AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ’, ‘ವಾರಣಾಸಿ’ ಚಿತ್ರಗಳ ಬಜೆಟ್ ಒಂದು ಗಿಮಿಕ್ ಎಂದ ಮನೋಜ್ ಬಾಜಪೇಯಿ

ಸಿನಿಮಾದ ಕಥೆಗಿಂತಲೂ ಹೆಚ್ಚಾಗಿ ಬಜೆಟ್ ಮತ್ತು ಬಾಕ್ಸ್ ಆಫೀಸ್ ಅಂಕಿಅಂಶಗಳ ಬಗ್ಗೆಯೇ ಜನರು ಹೆಚ್ಚು ಮಾತನಾಡುತ್ತಿದ್ದಾರೆ. ಆ ಬಗ್ಗೆ ಖ್ಯಾತ ನಟ ಮನೋಜ್ ಬಾಜಪೇಯಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರೇಕ್ಷಕರಿಗೆ ಸಿನಿಮಾ ಇಷ್ಟ ಆಯಿತೋ ಇಲ್ಲವೋ ಎಂಬುದು ಮಾತ್ರ ಮುಖ್ಯವಾಗಬೇಕು ಎಂದು ಅವರು ಹೇಳಿದ್ದಾರೆ.

‘ರಾಮಾಯಣ’, ‘ವಾರಣಾಸಿ’ ಚಿತ್ರಗಳ ಬಜೆಟ್ ಒಂದು ಗಿಮಿಕ್ ಎಂದ ಮನೋಜ್ ಬಾಜಪೇಯಿ
Ranbir Kapoor, Manoj Bajpayee, Mahesh Babu
ಮದನ್​ ಕುಮಾರ್​
|

Updated on: Jun 04, 2026 | 7:35 PM

Share

ಸದ್ಯ ಭಾರತೀಯ ಚಿತ್ರರಂಗದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ರಣಬೀರ್ ಕಪೂರ್ ನಟನೆಯ ‘ರಾಮಾಯಣ’ ಮತ್ತು ಮಹೇಶ್ ಬಾಬು ಅಭಿನಯದ ‘ವಾರಣಾಸಿ’ (Varanasi) ಚಿತ್ರಗಳ ಬಜೆಟ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಚರ್ಚೆ ನಡೆಯುತ್ತಿದೆ. ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಗಳ ಬಜೆಟ್ ಹೈಪ್ ಕುರಿತು ರಾಷ್ಟ್ರ ಪ್ರಶಸ್ತಿ ವಿಜೇತ ನಟ ಮನೋಜ್ ಬಾಜಪೇಯಿ (Manoj Bajpayee) ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಸಿನಿಮಾ ಕಥೆಗಿಂತ ಬಜೆಟ್‌ಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿರುವ ಪ್ರೇಕ್ಷಕರ ಬಗ್ಗೆ ಅವರು ಮಾತನಾಡಿದ್ದಾರೆ.

ಯೂಟ್ಯೂಬ್ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಸಿನಿಮಾಗಳ ಭಾರಿ ಬಜೆಟ್ ಪ್ರಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮನೋಜ್, ‘ಇದೆಲ್ಲವೂ ಕೇವಲ ಒಂದು ಪಿಆರ್ ತಂತ್ರ. ಕಳೆದ 15 ವರ್ಷಗಳಿಂದ ಇಂತಹ ಬಜೆಟ್ ಹೈಪ್ ಮಾತುಗಳು ಚಿತ್ರರಂಗದಲ್ಲಿ ಕೇಳಿಬರುತ್ತಲೇ ಇವೆ’ ಎಂದು ನೇರವಾಗಿ ಹೇಳಿದ್ದಾರೆ. ಚಿತ್ರದ ಕಲೆಕ್ಷನ್ ಮತ್ತು ಬಜೆಟ್ ನೋಡಿ ಸಿನಿಮಾವನ್ನು ಹೈಪ್ ಮಾಡುವ ಪ್ರೇಕ್ಷಕರ ಮನಸ್ಥಿತಿಯನ್ನು ಅವರು ಖಂಡಿಸಿದ್ದಾರೆ.

‘ಈ ಬಜೆಟ್ ಮತ್ತು ಬಾಕ್ಸ್ ಆಫೀಸ್ ನಂಬರ್‌ಗಳ ಹುಚ್ಚು ಜನರಿಗೆ ಎಷ್ಟು ಹಿಡಿದಿದೆ ಎಂದರೆ, ಏರ್‌ಪೋರ್ಟ್‌ನಲ್ಲಿ ಯಾರಾದರೂ ಪ್ರೇಕ್ಷಕರು ಸಿಕ್ಕರೆ ಸಾಕು ಚಿತ್ರದ ಕಲೆಕ್ಷನ್ ಲೆಕ್ಕದ ಬಗ್ಗೆ ಮಾತನಾಡುತ್ತಾರೆ. ಅಂತವರಿಗೆ ನಾನು ಹಲವು ಬಾರಿ ಬೈದಿದ್ದೇನೆ. ಈ ಕೋಟಿ ಕೋಟಿ ಹಣ ನಿಮ್ಮ ಬ್ಯಾಂಕ್ ಖಾತೆಗೆ ಬರುತ್ತದೆಯೇ? ಒಂದು ರೂಪಾಯಿಯೂ ನಿಮಗೆ ಸಿಗುವುದಿಲ್ಲ ಎಂದಮೇಲೆ ಬಾಕ್ಸ್ ಆಫೀಸ್ ನಂಬರ್ ಬಗ್ಗೆ ನಿಮಗೇಕೆ ಚಿಂತೆ? ಸಿನಿಮಾ ನಿಮಗೆ ಇಷ್ಟವಾಯಿತೋ ಇಲ್ಲವೋ ಎಂಬುದರ ಬಗ್ಗೆ ಮಾತ್ರ ಮಾತನಾಡಿ ಎಂದು ಹೇಳಿ ಅವರ ಬಾಯಿ ಮುಚ್ಚಿಸಿದ್ದೇನೆ’ ಎಂದಿದ್ದಾರೆ ಮನೋಜ್ ಬಾಜಪೇಯಿ.

‘ರಾಮಾಯಣ’ ಸಿನಿಮಾದ ಬಜೆಟ್ 4,000 ಕೋಟಿ ರೂಪಾಯಿ ಎನ್ನಲಾಗಿದೆ. ರಣಬೀರ್ ಕಪೂರ್ (ಶ್ರೀರಾಮ), ಸಾಯಿ ಪಲ್ಲವಿ (ಸೀತೆ), ಸನ್ನಿ ಡಿಯೋಲ್ (ಹನುಮಂತ) ಮತ್ತು ರಾಕಿಂಗ್ ಸ್ಟಾರ್ ಯಶ್ (ರಾವಣ) ನಟಿಸುತ್ತಿರುವ ಈ ಸಿನಿಮಾ ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ದುಬಾರಿ ಪ್ರಾಜೆಕ್ಟ್ ಎನ್ನಲಾಗಿದೆ. ಇದರ ಮೊದಲ ಭಾಗ ಈ ವರ್ಷದ ದೀಪಾವಳಿಗೆ ಬಿಡುಗಡೆಯಾಗಲಿದೆ.

ಇದನ್ನೂ ಓದಿ: ‘ರಾಮಾಯಣ’ ಚಿತ್ರಕ್ಕೆ ಪಾಶ್ಚಿಮಾತ್ಯ ಶೈಲಿಯ ಸ್ಪರ್ಶ: ಸಮರ್ಥನೆ ಮಾಡಿಕೊಂಡ ಯಶ್

‘ವಾರಣಾಸಿ’ ಚಿತ್ರದ ಬಜೆಟ್ 1,400 ಕೋಟಿ ರೂಪಾಯಿ ಎಂದು ವರದಿ ಆಗಿದೆ. ಎಸ್‌ಎಸ್ ರಾಜಮೌಳಿ ನಿರ್ದೇಶನದಲ್ಲಿ ಮಹೇಶ್ ಬಾಬು ನಟಿಸುತ್ತಿರುವ ಈ ಚಿತ್ರ ಕೂಡ ಭಾರಿ ಬಜೆಟ್‌ನಲ್ಲಿ ತಯಾರಾಗುತ್ತಿದೆ. ಪ್ರಿಯಾಂಕಾ ಚೋಪ್ರಾ ಕಂಬ್ಯಾಕ್ ಮಾಡುತ್ತಿರುವ ಈ ಸಿನಿಮಾ, ಸಂಪೂರ್ಣವಾಗಿ ‘1.43:1 IMAX’ ಫಾರ್ಮ್ಯಾಟ್‌ನಲ್ಲಿ ಚಿತ್ರೀಕರಣಗೊಳ್ಳುತ್ತಿರುವ ಮೊದಲ ಭಾರತೀಯ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ