ ಅವರು ನಿರ್ಮಾಣ ಮಾಡಿದ್ದಾರೆ. ಮಲಯಾಳಂ ಚಿತ್ರರಂಗದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಎನ್ನುವ ಖ್ಯಾತಿ ಈ ಚಿತ್ರಕ್ಕೆ ಸಿಕ್ಕಿದೆ.

200 ಕೋಟಿ ಕ್ಲಬ್ ಸೇರಿದ ‘ಮಂಜುಮ್ಮೇಲ್ ಬಾಯ್ಸ್’; ಈ ಸಾಧನೆ ಮಾಡಿದ ಮೊದಲ ಸಿನಿಮಾ
ಮಂಜುಮ್ಮೇಲ್ ಬಾಯ್ಸ್
ರಾಜೇಶ್ ದುಗ್ಗುಮನೆ
|

Updated on: Mar 20, 2024 | 12:20 PM

Share

ಕಳೆದ ತಿಂಗಳು ಫೆಬ್ರವರಿ 22ರಂದು ರಿಲೀಸ್ ಆದ ಮಲಯಾಳಂನ ‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾ (Manjummel Boys) 200 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಒಂದು ತಿಂಗಳು ಪೂರ್ಣಗೊಳ್ಳುವ ಮೊದಲೇ ಸಿನಿಮಾ ಈ ಸಾಧನೆ ಮಾಡಿದೆ. ಮಲಯಾಳಂ ಚಿತ್ರರಂಗದಲ್ಲಿ 200 ಕೋಟಿ ರೂಪಾಯಿ ಕ್ಲಬ್ ಸೇರಿದ ಮೊದಲ ಸಿನಿಮಾ ಎನ್ನುವ ಖ್ಯಾತಿ ಈ ಚಿತ್ರಕ್ಕೆ ಸಿಕ್ಕಿದೆ ಅನ್ನೋದು ವಿಶೇಷ. ನೈಜ ಘಟನೆ ಆಧರಿಸಿ ಈ ಸಿನಿಮಾ ಸಿದ್ಧಗೊಂಡಿದೆ. ಅಡ್ವೆಂಚರ್ ಥ್ರಿಲ್ಲರ್ ಸಿನಿಮಾ ಜನರಿಗೆ ಇಷ್ಟ ಆಗಿದೆ.

2006ರಲ್ಲಿ ಕೇರಳದ ಮಂಜುಮ್ಮೇಲ್ ಗ್ರಾಮದ ಗೆಳೆಯರು ಕೊಡೈಕ್ಕೆನಲ್​ನಲ್ಲಿರುವ ಗುಣ ಗುಹೆಗೆ ಪ್ರವಾಸ ತೆರಳುತ್ತಾರೆ. ಗ್ರೂಪ್​ನಲ್ಲಿ ಇರುವ ಎಲ್ಲರೂ ಪ್ರಯಾಣದುದ್ದಕ್ಕೂ ಕೂಗಾಟ, ಚೀರಾಟ ಮಾಡುತ್ತಿರುತ್ತಾರೆ. ಈ ಗುಹೆಯಲ್ಲಿರುವ ಆಳದ ಕಂದಕದಲ್ಲಿ ಇವರ ಗುಂಪಿನ ಸುಭಾಷ್ ಎನ್ನುವ ಯುವಕ ಬೀಳುತ್ತಾನೆ. ಆತನ ಹೇಗೆ ಹೊರ ತರಲಾಗುತ್ತದೆ ಎನ್ನುವುದೇ ಸಿನಿಮಾದ ಕಥೆ. ಈ ಚಿತ್ರವನ್ನು ಸಾಕಷ್ಟು ನೈಜವಾಗಿ ಕಟ್ಟಿಕೊಡುವ ಕೆಲಸವನ್ನು ನಿರ್ದೇಶಕ ಚಿದಂಬರಮ್ ಅವರು ಮಾಡಿದ್ದಾರೆ.

‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾ ಮಲಯಾಳಂ ಮಾತ್ರವಲ್ಲದೆ ತಮಿಳಿನಲ್ಲೂ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಚಿತ್ರ ವಿಶವಾದ್ಯಂತ 200 ಕೋಟಿ ರೂಪಾಯಿ ಗಳಿಕೆ ಮಾಡಿದೆ. ತಮಿಳುನಾಡಿನಿಂದಲೇ ಈ ಚಿತ್ರಕ್ಕೆ 50 ಕೋಟಿ ರೂಪಾಯಿ ಹರಿದು ಬಂದಿದೆ. ಇದೇ ರೀತಿ ‘ಬ್ರಮಾಯುಗಂ’ ಹಾಗೂ ‘ಪ್ರೇಮಲು’ ಸಿನಿಮಾ ಕೂಡ ಮೆಚ್ಚುಗೆ ಪಡೆದಿದೆ.

ಇದನ್ನೂ ಓದಿ: ‘ಮಂಜುಮ್ಮೇಲ್ ಬಾಯ್ಸ್’ ಬಜೆಟ್ 5 ಕೋಟಿ, ಗಳಿಸಿದ್ದು 180 ಕೋಟಿ ರೂಪಾಯಿ; ಏನಿದೆ ಚಿತ್ರದಲ್ಲಿ?

‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾದಲ್ಲಿ ಸೌಬಿನ್ ಶಾಹಿರ್, ಶ್ರೀನಾಥ್ ಭಾಶಿ, ಗಣಪತಿ ಪೊಡುವಲ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರವನ್ನು ಸೌಬಿನ್ ಶಾಹಿರ್ ಅವರು ನಿರ್ಮಾಣ ಮಾಡಿದ್ದಾರೆ. ಮಲಯಾಳಂ ಚಿತ್ರರಂಗದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಎನ್ನುವ ಖ್ಯಾತಿ ಈ ಚಿತ್ರಕ್ಕೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ