AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

200 ಕೋಟಿ ಕ್ಲಬ್ ಸೇರಿದ ‘ಮಂಜುಮ್ಮೇಲ್ ಬಾಯ್ಸ್’; ಈ ಸಾಧನೆ ಮಾಡಿದ ಮೊದಲ ಸಿನಿಮಾ

‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾದಲ್ಲಿ ಸೌಬಿನ್ ಶಾಹಿರ್, ಶ್ರೀನಾಥ್ ಭಾಶಿ, ಗಣಪತಿ ಪೊಡುವಲ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರವನ್ನು ಸೌಬಿನ್ ಶಾಹಿರ್ ಅವರು ನಿರ್ಮಾಣ ಮಾಡಿದ್ದಾರೆ. ಮಲಯಾಳಂ ಚಿತ್ರರಂಗದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಎನ್ನುವ ಖ್ಯಾತಿ ಈ ಚಿತ್ರಕ್ಕೆ ಸಿಕ್ಕಿದೆ.

200 ಕೋಟಿ ಕ್ಲಬ್ ಸೇರಿದ ‘ಮಂಜುಮ್ಮೇಲ್ ಬಾಯ್ಸ್’; ಈ ಸಾಧನೆ ಮಾಡಿದ ಮೊದಲ ಸಿನಿಮಾ
ಮಂಜುಮ್ಮೇಲ್ ಬಾಯ್ಸ್
ರಾಜೇಶ್ ದುಗ್ಗುಮನೆ
|

Updated on: Mar 20, 2024 | 12:20 PM

Share

ಕಳೆದ ತಿಂಗಳು ಫೆಬ್ರವರಿ 22ರಂದು ರಿಲೀಸ್ ಆದ ಮಲಯಾಳಂನ ‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾ (Manjummel Boys) 200 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಒಂದು ತಿಂಗಳು ಪೂರ್ಣಗೊಳ್ಳುವ ಮೊದಲೇ ಸಿನಿಮಾ ಈ ಸಾಧನೆ ಮಾಡಿದೆ. ಮಲಯಾಳಂ ಚಿತ್ರರಂಗದಲ್ಲಿ 200 ಕೋಟಿ ರೂಪಾಯಿ ಕ್ಲಬ್ ಸೇರಿದ ಮೊದಲ ಸಿನಿಮಾ ಎನ್ನುವ ಖ್ಯಾತಿ ಈ ಚಿತ್ರಕ್ಕೆ ಸಿಕ್ಕಿದೆ ಅನ್ನೋದು ವಿಶೇಷ. ನೈಜ ಘಟನೆ ಆಧರಿಸಿ ಈ ಸಿನಿಮಾ ಸಿದ್ಧಗೊಂಡಿದೆ. ಅಡ್ವೆಂಚರ್ ಥ್ರಿಲ್ಲರ್ ಸಿನಿಮಾ ಜನರಿಗೆ ಇಷ್ಟ ಆಗಿದೆ.

2006ರಲ್ಲಿ ಕೇರಳದ ಮಂಜುಮ್ಮೇಲ್ ಗ್ರಾಮದ ಗೆಳೆಯರು ಕೊಡೈಕ್ಕೆನಲ್​ನಲ್ಲಿರುವ ಗುಣ ಗುಹೆಗೆ ಪ್ರವಾಸ ತೆರಳುತ್ತಾರೆ. ಗ್ರೂಪ್​ನಲ್ಲಿ ಇರುವ ಎಲ್ಲರೂ ಪ್ರಯಾಣದುದ್ದಕ್ಕೂ ಕೂಗಾಟ, ಚೀರಾಟ ಮಾಡುತ್ತಿರುತ್ತಾರೆ. ಈ ಗುಹೆಯಲ್ಲಿರುವ ಆಳದ ಕಂದಕದಲ್ಲಿ ಇವರ ಗುಂಪಿನ ಸುಭಾಷ್ ಎನ್ನುವ ಯುವಕ ಬೀಳುತ್ತಾನೆ. ಆತನ ಹೇಗೆ ಹೊರ ತರಲಾಗುತ್ತದೆ ಎನ್ನುವುದೇ ಸಿನಿಮಾದ ಕಥೆ. ಈ ಚಿತ್ರವನ್ನು ಸಾಕಷ್ಟು ನೈಜವಾಗಿ ಕಟ್ಟಿಕೊಡುವ ಕೆಲಸವನ್ನು ನಿರ್ದೇಶಕ ಚಿದಂಬರಮ್ ಅವರು ಮಾಡಿದ್ದಾರೆ.

‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾ ಮಲಯಾಳಂ ಮಾತ್ರವಲ್ಲದೆ ತಮಿಳಿನಲ್ಲೂ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಚಿತ್ರ ವಿಶವಾದ್ಯಂತ 200 ಕೋಟಿ ರೂಪಾಯಿ ಗಳಿಕೆ ಮಾಡಿದೆ. ತಮಿಳುನಾಡಿನಿಂದಲೇ ಈ ಚಿತ್ರಕ್ಕೆ 50 ಕೋಟಿ ರೂಪಾಯಿ ಹರಿದು ಬಂದಿದೆ. ಇದೇ ರೀತಿ ‘ಬ್ರಮಾಯುಗಂ’ ಹಾಗೂ ‘ಪ್ರೇಮಲು’ ಸಿನಿಮಾ ಕೂಡ ಮೆಚ್ಚುಗೆ ಪಡೆದಿದೆ.

ಇದನ್ನೂ ಓದಿ: ‘ಮಂಜುಮ್ಮೇಲ್ ಬಾಯ್ಸ್’ ಬಜೆಟ್ 5 ಕೋಟಿ, ಗಳಿಸಿದ್ದು 180 ಕೋಟಿ ರೂಪಾಯಿ; ಏನಿದೆ ಚಿತ್ರದಲ್ಲಿ?

‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾದಲ್ಲಿ ಸೌಬಿನ್ ಶಾಹಿರ್, ಶ್ರೀನಾಥ್ ಭಾಶಿ, ಗಣಪತಿ ಪೊಡುವಲ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರವನ್ನು ಸೌಬಿನ್ ಶಾಹಿರ್ ಅವರು ನಿರ್ಮಾಣ ಮಾಡಿದ್ದಾರೆ. ಮಲಯಾಳಂ ಚಿತ್ರರಂಗದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಎನ್ನುವ ಖ್ಯಾತಿ ಈ ಚಿತ್ರಕ್ಕೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ