AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಂಜುಮ್ಮೇಲ್ ಬಾಯ್ಸ್’ ವಿರುದ್ಧ ಹಾಕಿದ ಕೇಸ್​ನಲ್ಲಿ ಗೆದ್ದ ಇಳಯರಾಜ; ಕೊಟ್ಟ ಪರಿಹಾರ ಮೊತ್ತ ಎಷ್ಟು?

‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸುಮಾರು 250 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗಿದೆ. ಈ ಚಿತ್ರದ ನಿರ್ಮಾಪಕರು ಈಗ ತೊಂದರೆ ಎದುರಾಗಿತ್ತು. ಈ ಸಿನಿಮಾ ತಂಡದ ವಿರುದ್ಧ ಇಳಯರಾಜ ಅವರು ಕೇಸ್ ಹಾಕಿದ್ದರು. ಈ ಕೇಸ್​ನಲ್ಲಿ ಅವರಿಗೆ ಜಯ ಆಗಿದೆ.

‘ಮಂಜುಮ್ಮೇಲ್ ಬಾಯ್ಸ್’ ವಿರುದ್ಧ ಹಾಕಿದ ಕೇಸ್​ನಲ್ಲಿ ಗೆದ್ದ ಇಳಯರಾಜ; ಕೊಟ್ಟ ಪರಿಹಾರ ಮೊತ್ತ ಎಷ್ಟು?
ಮಂಜುಮ್ಮೇಲ್ ಬಾಯ್ಸ್
ರಾಜೇಶ್ ದುಗ್ಗುಮನೆ
|

Updated on:Aug 05, 2024 | 2:05 PM

Share

ಈ ವರ್ಷ ರಿಲೀಸ್ ಆದ ಮಲಯಾಳಂನ ಸೂಪರ್ ಹಿಟ್ ಸಿನಿಮಾ ‘ಮಂಜುಮ್ಮೇಲ್ ಬಾಯ್ಸ್’ ವಿರುದ್ಧ ಇಳಯರಾಜ ಕೇಸ್ ಹಾಕಿದ್ದರು. ಈ ಸಿನಿಮಾದಲ್ಲಿ ಬಳಕೆ ಆದ ‘ಕಣ್ಮಣಿ..’ ಹಾಡಿನ ಹಕ್ಕು ನಮ್ಮದು ಎಂದು ವಾದಿಸಿದ್ದರು. ಕೋರ್ಟ್​ನಲ್ಲಿ ಇಳಯರಾಜ ಅವರಿಗೆ ಜಯ ಆಗಿದೆ. ವರದಿಗಳ ಪ್ರಕಾರ ಇಳಯರಾಜ ಅವರಿಗೆ ಸಿನಿಮಾ ತಂಡ 60 ಲಕ್ಷ ರೂಪಾಯಿ ಕೊಟ್ಟಿದೆ ಎಂದು ವರದಿ ಆಗಿದೆ.

‘ಮಂಜುಮ್ಮೇಲ್ ಬಾಯ್ಸ್’ ಕಥೆ ಸಾಗೋದು ಗುಣ ಗುಹೆಯಲ್ಲಿ. ಹೀಗಾಗಿ, ‘ಗುಣ’ ಚಿತ್ರದಲ್ಲಿ ಬಳಕೆ ಆದ ‘ಕಣ್ಮಣಿ..’ ಸಾಂಗ್​ನ ತಂಡದವರು ಬಳಕೆ ಮಾಡಿಕೊಂಡಿದ್ದರು. ಇದಕ್ಕೆ ಮ್ಯೂಸಿಕ್ ಕಂಪನಿಯಿಂದ ಒಪ್ಪಿಗೆ ಕೂಡ ಪಡೆದಿದ್ದರು. ಆದರೆ, ಇವರು ಇಳಯರಾಜ ಅವರ ಒಪ್ಪಿಗೆ ಪಡೆದಿರಲಿಲ್ಲ. ಈ ಕಾರಣದಿಂದಲೇ ಇಳಯರಾಜ ಅವರು ಕೋರ್ಟ್​ನಲ್ಲಿ ಕೇಸ್ ಹಾಕಿ, ತಂಡದವರು ಎರಡು ಕೋಟಿ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದರು. ತಮಗೆ 2 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಇಳಯರಾಜ ಕೋರಿದ್ದರು. ಈಗ ‘ಮಂಜುಮ್ಮೇಲ್ ಬಾಯ್ಸ್’ ತಂಡದವರು 60 ಲಕ್ಷ ರೂಪಾಯಿ ಕೊಡಲು ಒಪ್ಪಿದ್ದಾರೆ.

‘ಮಂಜುಮ್ಮೇಲ್ ಬಾಯ್ಸ್’ ತಂಡದವರು ಕೋರ್ಟ್​ನಲ್ಲಿ ಸಾಂಗ್ ಹಕ್ಕು ಪಡೆದಿದ್ದಾಗಿ ವಾದ ಮುಂದಿಟ್ಟಿದ್ದಾರೆ. ‘ನಾವು ಮ್ಯೂಸಿಕ್ ಕಂಪನಿಯಿಂದ ಈ ಹಾಡಿನ ಬಳಕೆಗೆ ಹಕ್ಕನ್ನು ಪಡೆದಿದ್ದೇವೆ’ ಎಂದು ಸಿನಿಮಾ ತಂಡದ ಪರ ವಕೀಲರು ಹೇಳಿದರು. ಇದಕ್ಕೆ ಪ್ರತಿವಾದ ಮಂಡಿಸಿದ ಇಳಯರಾಜ ಪರ ವಕೀಲರು, ‘ಇಳಯರಾಜ ಅವರು ಮಾಡಿದ ಕೆಲಸಗಳಿಗೆ ಅವರು ಕೂಡ ಹಕ್ಕನ್ನು ಹೊಂದಿದ್ದಾರೆ’ ಎಂದರು. ಹೀಗಾಗಿ, ಇಳಯರಾಜ ಅವರು ಈ ಹಾಡನ್ನು ಬಳಸಲು ‘ಮಂಜುಮ್ಮೇಲ್ ಬಾಯ್ಸ್’ ತಂಡಕ್ಕೆ ಯಾವುದೇ ಒಪ್ಪಿಗೆ ನೀಡಿರಲಿಲ್ಲ. ಈಗ ರಾಯಲ್ಟಿ ರೂಪದಲ್ಲಿ ಇಳಯರಾಜ ಅವರಿಗೆ 60 ಲಕ್ಷ ರೂಪಾಯಿ ಅನ್ನು ‘ಮಂಜುಮ್ಮೇಲ್ ಬಾಯ್ಸ್’ ತಂಡ ನೀಡಿದೆ.

ಇದನ್ನೂ ಓದಿ:  ‘ಮಂಜುಮ್ಮೇಲ್ ಬಾಯ್ಸ್’ ನಿರ್ಮಾಪಕರಿಂದ ಮೋಸ; ಬಂತು ಜಾರಿ ನಿರ್ದೇಶನಾಲಯದ ನೋಟಿಸ್

ಈ ಮೊದಲು ‘ಕೂಲಿ’ ಸಿನಿಮಾ ತಂಡದ ವಿರುದ್ಧ ಇಳಯರಾಜ ಕೇಸ್ ಹಾಕಿದ್ದರು. ‘ವಾ ವಾ ಪಕ್ಕಮ್ ವಾ..’ ಹಾಡಿನ ಹಕ್ಕು ತಮ್ಮದು ಎಂದಿದ್ದರು. ಆದರೆ, ಈ ಸಾಂಗ್​ನ ಹಕ್ಕು ಸೋನಿ ಬಳಿ ಇದೆ ಎಂಬುದು ಆ ಬಳಿಕ ತಿಳಿದಿತ್ತು. ಈ ಮೊದಲು ಕೂಡ ಇಳಯರಾಜ ಈ ರೀತಿಯ ಅನೇಕ ಕೇಸ್​ಗಳನ್ನು ಹಾಕಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:23 pm, Mon, 5 August 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು