‘ದಿ ಫ್ಯಾಮಿಲಿ ಮ್ಯಾನ್​ 2’ ವಿವಾದದ ಬಗ್ಗೆ ಮೌನ ಮುರಿದ ಮನೋಜ್​ ಬಾಜಪೇಯ್

‘ದಿ ಫ್ಯಾಮಿಲಿ ಮ್ಯಾನ್​ ಸೀಸನ್​-2’ ಜೂನ್​ 4ರಂದು ಅಮೇಜಾನ್​ ಪ್ರೈಮ್​ನಲ್ಲಿ ಪ್ರೀಮಿಯರ್​ ಆಗುತ್ತಿದೆ. ಈ ವೆಬ್​ ಸೀರಿಸ್​ನ ನಿರ್ದೇಶನ ಜವಾಬ್ದಾರಿಯನ್ನು ರಾಜ್​ ಮತ್ತು​ ಡಿ.ಕೆ. ನಿಭಾಯಿಸಿದ್ದಾರೆ.

‘ದಿ ಫ್ಯಾಮಿಲಿ ಮ್ಯಾನ್​ 2’ ವಿವಾದದ ಬಗ್ಗೆ ಮೌನ ಮುರಿದ ಮನೋಜ್​ ಬಾಜಪೇಯ್
ಮನೋಜ್​ ಬಾಜಪೇಯಿ
Follow us
|

Updated on: May 26, 2021 | 9:37 PM

‘ದಿ ಫ್ಯಾಮಿಲಿ ಮ್ಯಾನ್​-2’ ವೆಬ್​ ಸೀರಿಸ್​ ಟ್ರೇಲರ್​ ರಿಲೀಸ್​ ಆದ ಕೆಲವೇ ಗಂಟೆಗಳಲ್ಲಿ ವಿವಾದ ಹೊತ್ತಿಸಿತ್ತು. ಈ ವೆಬ್​ ಸೀರಿಸ್​ನಲ್ಲಿ ತಮಿಳರನ್ನು ಉಗ್ರಗಾಮಿಗಳಂತೆ ತೋರಿಸಲಾಗಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗಳು ಕೂಡ ನಡೆದಿದ್ದವು. ಈಗ ಈ ಬಗ್ಗೆ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿರುವ ಮನೋಜ್​ ಬಾಜಪೇಯಿ ಪ್ರತಿಕ್ರಿಯಿಸಿದ್ದಾರೆ.

2019ರಲ್ಲಿ ಬಿಡುಗಡೆ ಆಗಿದ್ದ ‘ದಿ ಫ್ಯಾಮಿಲಿ ಮ್ಯಾನ್​’ ವೆಬ್​ ಸಿರೀಸ್​ ಸಿಕ್ಕಾಪಟ್ಟೆ ಹಿಟ್​ ಆಗಿತ್ತು. ಮನೋಜ್​ ಬಾಜಪೇಯ್​, ಪ್ರಿಯಾಮಣಿ ಮುಂತಾದವರು ಮುಖ್ಯಭೂಮಿಕೆ ನಿಭಾಯಿಸಿದ್ದರು. ‘ದಿ ಫ್ಯಾಮಿಲಿ ಮ್ಯಾನ್​ 2’ಗಾಗಿ ಎಲ್ಲರೂ ಕಾದಿದ್ದರು. ಆದರೆ, ಸಿನಿಮಾ ಟ್ರೇಲರ್​ ತಮಿಳಿಯನ್ನರ ಆಕ್ರೋಶಕ್ಕೆ ಕಾರಣವಾಗಿದೆ. ತಮಿಳು ಜನರನ್ನು ಉಗ್ರಗಾಮಿಗಳ ರೀತಿಯಲ್ಲಿ ತೋರಿಸಲಾಗಿದೆ ಎನ್ನುವ ಆರೋಪ ಮಾಡಲಾಗಿದೆ. ಹೀಗಾಗಿ, ಅಮೇಜಾನ್​ ಪ್ರೈಮ್​ ಟ್ರೇಲರ್ ಎಡಿಟ್​ ಮಾಡುವ ಕೆಲಸವನ್ನು ಕೂಡ ಮಾಡಿದೆ.

ಈ ಬಗ್ಗೆ ಆಂಗ್ಲ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮನೋಜ್​ ಮಾತನಾಡಿದ್ದಾರೆ. ಸೀಸನ್​ ಎರಡರಲ್ಲಿ ಕೆಲಸ ಮಾಡಿದ ಬಹುತೇಕರು ಪ್ರಾಥಮಿಕವಾಗಿ ತಮಿಳಿಯನ್ನರು. ರಾಜ್​ ಮತ್ತು ಡಿಕೆ, ಸಮಂತಾ ಅಕ್ಕಿನೇನಿ, ಪ್ರಿಯಾಮಣಿ, ಸುಮನ್​… ತಮಿಳರ ಹಿತಾಸಕ್ತಿ ಕಾಪಾಡಲು ಇವರಿಗಿಂತ ಬೇರೆ ಬೇಕೆ? ತಮಿಳುನಾಡಿನ ಸಂಸ್ಕೃತಿ ಕಾಪಾಡಲು ಇವರಿಗಿಂತ ಉತ್ತಮ ವ್ಯಕ್ತಿ ಮತ್ತೊಬ್ಬರು ಬೇಕು ಎಂದು ನನಗೆ ಅನ್ನಿಸುವುದಿಲ್ಲ ಎಂದಿದ್ದಾರೆ ಮನೋಜ್​.

‘ದಿ ಫ್ಯಾಮಿಲಿ ಮ್ಯಾನ್​ ಸೀಸನ್​-2’ ಜೂನ್​ 4ರಂದು ಅಮೇಜಾನ್​ ಪ್ರೈಮ್​ನಲ್ಲಿ ಪ್ರೀಮಿಯರ್​ ಆಗುತ್ತಿದೆ. ಈ ವೆಬ್​ ಸೀರಿಸ್​ನ ನಿರ್ದೇಶನ ಜವಾಬ್ದಾರಿಯನ್ನು ರಾಜ್​ ಮತ್ತು​ ಡಿ.ಕೆ. ನಿಭಾಯಿಸಿದ್ದಾರೆ. ಮೊದಲ ಸೀಸನ್​ ದೊಡ್ಡಮಟ್ಟದಲ್ಲಿ ಹಿಟ್ ಆದ್ದರಿಂದ ಎರಡನೇ ಸೀಸನ್​ಮೇಲೆ ಹೆಚ್ಚು ನಿರೀಕ್ಷೆ ಇದೆ.

ಇದನ್ನೂ ಓದಿ: ಮತ್ತೆ ವಿವಾದ ಮಾಡಿಕೊಳ್ಳಲಿದೆಯೇ ಅಮೇಜಾನ್​ ಪ್ರೈಮ್​? ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​​ಗೆ ವಿಘ್ನ

ವೀಕ್ಷಕರು ಕಣ್ತುಂಬಿಕೊಳ್ಳುವ ಮೊದಲೇ ಬ್ಯಾನ್​ ಆಗಲಿದೆ ‘ದಿ ಫ್ಯಾಮಿಲಿ ಮ್ಯಾನ್​-2’?

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!