AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೂಡಿಕೆ 10 ಕೋಟಿ ಗಳಿಸಿದ್ದು 100 ಕೋಟಿ: ಸಿನಿಮಾ ನೋಡಿ ಭೇಷ್ ಎಂದ ಕಮಲ್ ಹಾಸನ್

Manjummel Boys: ಕೇವಲ 10 ಕೋಟಿ ಬಜೆಟ್​ನಲ್ಲಿ ನಿರ್ಮಾಣವಾದ ಈ ಮಲಯಾಳಂ ಸಿನಿಮಾ 100 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಅಂದಹಾಗೆ ಕಮಲ್ ಹಾಸನ್​ ಸಹ ಸಿನಿಮಾ ವೀಕ್ಷಿಸಿದ್ದು, ಬಹಳ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯಾವುದು ಈ ಸಿನಿಮಾ?

ಹೂಡಿಕೆ 10 ಕೋಟಿ ಗಳಿಸಿದ್ದು 100 ಕೋಟಿ: ಸಿನಿಮಾ ನೋಡಿ ಭೇಷ್ ಎಂದ ಕಮಲ್ ಹಾಸನ್
ಮಂಜುಮೆಲ್ ಬಾಯ್ಸ್
ಮಂಜುನಾಥ ಸಿ.
|

Updated on:Mar 05, 2024 | 2:06 PM

Share

ಭಾರಿ ಬಜೆಟ್, ದೊಡ್ಡ ಸ್ಟಾರ್ ನಟರನ್ನು ಹೊಂದಿದ ಸಿನಿಮಾಗಳು ದೊಡ್ಡ ಮೊತ್ತದ ಕಲೆಕ್ಷನ್ ಮಾಡುವುದು ಆಶ್ಚರ್ಯವಲ್ಲ. ಆದರೆ ಯಾವುದೇ ಸ್ಟಾರ್​ಗಳಿಲ್ಲದ, ಕಡಿಮೆ ಬಜೆಟ್​ನ ಸಿನಿಮಾಗಳು ದೊಡ್ಡ ಕಲೆಕ್ಷನ್ ಮಾಡುವ ಘಟನೆಗಳು ಅಪರೂಪದಲ್ಲಿ ಅಪರೂಪ. ಆದರೆ ಈ ಅಪರೂಪದ ವಿದ್ಯಮಾನಗಳು ಇತರೆ ಚಿತ್ರರಂಗಕ್ಕೆ ಹೋಲಿಸಿದರೆ ಕೇರಳ ಚಿತ್ರರಂಗಕ್ಕೆ ತುಸು ಹೆಚ್ಚು. ಕಡಿಮೆ ಬಜೆಟ್​ನ ಅವರ ಸಿನಿಮಾಗಳು ವಿಶ್ವ ಬಾಕ್ಸ್ ಆಫೀಸ್​ನಲ್ಲಿ (Box Office) ಕಾಲ-ಕಾಲಕ್ಕೆ ದೊಡ್ಡ ಕಲೆಕ್ಷನ್ ಮಾಡುತ್ತಲೇ ಬಂದಿವೆ. ಇದೀಗ ಮತ್ತೊಂದು ಕಡಿಮೆ ಬಜೆಟ್​ನ ಮಲಯಾಳಂ ಸಿನಿಮಾ ಗ್ಲೋಬಲ್ ಬಾಕ್ಸ್ ಆಫೀಸ್​ನಲ್ಲಿ 100 ಕೋಟಿಗೂ ಹೆಚ್ಚು ಮೊತ್ತ ಗಳಿಸಿದೆ.

ಫೆಬ್ರವರಿ 22 ಕ್ಕೆ ಬಿಡುಗಡೆ ಆದ ‘ಮಂಜ್ಞುಮೆಲ್ ಬಾಯ್ಸ’ ಮಲಯಾಳಂ ಸಿನಿಮಾ ಸೂಪರ್ ಡೂಪರ್ ಹಿಟ್ ಎನಿಸಿಕೊಂಡಿದೆ. ಸುಮಾರು 10 ಕೋಟಿ ಬಜೆಟ್​ನಲ್ಲಿ ನಿರ್ಮಾಣವಾಗಿರುವ ಈ ಸಿನಿಮಾ ಇದೀಗ ವಿಶ್ವದಾದ್ಯಂತ 100 ಕೋಟಿಗೂ ಹೆಚ್ಚು ಮೊತ್ತ ಗಳಿಸಿದೆ. ಚಿದಂಬರಂ ನಿರ್ದೇಶನದ ಈ ಸಿನಿಮಾ ನಿಜ ಘಟನೆ ಆಧರಿಸಿದ ಸಿನಿಮಾ ಆಗಿದ್ದು, ಸಿನಿಮಾದ ಹಾಸ್ಯ, ಥ್ರಿಲ್ಲರ್ ಅಂಶಗಳು ಪ್ರೇಕ್ಷಕರನ್ನು ಬಹುವಾಗಿ ಸೆಳೆದಿವೆ. ಮಂಜ್ಞುಮೆಲ್ ಬಾಯ್ಸ ಹೆಸರಿನ ಗುಂಪು ಕಟ್ಟಿಕೊಂಡು ತಮಿಳುನಾಡಿನ ಕೊಡೈಕೆನಲ್​ನ ‘ಗುಣಾ ಕೇವ್ಸ್​’ಗೆ ಪ್ರವಾಸ ಹೋಗುವ ಯುವಕರ ಕತೆಯನ್ನು ಈ ಸಿನಿಮಾ ಒಳಗೊಂಡಿದೆ.

ಇದನ್ನೂ ಓದಿ:ಮಲಯಾಳಂ ಸಿನಿಮಾ ನಿರ್ಮಾಣಕ್ಕೆ ಮುಂದಾದ ಕನ್ನಡದ ‘ಕೆಆರ್​ಜಿ ಸ್ಟುಡಿಯೋಸ್’

ಕಮಲ್ ಹಾಸನ್​ರ ಅಭಿಮಾನಿಗಳಾದ ಯುವಕರು ಅವರ ನಟನೆಯ ‘ಗುಣ’ ಸಿನಿಮಾದ ಚಿತ್ರೀಕರಣ ಮಾಡಲಾದ ‘ಗುಣಾ ಕೇವ್ಸ್’ ಗೆ ಹೋದಾಗ ಗುಂಪಿನ ಒಬ್ಬ ಸದಸ್ಯ ಅಲ್ಲಿನ ಡೆವಿಲ್ಸ್ ಕಿಚನ್ ಎಂಬ ಅತ್ಯಂತ ದುರ್ಗಮ ಪ್ರತಾಪಕ್ಕೆ ಬಿದ್ದು ಬಿಡುತ್ತಾನೆ. ಆಗ ಉಳಿದ ಸದಸ್ಯರು ತಮ್ಮ ಗೆಳೆಯನನ್ನು ಹೇಗೆ ರಕ್ಷಿಸಿಕೊಳ್ಳುತ್ತಾರೆ ಎಂಬುದೇ ‘ಮಂಜ್ಞುಮೆಲ್ ಬಾಯ್ಸ’ ಸಿನಿಮಾದ ಕತೆ. ಸಿನಿಮಾದಲ್ಲಿ ಸೋಬಿನ್, ಶ್ರೀನಾಥ್ ಬಸ್ಸಿ, ಬಾಲು, ಲಾಲ್​ ಜಿ, ಸೇರಿದಂತೆ ಇನ್ನೂ ಹಲವರು ಸಿನಿಮಾದಲ್ಲಿ ನಟಿಸಿದ್ದಾರೆ. ನಿಜ ಜೀವನದ ಮಂಜ್ಞುಮೆಲ್ ಬಾಯ್ಸ ಸಹ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

ಸಿನಿಮಾವನ್ನು ಕಮಲ್ ಹಾಸನ್ ಸಹ ವೀಕ್ಷಿಸಿದ್ದು, ಸಿನಿಮಾಕ್ಕೆ ಬಹಳ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಿನಿಮಾ ಇತ್ತೀಚೆಗಷ್ಟೆ ತಮಿಳಿಗೆ ಡಬ್ ಆಗಿ ಬಿಡುಗಡೆ ಆಗಿದ್ದು, ತಮಿಳುನಾಡಿನಲ್ಲಿ ದಾಖಲೆಗಳನ್ನು ಬರೆಯುತ್ತಿದೆ. ರಜನೀಕಾಂತ್​ರ ‘ಲಾಲ್ ಸಲಾಂ’ ಸಿನಿಮಾದ ಕಲೆಕ್ಷನ್ ಅನ್ನು ಮೀರಿಸಿ ಉತ್ತಮ ಗಳಿಕೆಯನ್ನು ತಮಿಳುನಾಡಿನಲ್ಲಿ ‘ಮಂಜ್ಞುಮೆಲ್ ಬಾಯ್ಸ’ ಸಿನಿಮಾ ಮಾಡುತ್ತಿದೆ. ವಿಶ್ವದಾದ್ಯಂತ ಈ ವರೆಗೆ 100 ಕೋಟಿಗೂ ಹೆಚ್ಚು ಕಲೆಕ್ಷನ್ ಅನ್ನು ‘ಮಂಜ್ಞುಮೆಲ್ ಬಾಯ್ಸ’ ಸಿನಿಮಾ ಮಾಡಿದೆ. ಬೆಂಗಳೂರಿನಲ್ಲಿಯೂ ಸಹ ‘ಮಂಜ್ಞುಮೆಲ್ ಬಾಯ್ಸ’ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:06 pm, Tue, 5 March 24

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ