AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಳಯರಾಜ ನೊಟೀಸ್​ಗೆ ಪ್ರತಿಕ್ರಿಯಿಸಿದ ‘ಮಂಜ್ಞುಮೆಲ್ ಬಾಯ್ಸ್’ ಸಿನಿಮಾ ನಿರ್ಮಾಪಕ

‘ಮಂಜ್ಞುಮೆಲ್ ಬಾಯ್ಸ್’ ಸಿನಿಮಾನಲ್ಲಿ ತಾವು ರಾಗ ಸಂಯೋಜಿಸಿದ ‘ಕಣ್ಮಣಿ’ ಹಾಡು ಬಳಸಿದ್ದಕ್ಕೆ ಸಂಗೀತ ನಿರ್ದೇಶಕ ಇಳಯರಾಜ ನೊಟೀಸ್ ಕಳುಹಿಸಿದ್ದು, ಸಿನಿಮಾದ ನಿರ್ಮಾಪಕರು ನೊಟೀಸ್​ ಬಗ್ಗೆ ಮಾತನಾಡಿದ್ದಾರೆ.

ಇಳಯರಾಜ ನೊಟೀಸ್​ಗೆ ಪ್ರತಿಕ್ರಿಯಿಸಿದ ‘ಮಂಜ್ಞುಮೆಲ್ ಬಾಯ್ಸ್’ ಸಿನಿಮಾ ನಿರ್ಮಾಪಕ
ಮಂಜುನಾಥ ಸಿ.
|

Updated on: May 24, 2024 | 5:06 PM

Share

ಮಲಯಾಳಂ (Malayalam) ಸಿನಿಮಾ ‘ಮಂಜ್ಞುಮೆಲ್ ಬಾಯ್ಸ್’ (Manjummel boys) ಸೂಪರ್ ಡೂಪರ್ ಹಿಟ್ ಆಗಿದೆ. ‘ಮಂಜ್ಞುಮೆಲ್ ಬಾಯ್ಸ್’ ಸಿನಿಮಾ ನೈಜ ಘಟನೆಗಳನ್ನು ಆಧರಿಸಿದ ಸಿನಿಮಾ ಆಗಿದ್ದು, ಕಮಲ್ ಹಾಸನ್ ನಟನೆಯ ತಮಿಳಿನ ‘ಗುಣ’ ಸಿನಿಮಾದ ಕನೆಕ್ಷನ್ ಈ ಸಿನಿಮಾಕ್ಕಿದೆ. ‘ಗುಣ’ ಸಿನಿಮಾದ ಚಿತ್ರೀಕರಣ ನಡೆದಿದ್ದ ಗುಹೆಗೆ ಹೋದಾಗ ನಡೆದ ಅವಘಡ ಹಾಗೂ ಆ ಅನಿರೀಕ್ಷಿತ ಅವಘಡದಿಂದ ಒಂದು ಸ್ನೇಹಿತರ ತಂಡ ಹೇಗೆ ಹೊರಗೆ ಬರುತ್ತದೆ ಎಂಬುದೇ ಈ ಸಿನಿಮಾದ ಕತೆ. ಸಿನಿಮಾದಲ್ಲಿ ತಮಿಳಿನ ಗುಣ ಸಿನಿಮಾದ ಸೂಪರ್ ಹಿಟ್ ಹಾಡು ‘ಕಣ್ಮನಿ’ಯನ್ನು ಅದ್ಭುತವಾಗಿ ಬಳಸಿಕೊಳ್ಳಲಾಗಿದೆ. ಸಿನಿಮಾದ ಹೈಲೆಟ್ ಆ ಹಾಡು. ಆದರೆ ‘ಗುಣ’ ಸಿನಿಮಾದ ಸಂಗೀತ ನಿರ್ದೇಶಕ ಇಳಯರಾಜ ತಮ್ಮ ಹಾಡನ್ನು ಅನುಮತಿ ಇಲ್ಲದೇ ಬಳಸಿರುವುದಕ್ಕೆ ‘ಮಂಜ್ಞುಮೆಲ್ ಬಾಯ್ಸ್’ ಸಿನಿಮಾದ ನಿರ್ಮಾಪಕರಿಗೆ ನೊಟೀಸ್ ನೀಡಿದ್ದರು. ಇದೀಗ ನಿರ್ಮಾಪಕರು ಇಳಯರಾಜ ಅವರ ನೊಟೀಸ್​ಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಮಂಜ್ಞುಮೆಲ್ ಬಾಯ್ಸ್’ ಸಿನಿಮಾದ ನಿರ್ಮಾಪಕರಿಗೆ ನೊಟೀಸ್ ನೀಡಿದ್ದ ಇಳಯರಾಜ, ತಮ್ಮ ಎಲ್ಲ ಹಾಡುಗಳಿಗೂ ಮೂಲ ಮಾಲೀಕ ತಾವೇ ಆಗಿದ್ದು, ಕ್ರಿಯಾತ್ಮಕ ಹಕ್ಕು ತಮ್ಮದೇ ಆಗಿರುತ್ತದೆ. ‘ಮಂಜ್ಞುಮೆಲ್ ಬಾಯ್ಸ್’ ಸಿನಿಮಾದ ನಿರ್ಮಾಪಕರು ನನ್ನ ಸಂಗೀತ ಸಂಯೋಜನೆಯ ಹಾಡನ್ನು ತಮ್ಮ ಸಿನಿಮಾದಲ್ಲಿ ಬಳಸಲು ನನ್ನ ಅನುಮತಿ ಪಡೆದಿಲ್ಲ, ಟೈಟಲ್ ಕಾರ್ಡ್​ನಲ್ಲಿ ನನ್ನ ಹೆಸರು ಬಳಸಿರುವುದು ನನ್ನ ಅನುಮತಿ ದೊರೆತಿದೆ ಎಂದರ್ಥವಲ್ಲ’ ಎಂದಿದ್ದರು.

ಇದನ್ನೂ ಓದಿ:ಅಣ್ಣಾವ್ರ ಹಾಡನ್ನು ಹಾಡಲು ಪ್ರಯತ್ನಿಸಿದ ಮಲಯಾಳಂ ನಟ ಮೋಹನ್​ಲಾಲ್; ಇಲ್ಲಿದೆ ವಿಡಿಯೋ

ಇದೀಗ ‘ಮಂಜ್ಞುಮೆಲ್ ಬಾಯ್ಸ್’ ಸಿನಿಮಾ ನಿರ್ಮಾಪಕರಲ್ಲಿ ಒಬ್ಬರಾದ ಶಾನ್ ಆಂಟೊನಿ ಈ ಬಗ್ಗೆ ಮಾತನಾಡಿದ್ದು, ‘ಗುಣ’ ಸಿನಿಮಾದ ಆಡಿಯೋ ಹಕ್ಕುಗಳು ಎರಡು ಸಂಸ್ಥೆಗಳ ಬಳಿ ಇದ್ದವು. ಎರಡೂ ಸಂಸ್ಥೆಗಳಿಂದಲೂ ನಾವು ಅನುಮತಿಯನ್ನು ಪಡೆದುಕೊಂಡಿದ್ದೇವೆ ಎಂದಿದ್ದಾರೆ. ಸಿನಿಮಾ ಬಿಡುಗಡೆ ಆದ ಬಳಿಕ ಸಿನಿಮಾದ ನಾಯಕ ಕಮಲ್ ಹಾಸನ್ ಅವರೊಂದಿಗೆ ಸಂವಾದವನ್ನು ಸಹ ಚಿತ್ರತಂಡ ಮಾಡಿತ್ತು.

ಇಳಯರಾಜ, ಈ ಮೊದಲು ಸಹ ಹಲವರಿಗೆ ಇದೇ ರೀತಿಯ ನೊಟೀಸ್​ಗಳನ್ನು ಕಳುಹಿಸಿದ್ದಾರೆ. ತಾವು ರಾಗ ಸಂಯೋಜಿಸಿದ ಹಾಡುಗಳನ್ನು ಬಳಸಿದ್ದಕ್ಕೆ, ಹೆಸರು ಬಳಸಿದ್ದಕ್ಕೆ ಮಾತ್ರವೇ ಅಲ್ಲದೆ ಲೈವ್ ಶೋಗಳಲ್ಲಿ ತಮ್ಮ ಹಾಡುಗಳನ್ನು ಹಾಡಿದವರಿಗೂ ಸಹ ನೊಟೀಸ್​ಗಳನ್ನು ಇಳಯರಾಜ ಕಳಿಸಿದ್ದರು. ಅವರ ಆತ್ಮೀಯ ಸ್ನೇಹಿತ ಎಸ್​ಪಿ ಬಾಲಸುಬ್ರಹ್ಮಣ್ಯಂಗೆ ಸಹ ಇಳಯರಾಜ ನೊಟೀಸ್​ ನೀಡಿದ್ದರು. ಅದು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್