AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ’, ‘ವಾರಣಾಸಿ’ ಚಿತ್ರಗಳ ಬಜೆಟ್ ಒಂದು ಗಿಮಿಕ್ ಎಂದ ಮನೋಜ್ ಬಾಜಪೇಯಿ

ಸಿನಿಮಾದ ಕಥೆಗಿಂತಲೂ ಹೆಚ್ಚಾಗಿ ಬಜೆಟ್ ಮತ್ತು ಬಾಕ್ಸ್ ಆಫೀಸ್ ಅಂಕಿಅಂಶಗಳ ಬಗ್ಗೆಯೇ ಜನರು ಹೆಚ್ಚು ಮಾತನಾಡುತ್ತಿದ್ದಾರೆ. ಆ ಬಗ್ಗೆ ಖ್ಯಾತ ನಟ ಮನೋಜ್ ಬಾಜಪೇಯಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರೇಕ್ಷಕರಿಗೆ ಸಿನಿಮಾ ಇಷ್ಟ ಆಯಿತೋ ಇಲ್ಲವೋ ಎಂಬುದು ಮಾತ್ರ ಮುಖ್ಯವಾಗಬೇಕು ಎಂದು ಅವರು ಹೇಳಿದ್ದಾರೆ.

‘ರಾಮಾಯಣ’, ‘ವಾರಣಾಸಿ’ ಚಿತ್ರಗಳ ಬಜೆಟ್ ಒಂದು ಗಿಮಿಕ್ ಎಂದ ಮನೋಜ್ ಬಾಜಪೇಯಿ
Ranbir Kapoor, Manoj Bajpayee, Mahesh Babu
ಮದನ್​ ಕುಮಾರ್​
|

Updated on: Jun 04, 2026 | 7:35 PM

Share

ಸದ್ಯ ಭಾರತೀಯ ಚಿತ್ರರಂಗದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ರಣಬೀರ್ ಕಪೂರ್ ನಟನೆಯ ‘ರಾಮಾಯಣ’ ಮತ್ತು ಮಹೇಶ್ ಬಾಬು ಅಭಿನಯದ ‘ವಾರಣಾಸಿ’ (Varanasi) ಚಿತ್ರಗಳ ಬಜೆಟ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಚರ್ಚೆ ನಡೆಯುತ್ತಿದೆ. ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಗಳ ಬಜೆಟ್ ಹೈಪ್ ಕುರಿತು ರಾಷ್ಟ್ರ ಪ್ರಶಸ್ತಿ ವಿಜೇತ ನಟ ಮನೋಜ್ ಬಾಜಪೇಯಿ (Manoj Bajpayee) ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಸಿನಿಮಾ ಕಥೆಗಿಂತ ಬಜೆಟ್‌ಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿರುವ ಪ್ರೇಕ್ಷಕರ ಬಗ್ಗೆ ಅವರು ಮಾತನಾಡಿದ್ದಾರೆ.

ಯೂಟ್ಯೂಬ್ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಸಿನಿಮಾಗಳ ಭಾರಿ ಬಜೆಟ್ ಪ್ರಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮನೋಜ್, ‘ಇದೆಲ್ಲವೂ ಕೇವಲ ಒಂದು ಪಿಆರ್ ತಂತ್ರ. ಕಳೆದ 15 ವರ್ಷಗಳಿಂದ ಇಂತಹ ಬಜೆಟ್ ಹೈಪ್ ಮಾತುಗಳು ಚಿತ್ರರಂಗದಲ್ಲಿ ಕೇಳಿಬರುತ್ತಲೇ ಇವೆ’ ಎಂದು ನೇರವಾಗಿ ಹೇಳಿದ್ದಾರೆ. ಚಿತ್ರದ ಕಲೆಕ್ಷನ್ ಮತ್ತು ಬಜೆಟ್ ನೋಡಿ ಸಿನಿಮಾವನ್ನು ಹೈಪ್ ಮಾಡುವ ಪ್ರೇಕ್ಷಕರ ಮನಸ್ಥಿತಿಯನ್ನು ಅವರು ಖಂಡಿಸಿದ್ದಾರೆ.

‘ಈ ಬಜೆಟ್ ಮತ್ತು ಬಾಕ್ಸ್ ಆಫೀಸ್ ನಂಬರ್‌ಗಳ ಹುಚ್ಚು ಜನರಿಗೆ ಎಷ್ಟು ಹಿಡಿದಿದೆ ಎಂದರೆ, ಏರ್‌ಪೋರ್ಟ್‌ನಲ್ಲಿ ಯಾರಾದರೂ ಪ್ರೇಕ್ಷಕರು ಸಿಕ್ಕರೆ ಸಾಕು ಚಿತ್ರದ ಕಲೆಕ್ಷನ್ ಲೆಕ್ಕದ ಬಗ್ಗೆ ಮಾತನಾಡುತ್ತಾರೆ. ಅಂತವರಿಗೆ ನಾನು ಹಲವು ಬಾರಿ ಬೈದಿದ್ದೇನೆ. ಈ ಕೋಟಿ ಕೋಟಿ ಹಣ ನಿಮ್ಮ ಬ್ಯಾಂಕ್ ಖಾತೆಗೆ ಬರುತ್ತದೆಯೇ? ಒಂದು ರೂಪಾಯಿಯೂ ನಿಮಗೆ ಸಿಗುವುದಿಲ್ಲ ಎಂದಮೇಲೆ ಬಾಕ್ಸ್ ಆಫೀಸ್ ನಂಬರ್ ಬಗ್ಗೆ ನಿಮಗೇಕೆ ಚಿಂತೆ? ಸಿನಿಮಾ ನಿಮಗೆ ಇಷ್ಟವಾಯಿತೋ ಇಲ್ಲವೋ ಎಂಬುದರ ಬಗ್ಗೆ ಮಾತ್ರ ಮಾತನಾಡಿ ಎಂದು ಹೇಳಿ ಅವರ ಬಾಯಿ ಮುಚ್ಚಿಸಿದ್ದೇನೆ’ ಎಂದಿದ್ದಾರೆ ಮನೋಜ್ ಬಾಜಪೇಯಿ.

‘ರಾಮಾಯಣ’ ಸಿನಿಮಾದ ಬಜೆಟ್ 4,000 ಕೋಟಿ ರೂಪಾಯಿ ಎನ್ನಲಾಗಿದೆ. ರಣಬೀರ್ ಕಪೂರ್ (ಶ್ರೀರಾಮ), ಸಾಯಿ ಪಲ್ಲವಿ (ಸೀತೆ), ಸನ್ನಿ ಡಿಯೋಲ್ (ಹನುಮಂತ) ಮತ್ತು ರಾಕಿಂಗ್ ಸ್ಟಾರ್ ಯಶ್ (ರಾವಣ) ನಟಿಸುತ್ತಿರುವ ಈ ಸಿನಿಮಾ ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ದುಬಾರಿ ಪ್ರಾಜೆಕ್ಟ್ ಎನ್ನಲಾಗಿದೆ. ಇದರ ಮೊದಲ ಭಾಗ ಈ ವರ್ಷದ ದೀಪಾವಳಿಗೆ ಬಿಡುಗಡೆಯಾಗಲಿದೆ.

ಇದನ್ನೂ ಓದಿ: ‘ರಾಮಾಯಣ’ ಚಿತ್ರಕ್ಕೆ ಪಾಶ್ಚಿಮಾತ್ಯ ಶೈಲಿಯ ಸ್ಪರ್ಶ: ಸಮರ್ಥನೆ ಮಾಡಿಕೊಂಡ ಯಶ್

‘ವಾರಣಾಸಿ’ ಚಿತ್ರದ ಬಜೆಟ್ 1,400 ಕೋಟಿ ರೂಪಾಯಿ ಎಂದು ವರದಿ ಆಗಿದೆ. ಎಸ್‌ಎಸ್ ರಾಜಮೌಳಿ ನಿರ್ದೇಶನದಲ್ಲಿ ಮಹೇಶ್ ಬಾಬು ನಟಿಸುತ್ತಿರುವ ಈ ಚಿತ್ರ ಕೂಡ ಭಾರಿ ಬಜೆಟ್‌ನಲ್ಲಿ ತಯಾರಾಗುತ್ತಿದೆ. ಪ್ರಿಯಾಂಕಾ ಚೋಪ್ರಾ ಕಂಬ್ಯಾಕ್ ಮಾಡುತ್ತಿರುವ ಈ ಸಿನಿಮಾ, ಸಂಪೂರ್ಣವಾಗಿ ‘1.43:1 IMAX’ ಫಾರ್ಮ್ಯಾಟ್‌ನಲ್ಲಿ ಚಿತ್ರೀಕರಣಗೊಳ್ಳುತ್ತಿರುವ ಮೊದಲ ಭಾರತೀಯ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ