AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿನ್ನ ಕೊಂದು ತೆಗೆಯುತ್ತಾರೆ’; ಸುಶಾಂತ್ಗೆ ಎಚ್ಚರಿಸಿದ್ದ ಮನೋಜ್ ಬಾಜಪೇಯಿ

Manoj Bajpayee: ಮನೋಜ್ ಬಾಜಪಾಯಿ ಅವರು ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಚಲನಚಿತ್ರ ರಂಗದ ರಾಜಕೀಯದಿಂದ ಸುಶಾಂತ್ ಸಾವನ್ನಪ್ಪಿದ್ದಾರೆ ಎಂದು ಅವರು ನಂಬುತ್ತಾರೆ. ಸುಶಾಂತ್ ಜೊತೆಗಿನ ತಮ್ಮ ಸಂಬಂಧ, ಅವರ ಬುದ್ಧಿವಂತಿಕೆ ಮತ್ತು ಚಲನಚಿತ್ರ ರಂಗದ ಕಠಿಣ ಸ್ಪರ್ಧೆಯ ಬಗ್ಗೆಯೂ ಮಾತನಾಡಿದ್ದಾರೆ. ಸುಶಾಂತ್‌ಗೆ ಈ ಕಠಿಣ ಸ್ಪರ್ಧೆಯನ್ನು ಎದುರಿಸಲು ಎಚ್ಚರಿಕೆ ನೀಡಿದ್ದೆ ಎಂದು ಅವರು ಹೇಳಿದ್ದಾರೆ.

‘ನಿನ್ನ ಕೊಂದು ತೆಗೆಯುತ್ತಾರೆ’; ಸುಶಾಂತ್ಗೆ ಎಚ್ಚರಿಸಿದ್ದ ಮನೋಜ್ ಬಾಜಪೇಯಿ
Manoj Sushanth
 ಶ್ರೀಲಕ್ಷ್ಮೀ ಎಚ್
| Edited By: |

Updated on:Jan 10, 2025 | 2:07 PM

Share

‘ದಿ ಫ್ಯಾಮಿಲಿ ಮ್ಯಾನ್’ ನಟ ಮನೋಜ್ ಬಾಜಪೇಯಿ ಅವರು ಅನೇಕ ವಿಚಾರಗಳ ಬಗ್ಗೆ ಮಾತನಾಡುತ್ತಾ ಇರುತ್ತಾರೆ. ಇತ್ತೀಚೆಗೆ ಅವರು ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಗ್ಗೆ ಮಾತನಾಡಿದ್ದಾರೆ. ಚಿತ್ರರಂಗದಲ್ಲಿ ನಡೆದ ರಾಜಕೀಯದಿಂದ ಅವರು ಮೃತಪಟ್ಟರು ಎಂದು ಮನೋಜ್ ಅಭಿಪ್ರಾಯಪಟ್ಟಿದ್ದಾರೆ. ವೈಯಕ್ತಿಕವಾಗಿ ಸಾಕಷ್ಟು ನಷ್ಟವಾಗಿದೆ ಎಂದು ಮನೋಜ್ ಅವರು ಹೇಳಿದ್ದಾರೆ.

‘ನಾನು ಹಾಗೂ ಸುಶಾಂತ್ ಇಂಡಸ್ಟ್ರಿ ಪಾಲಿಟಿಕ್ಸ್ ಬಗ್ಗೆ ಮಾತನಾಡುತ್ತಿದ್ದೆವು. ಯಾವಾಗಲೂ ದಪ್ಪ ಚರ್ಮ ಹೊಂದಿರಬೇಕು ಇಲ್ಲದಿದ್ದರೆ ಇವರು ನಿನ್ನ ಕೊಂದು ತೆಗೆಯುತ್ತಾರೆ ಎಂದು ಅವನಿಗೆ ಎಚ್ಚರಿಸಿದ್ದೆ. ನಾನು ಸಾಕಷ್ಟು ರಿಜೆಕ್ಷನ್ಗಳನ್ನು ನೋಡಿದ್ದೇನೆ. ನನ್ನದು ಒರಟು ಚರ್ಮ. ನನ್ನ ಅನೇಕ ಗೆಳೆಯರಿಗೆ ನನ್ನ ರೀತಿಯ ಗುಣ ಇಲ್ಲ. ನನ್ನಂತೆ ಅವರು ರಿಜೆಕ್ಷನ್ಗಳನ್ನು ಎದುರಿಸಲು ಸಾಧ್ಯವಾಗಿಲ್ಲ’ ಎಂದಿದ್ದಾರೆ ಮನೋಜ್ ಬಾಜಪೇಯಿ.

‘ಸುಶಾಂತ್ ಯಾವಾಗಲೂ ಮೂಡಿ ಆಗಿದ್ದ. ಅಶುತೋಶ್ ರಾಣಾ, ರಣವೀರ್ ಶೋರೆ, ಸುಶಾಂತ್ ಸಿಂಗ್ ಹಾಗ ನಾನು ಒಂದೇ ರೀತಿ ಆಲೋಚಿಸುತ್ತಿದ್ದೆವು. ನಾವು ಆಗಾಗ ಭೇಟಿ ಮಾಡುತ್ತಿದ್ದೆವು. ಕೊವಿಡ್ ಬರುವುದಕ್ಕೂ ಮೊದಲು ಸುಶಾಂತ್ ನನಗೆ ಕರೆ ಮಾಡಿ, ನೀವು ಮಾಡುವ ಮಟನ್ ಕರಿ ತಿನ್ನಬೇಕು ಎನಿಸುತ್ತಿದೆ ಎಂದಿದ್ದರು. ಮುಂದೆ ಯಾವಾಗದರೂ ಮಾಡಿದರೆ ನನ್ನನ್ನು ಕರೆಯಿರಿ ಎಂದಿದ್ದರು’ ಎಂಬುದಾಗಿ ಹಳೆಯ ಘಟನೆ ಬಗ್ಗೆ ಮನೋಜ್ ಹೇಳಿದ್ದಾರೆ.

ಇದನ್ನೂ ಓದಿ:ಕನ್ಫ್ಯೂಸ್ ಆಗ್ಬೇಡಿ; ಸುಶಾಂತ್ ಸಿಂಗ್ ರೀತಿ ಕಾಣಿಸುತ್ತಾರೆ ಈ ಯುವಕ

‘ಅವನಿಗೆ ಏನಾಗಿದೆ ಎಂದು ಯಾರಿಗೂ ತಿಳಿದಿಲ್ಲ. ನಾವು ಎಲ್ಲವನ್ನೂ ಊಹಿಸಬಹುದಷ್ಟೇ. ನಾನು ಅವನ ಜೊತೆ ಕೆಲಸ ಮಾಡಿದ್ದೇನೆ. ಅವನು ಈ ರೀತಿಯ ಹುಡುಗನಲ್ಲ. ಅವನು ಯಾವಾಗಲೂ ಓದುತ್ತಾ ಇರುತ್ತಿದ್ದ. ಸೆಟ್ ಒಳಗೂ, ಹೊರಗೂ ಇದೇ ರೀತಿ ಇರುತ್ತಿದ್ದ’ ಎಂದಿದ್ದಾರೆ ಮನೋಜ್.

‘ಅವನಿಗೆ ಫಿಸಿಕ್ಸ್ ಬಗ್ಗೆ ಸಾಕಷ್ಟು ಜ್ಞಾನ ಇತ್ತು. ಆಧ್ಯತ್ಮದ ಬಗ್ಗೆ ಮಾತನಾಡುತ್ತಿದ್ದ. ಅದನ್ನು ಕ್ವಾಂಟಂ ಫಿಸಿಕ್ಸ್ ಜೊತೆ ಹೋಲಿಕೆ ಮಾಡುತ್ತಿದ್ದ. ಅವನಿಗೆ ಅದ್ಭುತ ಜ್ಞಾನ ಇತ್ತು. ಅವನಿಗೆ ಏನಾಗಿದೆ ಎಂಬುದು ನನಗೆ ಗೊತ್ತಿಲ್ಲ. ಸಿಬಿಐ ಕೂಡ ತನಿಖೆ ನಡೆಸುತ್ತಲೇ ಇದೆ. ಅವನು ಸತ್ತಾಗ ನಾನು ಮೂರು ತಿಂಗಳು ದುಃಖದಲ್ಲೇ ಇದ್ದೆ’ ಎಂದಿದ್ದಾರೆ ಅವರು. ಮನೋಜ್ ಅವರು ‘ದಿ ಫ್ಯಾಮಿಲಿ ಮ್ಯಾನ್ 3’ ಸೀರಿಸ್ನಲ್ಲಿ ಬ್ಯುಸಿ ಆಗಬೇಕಿದೆ. ಈ ವರ್ಷ ಈ ಸೀರಿಸ್ ಬರುವ ನಿರೀಕ್ಷೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:25 pm, Thu, 9 January 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​