AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಖಾನ್​ ಜತೆ ಬೀಡಿ ಸೇದಿದ ದಿನಗಳನ್ನು ನೆನಪಿಸಿಕೊಂಡ ಮನೋಜ್​ ಬಾಜಪೇಯಿ

ಯಶ್ ಚೋಪ್ರಾ ನಿರ್ದೇಶನದ ವೀರ್ ಜಾರಾ ಸಿನಿಮಾದಲ್ಲಿ ಇಬ್ಬರೂ ಒಟ್ಟಿಗೆ ಕೆಲಸ ಮಾಡಿದ್ದರು. ಈ ಬಗ್ಗೆ ಇತ್ತೀಚಿನ ಸಂದರ್ಶನವೊಂದರಲ್ಲಿ ಅವರು ಮಾತನಾಡಿದ್ದಾರೆ.

ಶಾರುಖ್​ ಖಾನ್​ ಜತೆ ಬೀಡಿ ಸೇದಿದ ದಿನಗಳನ್ನು ನೆನಪಿಸಿಕೊಂಡ ಮನೋಜ್​ ಬಾಜಪೇಯಿ
ಶಾರುಖ್​ ಖಾನ್​ ಮನೋಜ್​ ಬಾಜಪೇಯಿ
ರಾಜೇಶ್ ದುಗ್ಗುಮನೆ
|

Updated on: May 22, 2021 | 6:16 PM

Share

ಮನೋಜ್​ ಬಾಜಪೇಯಿ ನಟನೆಯ ‘ಫ್ಯಾಮಿಲಿ ಮ್ಯಾನ್​ 2’ ವೆಬ್​ ಸೀರಿಸ್​ ಜೂನ್​ 4ರಂದು ಪ್ರದರ್ಶನ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ನಟ ಮನೋಜ್​ ಬಾಜಪೇಯಿ ಸಾಕಷ್ಟು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಅವರು ಬಾಲಿವುಡ್​ ಕಿಂಗ್​ಖಾನ್​ ಶಾರುಖ್​ ಖಾನ್​ ಜತೆಗಿನ ಒಡನಾಟದ ಬಗ್ಗೆ ಹೇಳಿಕೊಂಡಿದ್ದಾರೆ. ಅಂದಿನ ಕಾಲದಲ್ಲಿ ಇಬ್ಬರೂ ಬೀಡಿ ಹಂಚಿಕೊಂಡು ಸೇದುತ್ತಿದ್ದರಂತೆ.

ಮನೋಜ್ ಅವರನ್ನು ದೆಹಲಿಯಲ್ಲಿ ಮೊದಲ ಬಾರಿಗೆ ಶಾರುಖ್​ ಖಾನ್​ ಡಿಸ್ಕೋಥೆಕ್​ಗೆ ಕರೆದೊಯ್ದಿದ್ದರಂತೆ. ಇವರಿಬ್ಬರು ದೆಹಲಿಯ ಬ್ಯಾರಿ ಜಾನ್ ಥಿಯೇಟರ್​ನಲ್ಲಿ ಒಟ್ಟಿಗೆ ಕಲಿತಿದ್ದರು. ಯಶ್ ಚೋಪ್ರಾ ನಿರ್ದೇಶನದ ವೀರ್ ಜಾರಾ ಸಿನಿಮಾದಲ್ಲಿ ಇಬ್ಬರೂ ಒಟ್ಟಿಗೆ ಕೆಲಸ ಮಾಡಿದ್ದರು. ಈ ಬಗ್ಗೆ ಇತ್ತೀಚಿನ ಸಂದರ್ಶನವೊಂದರಲ್ಲಿ ಅವರು ಮಾತನಾಡಿದ್ದಾರೆ.

ಅಂದು ಶಾರುಖ್​ ಖಾನ್​ ಮಾರುತಿ ವ್ಯಾನ್​ನಲ್ಲಿ ಬರುತ್ತಿದ್ದರು. ನಮ್ಮ ಗುಂಪಿನಲ್ಲಿ ಮಾರುತಿ ವ್ಯಾನ್​ನಲ್ಲಿ ಓಡಾಡುವ ಏಕೈಕ ವ್ಯಕ್ತಿ ಅವರಾಗಿದ್ದರು. ತಾಜ್​ ಹೋಟೆಲ್​ನಲ್ಲಿರುವ ಡಿಸ್ಕೋಥೆಕ್​ಗೆ ನನ್ನನ್ನು ಕರೆದೊಯ್ದಿದ್ದರು. ನಾವು ಸಿಗರೇಟ್​ ಹಾಗೂ ಬೀಡಿಯನ್ನು ಶೇರ್​ ಮಾಡಿಕೊಳ್ಳುತ್ತಿದ್ದೆವು. ಹುಡುಗಿಯರ ಗುಂಪಿನಲ್ಲಿ ಶಾರುಖ್​ ತುಂಬಾನೇ ಫೇಮಸ್​ ಆಗಿದ್ದರು ಎಂದಿದ್ದಾರೆ ಮನೋಜ್.

‘ದಿ ಫ್ಯಾಮಿಲಿ ಮ್ಯಾನ್’​ ಮೊದಲ ಸೀಸನ್​ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಈಗ ಅದರ ಮುಂದುವರಿದ ಭಾಗವಾಗಿ ಸೀಸನ್​-2 ಜೂನ್​ 4ರಂದು ಅಮೇಜಾನ್​ ಪ್ರೈಮ್​ನಲ್ಲಿ ಪ್ರೀಮಿಯರ್​ ಆಗುತ್ತಿದೆ. ಈ ವೆಬ್​ ಸೀರಿಸ್​ನ ನಿರ್ದೇಶನ ಜವಾಬ್ದಾರಿಯನ್ನು ರಾಜ್​ ಮತ್ತು​ ಡಿ.ಕೆ. ನಿಭಾಯಿಸಿದ್ದಾರೆ. ಮೊದಲ ಸೀಸನ್​ ದೊಡ್ಡಮಟ್ಟದಲ್ಲಿ ಹಿಟ್ ಆದ್ದರಿಂದ ಎರಡನೇ ಸೀಸನ್​ಮೇಲೆ ಹೆಚ್ಚು ನಿರೀಕ್ಷೆ ಇದೆ. ಇನ್ನು, ಇತ್ತೀಚೆಗೆ ಈ ವೆಬ್​ ಸೀರಿಸ್​ನ ಟ್ರೈಲರ್​ ರಿಲೀಸ್​ ಆಗಿತ್ತು. ಇದರಲ್ಲಿ ತಮಿಳು ಜನರನ್ನು ಟೆರರಿಸ್ಟ್​ಗಳ ರೀತಿಯಲ್ಲಿ ತೋರಿಸಲಾಗಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಹೀಗಾಗಿ, ಇದರ ಟ್ರೇಲರ್​ ಎಡಿಟ್​ ಮಾಡಲಾಗಿದೆ.

ಇದನ್ನೂ ಓದಿ: ಮತ್ತೆ ವಿವಾದ ಮಾಡಿಕೊಳ್ಳಲಿದೆಯೇ ಅಮೇಜಾನ್​ ಪ್ರೈಮ್​? ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​​ಗೆ ವಿಘ್ನ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ