AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಫ್ಯಾಮಿಲಿ ಮ್ಯಾನ್​ 2’ ವಿವಾದದ ಬಗ್ಗೆ ಮೌನ ಮುರಿದ ಮನೋಜ್​ ಬಾಜಪೇಯ್

‘ದಿ ಫ್ಯಾಮಿಲಿ ಮ್ಯಾನ್​ ಸೀಸನ್​-2’ ಜೂನ್​ 4ರಂದು ಅಮೇಜಾನ್​ ಪ್ರೈಮ್​ನಲ್ಲಿ ಪ್ರೀಮಿಯರ್​ ಆಗುತ್ತಿದೆ. ಈ ವೆಬ್​ ಸೀರಿಸ್​ನ ನಿರ್ದೇಶನ ಜವಾಬ್ದಾರಿಯನ್ನು ರಾಜ್​ ಮತ್ತು​ ಡಿ.ಕೆ. ನಿಭಾಯಿಸಿದ್ದಾರೆ.

‘ದಿ ಫ್ಯಾಮಿಲಿ ಮ್ಯಾನ್​ 2’ ವಿವಾದದ ಬಗ್ಗೆ ಮೌನ ಮುರಿದ ಮನೋಜ್​ ಬಾಜಪೇಯ್
ಮನೋಜ್​ ಬಾಜಪೇಯಿ
ರಾಜೇಶ್ ದುಗ್ಗುಮನೆ
|

Updated on: May 26, 2021 | 9:37 PM

Share

‘ದಿ ಫ್ಯಾಮಿಲಿ ಮ್ಯಾನ್​-2’ ವೆಬ್​ ಸೀರಿಸ್​ ಟ್ರೇಲರ್​ ರಿಲೀಸ್​ ಆದ ಕೆಲವೇ ಗಂಟೆಗಳಲ್ಲಿ ವಿವಾದ ಹೊತ್ತಿಸಿತ್ತು. ಈ ವೆಬ್​ ಸೀರಿಸ್​ನಲ್ಲಿ ತಮಿಳರನ್ನು ಉಗ್ರಗಾಮಿಗಳಂತೆ ತೋರಿಸಲಾಗಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗಳು ಕೂಡ ನಡೆದಿದ್ದವು. ಈಗ ಈ ಬಗ್ಗೆ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿರುವ ಮನೋಜ್​ ಬಾಜಪೇಯಿ ಪ್ರತಿಕ್ರಿಯಿಸಿದ್ದಾರೆ.

2019ರಲ್ಲಿ ಬಿಡುಗಡೆ ಆಗಿದ್ದ ‘ದಿ ಫ್ಯಾಮಿಲಿ ಮ್ಯಾನ್​’ ವೆಬ್​ ಸಿರೀಸ್​ ಸಿಕ್ಕಾಪಟ್ಟೆ ಹಿಟ್​ ಆಗಿತ್ತು. ಮನೋಜ್​ ಬಾಜಪೇಯ್​, ಪ್ರಿಯಾಮಣಿ ಮುಂತಾದವರು ಮುಖ್ಯಭೂಮಿಕೆ ನಿಭಾಯಿಸಿದ್ದರು. ‘ದಿ ಫ್ಯಾಮಿಲಿ ಮ್ಯಾನ್​ 2’ಗಾಗಿ ಎಲ್ಲರೂ ಕಾದಿದ್ದರು. ಆದರೆ, ಸಿನಿಮಾ ಟ್ರೇಲರ್​ ತಮಿಳಿಯನ್ನರ ಆಕ್ರೋಶಕ್ಕೆ ಕಾರಣವಾಗಿದೆ. ತಮಿಳು ಜನರನ್ನು ಉಗ್ರಗಾಮಿಗಳ ರೀತಿಯಲ್ಲಿ ತೋರಿಸಲಾಗಿದೆ ಎನ್ನುವ ಆರೋಪ ಮಾಡಲಾಗಿದೆ. ಹೀಗಾಗಿ, ಅಮೇಜಾನ್​ ಪ್ರೈಮ್​ ಟ್ರೇಲರ್ ಎಡಿಟ್​ ಮಾಡುವ ಕೆಲಸವನ್ನು ಕೂಡ ಮಾಡಿದೆ.

ಈ ಬಗ್ಗೆ ಆಂಗ್ಲ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮನೋಜ್​ ಮಾತನಾಡಿದ್ದಾರೆ. ಸೀಸನ್​ ಎರಡರಲ್ಲಿ ಕೆಲಸ ಮಾಡಿದ ಬಹುತೇಕರು ಪ್ರಾಥಮಿಕವಾಗಿ ತಮಿಳಿಯನ್ನರು. ರಾಜ್​ ಮತ್ತು ಡಿಕೆ, ಸಮಂತಾ ಅಕ್ಕಿನೇನಿ, ಪ್ರಿಯಾಮಣಿ, ಸುಮನ್​… ತಮಿಳರ ಹಿತಾಸಕ್ತಿ ಕಾಪಾಡಲು ಇವರಿಗಿಂತ ಬೇರೆ ಬೇಕೆ? ತಮಿಳುನಾಡಿನ ಸಂಸ್ಕೃತಿ ಕಾಪಾಡಲು ಇವರಿಗಿಂತ ಉತ್ತಮ ವ್ಯಕ್ತಿ ಮತ್ತೊಬ್ಬರು ಬೇಕು ಎಂದು ನನಗೆ ಅನ್ನಿಸುವುದಿಲ್ಲ ಎಂದಿದ್ದಾರೆ ಮನೋಜ್​.

‘ದಿ ಫ್ಯಾಮಿಲಿ ಮ್ಯಾನ್​ ಸೀಸನ್​-2’ ಜೂನ್​ 4ರಂದು ಅಮೇಜಾನ್​ ಪ್ರೈಮ್​ನಲ್ಲಿ ಪ್ರೀಮಿಯರ್​ ಆಗುತ್ತಿದೆ. ಈ ವೆಬ್​ ಸೀರಿಸ್​ನ ನಿರ್ದೇಶನ ಜವಾಬ್ದಾರಿಯನ್ನು ರಾಜ್​ ಮತ್ತು​ ಡಿ.ಕೆ. ನಿಭಾಯಿಸಿದ್ದಾರೆ. ಮೊದಲ ಸೀಸನ್​ ದೊಡ್ಡಮಟ್ಟದಲ್ಲಿ ಹಿಟ್ ಆದ್ದರಿಂದ ಎರಡನೇ ಸೀಸನ್​ಮೇಲೆ ಹೆಚ್ಚು ನಿರೀಕ್ಷೆ ಇದೆ.

ಇದನ್ನೂ ಓದಿ: ಮತ್ತೆ ವಿವಾದ ಮಾಡಿಕೊಳ್ಳಲಿದೆಯೇ ಅಮೇಜಾನ್​ ಪ್ರೈಮ್​? ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​​ಗೆ ವಿಘ್ನ

ವೀಕ್ಷಕರು ಕಣ್ತುಂಬಿಕೊಳ್ಳುವ ಮೊದಲೇ ಬ್ಯಾನ್​ ಆಗಲಿದೆ ‘ದಿ ಫ್ಯಾಮಿಲಿ ಮ್ಯಾನ್​-2’?

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!