AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಟ್​ಸ್ಟಾರ್​ನಲ್ಲಿ ‘ಮಂಜುಮ್ಮೇಲ್ ಬಾಯ್ಸ್’; ಅಧಿಕೃತ ಮಾಹಿತಿ ಕೊಟ್ಟ ಒಟಿಟಿ ಸಂಸ್ಥೆ

‘ಮಂಜುಮ್ಮೇಲ್ ಬಾಯ್ಸ್’ ಮಲಯಾಳಂ ಸಿನಿಮಾ. ಕರ್ನಾಟಕದ ಪ್ರಮುಖ ನಗರಗಳಲ್ಲಿ ಮಾತ್ರ ಸಿನಿಮಾ ವೀಕ್ಷಣೆಗೆ ಅವಕಾಶ ಇತ್ತು. ಹೀಗಾಗಿ ಎಲ್ಲರಿಗೂ ಸಿನಿಮಾ ನೋಡೋಕೆ ಸಾಧ್ಯವಾಗಿಲ್ಲ. ಈಗ ಥಿಯೇಟರ್​ನಲ್ಲಿ ಸಿನಿಮಾ ಮಿಸ್ ಮಾಡಿಕೊಂಡವರು ಒಟಿಟಿಯಲ್ಲಿ ಸಿನಿಮಾ ವೀಕ್ಷಿಸಬಹುದು.

ಹಾಟ್​ಸ್ಟಾರ್​ನಲ್ಲಿ ‘ಮಂಜುಮ್ಮೇಲ್ ಬಾಯ್ಸ್’; ಅಧಿಕೃತ ಮಾಹಿತಿ ಕೊಟ್ಟ ಒಟಿಟಿ ಸಂಸ್ಥೆ
ಮಂಜುಮ್ಮೇಲ್ ಬಾಯ್ಸ್
ರಾಜೇಶ್ ದುಗ್ಗುಮನೆ
|

Updated on:Apr 24, 2024 | 10:47 AM

Share

ಮಲಯಾಳಂ ಸಿನಿಮಾ ‘ಮಂಜುಮ್ಮೇಲ್ ಬಾಯ್ಸ್’ (Manjummel Boys) ಸೂಪರ್ ಹಿಟ್ ಎನಿಸಿಕೊಂಡಿದೆ. 200 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಮಾಡಿರೋ ಈ ಚಿತ್ರವನ್ನು ಒಟಿಟಿಯಲ್ಲಿ ವೀಕ್ಷಿಸಲು ಫ್ಯಾನ್ಸ್ ಕಾದಿದ್ದಾರೆ. ಕೊನೆಗೂ ಇದಕ್ಕೆ ಮುಹೂರ್ತ ಕೂಡ ಬಂದಿದೆ. ಈ ಬಗ್ಗೆ ಡಿಸ್ನಿ ಪ್ಲಸ್ ಹಾಟ್​ಸ್ಟಾರ್ ಕಡೆಯಿಂದಲೇ ಅಧಿಕೃತ ಮಾಹಿತಿ ಸಿಕ್ಕಿದೆ. ಈ ಸಿನಿಮಾ ಶೀಘ್ರವೇ ಒಟಿಟಿಗೆ ಬರಲಿದೆ ಎಂದು ತಿಳಿಸಲಾಗಿದೆ. ಈ ವಿಚಾರ ಸಿನಿಪ್ರಿಯರ ಖುಷಿ ಹೆಚ್ಚಿಸಿದೆ.

‘ಮಂಜುಮ್ಮೇಲ್ ಬಾಯ್ಸ್’ ಮಲಯಾಳಂ ಸಿನಿಮಾ. ಕರ್ನಾಟಕದ ಪ್ರಮುಖ ನಗರಗಳಲ್ಲಿ ಮಾತ್ರ ಸಿನಿಮಾ ವೀಕ್ಷಣೆಗೆ ಅವಕಾಶ ಇತ್ತು. ಹೀಗಾಗಿ ಎಲ್ಲರಿಗೂ ಸಿನಿಮಾ ನೋಡೋಕೆ ಸಾಧ್ಯವಾಗಿಲ್ಲ. ಈಗ ಥಿಯೇಟರ್​ನಲ್ಲಿ ಸಿನಿಮಾ ಮಿಸ್ ಮಾಡಿಕೊಂಡವರು ಒಟಿಟಿಯಲ್ಲಿ ಸಿನಿಮಾ ವೀಕ್ಷಿಸಬಹುದು.  ‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾ ಮಲಯಾಳಂ ಮಾತ್ರವಲ್ಲ ಕನ್ನಡ, ತಮಿಳು, ತೆಲುಗು, ಹಿಂದಿ ಭಾಷೆಗಳಲ್ಲೂ ಪ್ರಸಾರ ಆಗುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಈ ಮೂಲಕ ಎಲ್ಲಾ ಭಾರತದ ಎಲ್ಲಾ ಪ್ರಮುಖ ಭಾಷಿಗರಿಗೆ ಸಿನಿಮಾ ತಲುಪಲಿದೆ.

ಮೇ 3?

ಕೆಲವು ವರದಿಗಳ ಪ್ರಕಾರ ‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾ ಮೇ 3ರಂದು ಒಟಿಟಿಯಲ್ಲಿ ರಿಲೀಸ್ ಆಗಲಿದೆಯಂತೆ. ಈ ಚಿತ್ರವನ್ನು ಚಿದಂಬರಂ ಅವರು ನಿರ್ದೇಶನ ಮಾಡಿದ್ದಾರೆ. ಸೌಬಿನ್ ಶಬೀರ್, ಶ್ರೀನಾಥ್ ಭಾಸಿ, ಬಾಲು ವರ್ಗೀಸ್, ಗಣಪತಿ ಪೊಡುವಲ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರವನ್ನು ಸೌಬಿನ್ ಶಬೀರ್ ಅವರು ನಿರ್ಮಾಣ ಮಾಡಿದ್ದಾರೆ.

ಇದನ್ನೂ ಓದಿ: ತೆಲುಗಿನಲ್ಲಿ ಮ್ಯಾಜಿಕ್ ಮಾಡುತ್ತಾ ‘ಮಂಜುಮ್ಮೇಲ್ ಬಾಯ್ಸ್’? ಕನ್ನಡದಲ್ಲಿ ಯಾವಾಗ?

ಏನು ಕಥೆ?

ಕೊಡೆಕೆನಲ್​ನಲ್ಲಿರುವ ‘ಗುಣ ಕೇವ್​’ಗೆ ಮಂಜುಮ್ಮೇಲ್ ಊರಿನ ಕೆಲವರು ಟ್ರಿಪ್ ತೆರಳಿದ್ದರು. ಇದರಲ್ಲಿ ಓರ್ವ ವ್ಯಕ್ತಿ ಗುಹೆ ಒಳಗೆ ಬಿದ್ದು ಹೋಗುತ್ತಾನೆ. ಆತನ ರಕ್ಷಿಸೋ ಕಥೆಯನ್ನು ಈ ಸಿನಿಮಾ ಹೊಂದಿದೆ. 2006ರಲ್ಲಿ ನಡೆದ ಈ ಘಟನೆ ಸಿನಿಮಾ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:46 am, Wed, 24 April 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ