AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಫ್ಯಾಮಿಲಿ ಮ್ಯಾನ್​ 2’ ವಿವಾದದ ಬಗ್ಗೆ ಮೌನ ಮುರಿದ ಮನೋಜ್​ ಬಾಜಪೇಯ್

‘ದಿ ಫ್ಯಾಮಿಲಿ ಮ್ಯಾನ್​ ಸೀಸನ್​-2’ ಜೂನ್​ 4ರಂದು ಅಮೇಜಾನ್​ ಪ್ರೈಮ್​ನಲ್ಲಿ ಪ್ರೀಮಿಯರ್​ ಆಗುತ್ತಿದೆ. ಈ ವೆಬ್​ ಸೀರಿಸ್​ನ ನಿರ್ದೇಶನ ಜವಾಬ್ದಾರಿಯನ್ನು ರಾಜ್​ ಮತ್ತು​ ಡಿ.ಕೆ. ನಿಭಾಯಿಸಿದ್ದಾರೆ.

‘ದಿ ಫ್ಯಾಮಿಲಿ ಮ್ಯಾನ್​ 2’ ವಿವಾದದ ಬಗ್ಗೆ ಮೌನ ಮುರಿದ ಮನೋಜ್​ ಬಾಜಪೇಯ್
ಮನೋಜ್​ ಬಾಜಪೇಯಿ
ರಾಜೇಶ್ ದುಗ್ಗುಮನೆ
|

Updated on: May 26, 2021 | 9:37 PM

Share

‘ದಿ ಫ್ಯಾಮಿಲಿ ಮ್ಯಾನ್​-2’ ವೆಬ್​ ಸೀರಿಸ್​ ಟ್ರೇಲರ್​ ರಿಲೀಸ್​ ಆದ ಕೆಲವೇ ಗಂಟೆಗಳಲ್ಲಿ ವಿವಾದ ಹೊತ್ತಿಸಿತ್ತು. ಈ ವೆಬ್​ ಸೀರಿಸ್​ನಲ್ಲಿ ತಮಿಳರನ್ನು ಉಗ್ರಗಾಮಿಗಳಂತೆ ತೋರಿಸಲಾಗಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗಳು ಕೂಡ ನಡೆದಿದ್ದವು. ಈಗ ಈ ಬಗ್ಗೆ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿರುವ ಮನೋಜ್​ ಬಾಜಪೇಯಿ ಪ್ರತಿಕ್ರಿಯಿಸಿದ್ದಾರೆ.

2019ರಲ್ಲಿ ಬಿಡುಗಡೆ ಆಗಿದ್ದ ‘ದಿ ಫ್ಯಾಮಿಲಿ ಮ್ಯಾನ್​’ ವೆಬ್​ ಸಿರೀಸ್​ ಸಿಕ್ಕಾಪಟ್ಟೆ ಹಿಟ್​ ಆಗಿತ್ತು. ಮನೋಜ್​ ಬಾಜಪೇಯ್​, ಪ್ರಿಯಾಮಣಿ ಮುಂತಾದವರು ಮುಖ್ಯಭೂಮಿಕೆ ನಿಭಾಯಿಸಿದ್ದರು. ‘ದಿ ಫ್ಯಾಮಿಲಿ ಮ್ಯಾನ್​ 2’ಗಾಗಿ ಎಲ್ಲರೂ ಕಾದಿದ್ದರು. ಆದರೆ, ಸಿನಿಮಾ ಟ್ರೇಲರ್​ ತಮಿಳಿಯನ್ನರ ಆಕ್ರೋಶಕ್ಕೆ ಕಾರಣವಾಗಿದೆ. ತಮಿಳು ಜನರನ್ನು ಉಗ್ರಗಾಮಿಗಳ ರೀತಿಯಲ್ಲಿ ತೋರಿಸಲಾಗಿದೆ ಎನ್ನುವ ಆರೋಪ ಮಾಡಲಾಗಿದೆ. ಹೀಗಾಗಿ, ಅಮೇಜಾನ್​ ಪ್ರೈಮ್​ ಟ್ರೇಲರ್ ಎಡಿಟ್​ ಮಾಡುವ ಕೆಲಸವನ್ನು ಕೂಡ ಮಾಡಿದೆ.

ಈ ಬಗ್ಗೆ ಆಂಗ್ಲ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮನೋಜ್​ ಮಾತನಾಡಿದ್ದಾರೆ. ಸೀಸನ್​ ಎರಡರಲ್ಲಿ ಕೆಲಸ ಮಾಡಿದ ಬಹುತೇಕರು ಪ್ರಾಥಮಿಕವಾಗಿ ತಮಿಳಿಯನ್ನರು. ರಾಜ್​ ಮತ್ತು ಡಿಕೆ, ಸಮಂತಾ ಅಕ್ಕಿನೇನಿ, ಪ್ರಿಯಾಮಣಿ, ಸುಮನ್​… ತಮಿಳರ ಹಿತಾಸಕ್ತಿ ಕಾಪಾಡಲು ಇವರಿಗಿಂತ ಬೇರೆ ಬೇಕೆ? ತಮಿಳುನಾಡಿನ ಸಂಸ್ಕೃತಿ ಕಾಪಾಡಲು ಇವರಿಗಿಂತ ಉತ್ತಮ ವ್ಯಕ್ತಿ ಮತ್ತೊಬ್ಬರು ಬೇಕು ಎಂದು ನನಗೆ ಅನ್ನಿಸುವುದಿಲ್ಲ ಎಂದಿದ್ದಾರೆ ಮನೋಜ್​.

‘ದಿ ಫ್ಯಾಮಿಲಿ ಮ್ಯಾನ್​ ಸೀಸನ್​-2’ ಜೂನ್​ 4ರಂದು ಅಮೇಜಾನ್​ ಪ್ರೈಮ್​ನಲ್ಲಿ ಪ್ರೀಮಿಯರ್​ ಆಗುತ್ತಿದೆ. ಈ ವೆಬ್​ ಸೀರಿಸ್​ನ ನಿರ್ದೇಶನ ಜವಾಬ್ದಾರಿಯನ್ನು ರಾಜ್​ ಮತ್ತು​ ಡಿ.ಕೆ. ನಿಭಾಯಿಸಿದ್ದಾರೆ. ಮೊದಲ ಸೀಸನ್​ ದೊಡ್ಡಮಟ್ಟದಲ್ಲಿ ಹಿಟ್ ಆದ್ದರಿಂದ ಎರಡನೇ ಸೀಸನ್​ಮೇಲೆ ಹೆಚ್ಚು ನಿರೀಕ್ಷೆ ಇದೆ.

ಇದನ್ನೂ ಓದಿ: ಮತ್ತೆ ವಿವಾದ ಮಾಡಿಕೊಳ್ಳಲಿದೆಯೇ ಅಮೇಜಾನ್​ ಪ್ರೈಮ್​? ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​​ಗೆ ವಿಘ್ನ

ವೀಕ್ಷಕರು ಕಣ್ತುಂಬಿಕೊಳ್ಳುವ ಮೊದಲೇ ಬ್ಯಾನ್​ ಆಗಲಿದೆ ‘ದಿ ಫ್ಯಾಮಿಲಿ ಮ್ಯಾನ್​-2’?

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ