AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

200 ಕೋಟಿ ಕ್ಲಬ್ ಸೇರಿದ ‘ಮಂಜುಮ್ಮೇಲ್ ಬಾಯ್ಸ್’; ಈ ಸಾಧನೆ ಮಾಡಿದ ಮೊದಲ ಸಿನಿಮಾ

‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾದಲ್ಲಿ ಸೌಬಿನ್ ಶಾಹಿರ್, ಶ್ರೀನಾಥ್ ಭಾಶಿ, ಗಣಪತಿ ಪೊಡುವಲ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರವನ್ನು ಸೌಬಿನ್ ಶಾಹಿರ್ ಅವರು ನಿರ್ಮಾಣ ಮಾಡಿದ್ದಾರೆ. ಮಲಯಾಳಂ ಚಿತ್ರರಂಗದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಎನ್ನುವ ಖ್ಯಾತಿ ಈ ಚಿತ್ರಕ್ಕೆ ಸಿಕ್ಕಿದೆ.

200 ಕೋಟಿ ಕ್ಲಬ್ ಸೇರಿದ ‘ಮಂಜುಮ್ಮೇಲ್ ಬಾಯ್ಸ್’; ಈ ಸಾಧನೆ ಮಾಡಿದ ಮೊದಲ ಸಿನಿಮಾ
ಮಂಜುಮ್ಮೇಲ್ ಬಾಯ್ಸ್
Follow us
ರಾಜೇಶ್ ದುಗ್ಗುಮನೆ
|

Updated on: Mar 20, 2024 | 12:20 PM

ಕಳೆದ ತಿಂಗಳು ಫೆಬ್ರವರಿ 22ರಂದು ರಿಲೀಸ್ ಆದ ಮಲಯಾಳಂನ ‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾ (Manjummel Boys) 200 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಒಂದು ತಿಂಗಳು ಪೂರ್ಣಗೊಳ್ಳುವ ಮೊದಲೇ ಸಿನಿಮಾ ಈ ಸಾಧನೆ ಮಾಡಿದೆ. ಮಲಯಾಳಂ ಚಿತ್ರರಂಗದಲ್ಲಿ 200 ಕೋಟಿ ರೂಪಾಯಿ ಕ್ಲಬ್ ಸೇರಿದ ಮೊದಲ ಸಿನಿಮಾ ಎನ್ನುವ ಖ್ಯಾತಿ ಈ ಚಿತ್ರಕ್ಕೆ ಸಿಕ್ಕಿದೆ ಅನ್ನೋದು ವಿಶೇಷ. ನೈಜ ಘಟನೆ ಆಧರಿಸಿ ಈ ಸಿನಿಮಾ ಸಿದ್ಧಗೊಂಡಿದೆ. ಅಡ್ವೆಂಚರ್ ಥ್ರಿಲ್ಲರ್ ಸಿನಿಮಾ ಜನರಿಗೆ ಇಷ್ಟ ಆಗಿದೆ.

2006ರಲ್ಲಿ ಕೇರಳದ ಮಂಜುಮ್ಮೇಲ್ ಗ್ರಾಮದ ಗೆಳೆಯರು ಕೊಡೈಕ್ಕೆನಲ್​ನಲ್ಲಿರುವ ಗುಣ ಗುಹೆಗೆ ಪ್ರವಾಸ ತೆರಳುತ್ತಾರೆ. ಗ್ರೂಪ್​ನಲ್ಲಿ ಇರುವ ಎಲ್ಲರೂ ಪ್ರಯಾಣದುದ್ದಕ್ಕೂ ಕೂಗಾಟ, ಚೀರಾಟ ಮಾಡುತ್ತಿರುತ್ತಾರೆ. ಈ ಗುಹೆಯಲ್ಲಿರುವ ಆಳದ ಕಂದಕದಲ್ಲಿ ಇವರ ಗುಂಪಿನ ಸುಭಾಷ್ ಎನ್ನುವ ಯುವಕ ಬೀಳುತ್ತಾನೆ. ಆತನ ಹೇಗೆ ಹೊರ ತರಲಾಗುತ್ತದೆ ಎನ್ನುವುದೇ ಸಿನಿಮಾದ ಕಥೆ. ಈ ಚಿತ್ರವನ್ನು ಸಾಕಷ್ಟು ನೈಜವಾಗಿ ಕಟ್ಟಿಕೊಡುವ ಕೆಲಸವನ್ನು ನಿರ್ದೇಶಕ ಚಿದಂಬರಮ್ ಅವರು ಮಾಡಿದ್ದಾರೆ.

‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾ ಮಲಯಾಳಂ ಮಾತ್ರವಲ್ಲದೆ ತಮಿಳಿನಲ್ಲೂ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಚಿತ್ರ ವಿಶವಾದ್ಯಂತ 200 ಕೋಟಿ ರೂಪಾಯಿ ಗಳಿಕೆ ಮಾಡಿದೆ. ತಮಿಳುನಾಡಿನಿಂದಲೇ ಈ ಚಿತ್ರಕ್ಕೆ 50 ಕೋಟಿ ರೂಪಾಯಿ ಹರಿದು ಬಂದಿದೆ. ಇದೇ ರೀತಿ ‘ಬ್ರಮಾಯುಗಂ’ ಹಾಗೂ ‘ಪ್ರೇಮಲು’ ಸಿನಿಮಾ ಕೂಡ ಮೆಚ್ಚುಗೆ ಪಡೆದಿದೆ.

ಇದನ್ನೂ ಓದಿ: ‘ಮಂಜುಮ್ಮೇಲ್ ಬಾಯ್ಸ್’ ಬಜೆಟ್ 5 ಕೋಟಿ, ಗಳಿಸಿದ್ದು 180 ಕೋಟಿ ರೂಪಾಯಿ; ಏನಿದೆ ಚಿತ್ರದಲ್ಲಿ?

‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾದಲ್ಲಿ ಸೌಬಿನ್ ಶಾಹಿರ್, ಶ್ರೀನಾಥ್ ಭಾಶಿ, ಗಣಪತಿ ಪೊಡುವಲ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರವನ್ನು ಸೌಬಿನ್ ಶಾಹಿರ್ ಅವರು ನಿರ್ಮಾಣ ಮಾಡಿದ್ದಾರೆ. ಮಲಯಾಳಂ ಚಿತ್ರರಂಗದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಎನ್ನುವ ಖ್ಯಾತಿ ಈ ಚಿತ್ರಕ್ಕೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ