AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಫ್ಯಾಮಿಲಿ ಮ್ಯಾನ್​ 2’ ವಿವಾದದ ಬಗ್ಗೆ ಮೌನ ಮುರಿದ ಮನೋಜ್​ ಬಾಜಪೇಯ್

‘ದಿ ಫ್ಯಾಮಿಲಿ ಮ್ಯಾನ್​ ಸೀಸನ್​-2’ ಜೂನ್​ 4ರಂದು ಅಮೇಜಾನ್​ ಪ್ರೈಮ್​ನಲ್ಲಿ ಪ್ರೀಮಿಯರ್​ ಆಗುತ್ತಿದೆ. ಈ ವೆಬ್​ ಸೀರಿಸ್​ನ ನಿರ್ದೇಶನ ಜವಾಬ್ದಾರಿಯನ್ನು ರಾಜ್​ ಮತ್ತು​ ಡಿ.ಕೆ. ನಿಭಾಯಿಸಿದ್ದಾರೆ.

‘ದಿ ಫ್ಯಾಮಿಲಿ ಮ್ಯಾನ್​ 2’ ವಿವಾದದ ಬಗ್ಗೆ ಮೌನ ಮುರಿದ ಮನೋಜ್​ ಬಾಜಪೇಯ್
ಮನೋಜ್​ ಬಾಜಪೇಯಿ
Follow us
ರಾಜೇಶ್ ದುಗ್ಗುಮನೆ
|

Updated on: May 26, 2021 | 9:37 PM

‘ದಿ ಫ್ಯಾಮಿಲಿ ಮ್ಯಾನ್​-2’ ವೆಬ್​ ಸೀರಿಸ್​ ಟ್ರೇಲರ್​ ರಿಲೀಸ್​ ಆದ ಕೆಲವೇ ಗಂಟೆಗಳಲ್ಲಿ ವಿವಾದ ಹೊತ್ತಿಸಿತ್ತು. ಈ ವೆಬ್​ ಸೀರಿಸ್​ನಲ್ಲಿ ತಮಿಳರನ್ನು ಉಗ್ರಗಾಮಿಗಳಂತೆ ತೋರಿಸಲಾಗಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗಳು ಕೂಡ ನಡೆದಿದ್ದವು. ಈಗ ಈ ಬಗ್ಗೆ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿರುವ ಮನೋಜ್​ ಬಾಜಪೇಯಿ ಪ್ರತಿಕ್ರಿಯಿಸಿದ್ದಾರೆ.

2019ರಲ್ಲಿ ಬಿಡುಗಡೆ ಆಗಿದ್ದ ‘ದಿ ಫ್ಯಾಮಿಲಿ ಮ್ಯಾನ್​’ ವೆಬ್​ ಸಿರೀಸ್​ ಸಿಕ್ಕಾಪಟ್ಟೆ ಹಿಟ್​ ಆಗಿತ್ತು. ಮನೋಜ್​ ಬಾಜಪೇಯ್​, ಪ್ರಿಯಾಮಣಿ ಮುಂತಾದವರು ಮುಖ್ಯಭೂಮಿಕೆ ನಿಭಾಯಿಸಿದ್ದರು. ‘ದಿ ಫ್ಯಾಮಿಲಿ ಮ್ಯಾನ್​ 2’ಗಾಗಿ ಎಲ್ಲರೂ ಕಾದಿದ್ದರು. ಆದರೆ, ಸಿನಿಮಾ ಟ್ರೇಲರ್​ ತಮಿಳಿಯನ್ನರ ಆಕ್ರೋಶಕ್ಕೆ ಕಾರಣವಾಗಿದೆ. ತಮಿಳು ಜನರನ್ನು ಉಗ್ರಗಾಮಿಗಳ ರೀತಿಯಲ್ಲಿ ತೋರಿಸಲಾಗಿದೆ ಎನ್ನುವ ಆರೋಪ ಮಾಡಲಾಗಿದೆ. ಹೀಗಾಗಿ, ಅಮೇಜಾನ್​ ಪ್ರೈಮ್​ ಟ್ರೇಲರ್ ಎಡಿಟ್​ ಮಾಡುವ ಕೆಲಸವನ್ನು ಕೂಡ ಮಾಡಿದೆ.

ಈ ಬಗ್ಗೆ ಆಂಗ್ಲ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮನೋಜ್​ ಮಾತನಾಡಿದ್ದಾರೆ. ಸೀಸನ್​ ಎರಡರಲ್ಲಿ ಕೆಲಸ ಮಾಡಿದ ಬಹುತೇಕರು ಪ್ರಾಥಮಿಕವಾಗಿ ತಮಿಳಿಯನ್ನರು. ರಾಜ್​ ಮತ್ತು ಡಿಕೆ, ಸಮಂತಾ ಅಕ್ಕಿನೇನಿ, ಪ್ರಿಯಾಮಣಿ, ಸುಮನ್​… ತಮಿಳರ ಹಿತಾಸಕ್ತಿ ಕಾಪಾಡಲು ಇವರಿಗಿಂತ ಬೇರೆ ಬೇಕೆ? ತಮಿಳುನಾಡಿನ ಸಂಸ್ಕೃತಿ ಕಾಪಾಡಲು ಇವರಿಗಿಂತ ಉತ್ತಮ ವ್ಯಕ್ತಿ ಮತ್ತೊಬ್ಬರು ಬೇಕು ಎಂದು ನನಗೆ ಅನ್ನಿಸುವುದಿಲ್ಲ ಎಂದಿದ್ದಾರೆ ಮನೋಜ್​.

‘ದಿ ಫ್ಯಾಮಿಲಿ ಮ್ಯಾನ್​ ಸೀಸನ್​-2’ ಜೂನ್​ 4ರಂದು ಅಮೇಜಾನ್​ ಪ್ರೈಮ್​ನಲ್ಲಿ ಪ್ರೀಮಿಯರ್​ ಆಗುತ್ತಿದೆ. ಈ ವೆಬ್​ ಸೀರಿಸ್​ನ ನಿರ್ದೇಶನ ಜವಾಬ್ದಾರಿಯನ್ನು ರಾಜ್​ ಮತ್ತು​ ಡಿ.ಕೆ. ನಿಭಾಯಿಸಿದ್ದಾರೆ. ಮೊದಲ ಸೀಸನ್​ ದೊಡ್ಡಮಟ್ಟದಲ್ಲಿ ಹಿಟ್ ಆದ್ದರಿಂದ ಎರಡನೇ ಸೀಸನ್​ಮೇಲೆ ಹೆಚ್ಚು ನಿರೀಕ್ಷೆ ಇದೆ.

ಇದನ್ನೂ ಓದಿ: ಮತ್ತೆ ವಿವಾದ ಮಾಡಿಕೊಳ್ಳಲಿದೆಯೇ ಅಮೇಜಾನ್​ ಪ್ರೈಮ್​? ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​​ಗೆ ವಿಘ್ನ

ವೀಕ್ಷಕರು ಕಣ್ತುಂಬಿಕೊಳ್ಳುವ ಮೊದಲೇ ಬ್ಯಾನ್​ ಆಗಲಿದೆ ‘ದಿ ಫ್ಯಾಮಿಲಿ ಮ್ಯಾನ್​-2’?

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್