AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳಿನ ಬಳಿಕ ತೆಲುಗಿನಲ್ಲಿಯೂ ಬಿಡುಗಡೆ ಆಗುತ್ತಿದೆ ಮಲಯಾಳಂ ಬ್ಲಾಕ್​ಬಸ್ಟರ್ ‘ಮಂಜ್ಞುಮ್ಮೆಲ್ ಬಾಯ್ಸ್’

Manjummel Boys: ಮಲಯಾಳಂ ಹಾಗೂ ತಮಿಳಿನಲ್ಲಿ ಅಬ್ಬರಿಸಿ, ಬಾಕ್ಸ್ ಆಫೀಸ್​ನಲ್ಲಿ ದಾಖಲೆಗಳನ್ನು ಬರೆದಿರುವ ‘ಮಂಜ್ಞುಮ್ಮೆಲ್ ಬಾಯ್ಸ್’ ಸಿನಿಮಾ ಇದೀಗ ತೆಲುಗಿನಲ್ಲಿ ಬಿಡುಗಡೆ ಆಗಲಿದೆ. ವಿಶೇಷವೆಂದರೆ ಒಟಿಟಿಯಲ್ಲಿ ಬಿಡುಗಡೆ ಆದ ಮರುದಿನ ಆಂಧ್ರ-ತೆಲಂಗಾಣದ ಚಿತ್ರಮಂದಿರಗಳಲ್ಲಿ ತೆರೆಗೆ ಬರಲಿದೆ ಸಿನಿಮಾ.

ತಮಿಳಿನ ಬಳಿಕ ತೆಲುಗಿನಲ್ಲಿಯೂ ಬಿಡುಗಡೆ ಆಗುತ್ತಿದೆ ಮಲಯಾಳಂ ಬ್ಲಾಕ್​ಬಸ್ಟರ್ ‘ಮಂಜ್ಞುಮ್ಮೆಲ್ ಬಾಯ್ಸ್’
ಮಂಜುಮ್ಮೇಲ್ ಬಾಯ್ಸ್
ಮಂಜುನಾಥ ಸಿ.
|

Updated on: Mar 26, 2024 | 8:38 PM

Share

ಮಲಯಾಳಂ ಸಿನಿಮಾ ‘ಮಂಜ್ಞುಮ್ಮೆಲ್ ಬಾಯ್ಸ್’ (Manjummel Boys) ಬಾಕ್ಸ್ ಆಫೀಸ್​ನಲ್ಲಿ ಸುನಾಮಿ ಎಬ್ಬಿಸಿದೆ. ಕೆಲವೇ ಕೋಟಿ ಬಜೆಟ್​ನಲ್ಲಿ ನಿರ್ಮಾಣಗೊಂಡ ಈ ಸಿನಿಮಾ ಈಗಾಗಲೇ ಮಲಯಾಳಂ ಚಿತ್ರರಂಗದ ಈವರೆಗಿನ ಎಲ್ಲ ಬಾಕ್ಸ್ ಆಫೀಸ್ ದಾಖಲೆಗಳನ್ನು ದೂಳೆಬ್ಬಿಸಿದೆ. ಮಲಯಾಳಂನಲ್ಲಿ ಬಿಡುಗಡೆ ಆದ ಕೆಲ ದಿನಗಳ ಬಳಿಕ ತಮಿಳಿನಲ್ಲಿ ಬಿಡುಗಡೆ ಆಗಿ ಅಲ್ಲಿಯೂ ಭರ್ಜರಿ ಕಲೆಕ್ಷನ್ ಮಾಡಿತು. ರಜನೀಕಾಂತ್ ನಟನೆಯ ‘ಲಾಲ್ ಸಲಾಂ’ ಜೊತೆಗೆ ಬಿಡುಗಡೆ ಆದ ಈ ಸಿನಿಮಾ ‘ಲಾಲ್ ಸಲಾಂ’ ಕಲೆಕ್ಷನ್ ಅನ್ನು ಹಿಂದಿಕ್ಕಿ ಸೂಪರ್ ಹಿಟ್ ಎನಿಸಿಕೊಂಡಿದೆ. ಇನ್ನೇನು ಕೆಲವೇ ದಿನಗಳಲ್ಲಿ ಒಟಿಟಿಯಲ್ಲಿಯೂ ಬಿಡುಗಡೆ ಆಗಲಿರುವ ಈ ಸಿನಿಮಾ ಇದೀಗ ತೆಲುಗು ರಾಜ್ಯಗಳಲ್ಲಿ ಬಿಡುಗಡೆ ಆಗುತ್ತಿದೆ.

ನೈಜ ಘಟನೆಯನ್ನು ಆಧರಿಸಿದ ‘ಮಂಜ್ಞುಮ್ಮೆಲ್ ಬಾಯ್ಸ್’ ಸಿನಿಮಾ ಫೆಬ್ರವರಿ 22 ಕ್ಕೆ ಬಿಡುಗಡೆ ಆಗಿತ್ತು. ಬಿಡುಗಡೆ ಆದ ಕೆಲವೇ ದಿನಗಳಲ್ಲಿ ಭರ್ಜರಿ ಗಳಿಕೆ ಕಂಡ ಈ ಸಿನಿಮಾ ಬಳಿಕ ತಮಿಳಿಗೆ ಡಬ್ ಆಗಿ ಬಿಡುಗಡೆ ಆಯ್ತು. ಕಮಲ್ ಹಾಸನ್​ರ ‘ಗುಣ’ ಸಿನಿಮಾದ ಲಿಂಕ್ ಸಹ ಈ ಸಿನಿಮಾದಲ್ಲಿರುವ ಕಾರಣ ತಮಿಳು ಪ್ರೇಕ್ಷಕರು ಸಿನಿಮಾವನ್ನು ಬಹುವಾಗಿ ಮೆಚ್ಚಿಕೊಂಡರು. ಸ್ವತಃ ಕಮಲ್ ಹಾಸನ್ ಸಹ ಸಿನಿಮಾ ವೀಕ್ಷಿಸಿ ಚಿತ್ರತಂಡದ ಜೊತೆಗೆ ಸಂವಾದ ನಡೆಸಿ, ಯುವಕರ ಪ್ರಯತ್ನಕ್ಕೆ ಭರಪೂರ ಮೆಚ್ಚುಗೆ ಸೂಚಿಸಿದರು. ಇದೀಗ ತೆಲುಗಿಗೆ ಡಬ್ ಆಗಿ ಬಿಡುಗಡೆ ಆಗುತ್ತಿದೆ ‘ಮಂಜ್ಞುಮ್ಮೆಲ್ ಬಾಯ್ಸ್’.

ಏಪ್ರಿಲ್ 6 ರಂದು ‘ಮಂಜ್ಞುಮ್ಮೆಲ್ ಬಾಯ್ಸ್’ ಸಿನಿಮಾ ಅದೇ ಹೆಸರಿನಲ್ಲಿ ತೆಲುಗು ರಾಜ್ಯಗಳಲ್ಲಿ ಬಿಡುಗಡೆ ಆಗಲಿದ್ದು, ತೆಲುಗಿನ ಟಾಪ್ ನಿರ್ಮಾಣ ಹಾಗೂ ವಿತರಣೆ ಸಂಸ್ಥೆಯಾದ ಮೈತ್ರಿ ಮೂವಿ ಮೇಕರ್ಸ್ ಈ ಸಿನಿಮಾದ ವಿತರಣೆ ಮಾಡಲಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ಮಲಯಾಳಂನ ಸಣ್ಣ ಬಜೆಟ್ ಸಿನಿಮಾ ‘ಪ್ರೇಮಲು’ ತೆಲುಗಿಗೆ ಡಬ್ ಆಗಿ ಬಿಡುಗಡೆ ಆಗಿ ಸುಮಾರು 100 ಕೋಟಿ ಗಳಿಕೆ ಮಾಡಿತ್ತು. ‘ಪ್ರೇಮಲು’ ಸಿನಿಮಾವನ್ನು ಎಸ್​ಎಸ್ ರಾಜಮೌಳಿ ಪುತ್ರ ತೆಲುಗಿಗೆ ತಂದಿದ್ದರು. ಇದೀಗ ‘ಮಂಜ್ಞುಮ್ಮೆಲ್ ಬಾಯ್ಸ್’ ಸಿನಿಮಾವನ್ನು ತೆಲುಗಿಗೆ ತರಲಾಗುತ್ತಿದ್ದು, ಸಿನಿಮಾವನ್ನು ತೆಲುಗು ಪ್ರೇಕ್ಷಕರು ಹೇಗೆ ಸ್ವೀಕರಿಸುತ್ತಾರೆ ಕಾದು ನೋಡಬೇಕಿದೆ.

ಇದನ್ನೂ ಓದಿ:ಒಟಿಟಿಗೆ ಬರೋಕೆ ರೆಡಿ ಆದ ಮಲಯಾಳಂನ ‘ಮಂಜುಮ್ಮೇಲ್ ಬಾಯ್ಸ್’; ಕನ್ನಡದಲ್ಲೂ ವೀಕ್ಷಣೆಗೆ ಲಭ್ಯ

ಇದರ ನಡುವೆಯೇ ‘ಮಂಜ್ಞುಮ್ಮೆಲ್ ಬಾಯ್ಸ್’ ಸಿನಿಮಾ ಒಟಿಟಿ ಬಿಡುಗಡೆ ದಿನಾಂಕ ಸಹ ಘೋಷಣೆಯಾಗಿದೆ. ‘ಮಂಜ್ಞುಮ್ಮೆಲ್ ಬಾಯ್ಸ್’ ಸಿನಿಮಾ ಮಲಯಾಳಂ, ತಮಿಳು, ತೆಲುಗು, ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಏಪ್ರಿಲ್ 5 ರಿಂದ ಡಿಸ್ನಿ ಪ್ಲಸ್ ಹಾಟ್​ಸ್ಟಾರ್​ನಲ್ಲಿ ವೀಕ್ಷಣೆಗೆ ಲಭ್ಯವಾಗಲಿದೆ. ವಿಶೇಷವೆಂದರೆ ಒಟಿಟಿಗೆ ಬಿಡುಗಡೆ ಆದ ಮರುದಿನ ಅಂದರೆ ಏಪ್ರಿಲ್ ಆರರಿಂದ ಆಂಧ್ರ-ತೆಲಂಗಾಣದ ಕೆಲವು ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆ ಆಗಲಿದೆ.

ಕೇರಳದ ಕೆಲ ಯುವಕರು ಕಮಲ್ ಹಾಸನ್ ನಟನೆಯ ತಮಿಳಿನ ‘ಗುಣ’ ಸಿನಿಮಾದ ಚಿತ್ರೀಕರಣ ನಡೆದ ಗುಣ ಗುಹೆಗಳನ್ನು ನೋಡಲು ಹೋದಾಗ ಗುಂಪಿನಲ್ಲಿದ್ದ ಯುವಕನೊಬ್ಬ ಅಲ್ಲಿನ ಡೆವಿಲ್ಸ್ ಕಿಚನ್ ಹೆಸರಿನ ಕಂದರದ ಬಿದ್ದಾಗ ಆತನನ್ನು ಯುವಕರ ಗುಂಪು ಹೇಗೆ ರಕ್ಷಣೆ ಮಾಡುತ್ತದೆ ಎಂಬುದೇ ‘ಮಂಜ್ಞುಮ್ಮೆಲ್ ಬಾಯ್ಸ್’ ಸಿನಿಮಾದ ಕತೆ. ನೈಜ ಘಟನೆಯ ಈ ಸಿನಿಮಾವನ್ನು ಅಷ್ಟೇ ನೈಜತೆಯಿಂದ ತೆರೆಗೆ ತಂದಿದ್ದಾರೆ ನಿರ್ದೇಶಕ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್