AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿನ್ನ ಕೊಂದು ತೆಗೆಯುತ್ತಾರೆ’; ಸುಶಾಂತ್ಗೆ ಎಚ್ಚರಿಸಿದ್ದ ಮನೋಜ್ ಬಾಜಪೇಯಿ

Manoj Bajpayee: ಮನೋಜ್ ಬಾಜಪಾಯಿ ಅವರು ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಚಲನಚಿತ್ರ ರಂಗದ ರಾಜಕೀಯದಿಂದ ಸುಶಾಂತ್ ಸಾವನ್ನಪ್ಪಿದ್ದಾರೆ ಎಂದು ಅವರು ನಂಬುತ್ತಾರೆ. ಸುಶಾಂತ್ ಜೊತೆಗಿನ ತಮ್ಮ ಸಂಬಂಧ, ಅವರ ಬುದ್ಧಿವಂತಿಕೆ ಮತ್ತು ಚಲನಚಿತ್ರ ರಂಗದ ಕಠಿಣ ಸ್ಪರ್ಧೆಯ ಬಗ್ಗೆಯೂ ಮಾತನಾಡಿದ್ದಾರೆ. ಸುಶಾಂತ್‌ಗೆ ಈ ಕಠಿಣ ಸ್ಪರ್ಧೆಯನ್ನು ಎದುರಿಸಲು ಎಚ್ಚರಿಕೆ ನೀಡಿದ್ದೆ ಎಂದು ಅವರು ಹೇಳಿದ್ದಾರೆ.

‘ನಿನ್ನ ಕೊಂದು ತೆಗೆಯುತ್ತಾರೆ’; ಸುಶಾಂತ್ಗೆ ಎಚ್ಚರಿಸಿದ್ದ ಮನೋಜ್ ಬಾಜಪೇಯಿ
Manoj Sushanth
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on:Jan 10, 2025 | 2:07 PM

Share

‘ದಿ ಫ್ಯಾಮಿಲಿ ಮ್ಯಾನ್’ ನಟ ಮನೋಜ್ ಬಾಜಪೇಯಿ ಅವರು ಅನೇಕ ವಿಚಾರಗಳ ಬಗ್ಗೆ ಮಾತನಾಡುತ್ತಾ ಇರುತ್ತಾರೆ. ಇತ್ತೀಚೆಗೆ ಅವರು ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಗ್ಗೆ ಮಾತನಾಡಿದ್ದಾರೆ. ಚಿತ್ರರಂಗದಲ್ಲಿ ನಡೆದ ರಾಜಕೀಯದಿಂದ ಅವರು ಮೃತಪಟ್ಟರು ಎಂದು ಮನೋಜ್ ಅಭಿಪ್ರಾಯಪಟ್ಟಿದ್ದಾರೆ. ವೈಯಕ್ತಿಕವಾಗಿ ಸಾಕಷ್ಟು ನಷ್ಟವಾಗಿದೆ ಎಂದು ಮನೋಜ್ ಅವರು ಹೇಳಿದ್ದಾರೆ.

‘ನಾನು ಹಾಗೂ ಸುಶಾಂತ್ ಇಂಡಸ್ಟ್ರಿ ಪಾಲಿಟಿಕ್ಸ್ ಬಗ್ಗೆ ಮಾತನಾಡುತ್ತಿದ್ದೆವು. ಯಾವಾಗಲೂ ದಪ್ಪ ಚರ್ಮ ಹೊಂದಿರಬೇಕು ಇಲ್ಲದಿದ್ದರೆ ಇವರು ನಿನ್ನ ಕೊಂದು ತೆಗೆಯುತ್ತಾರೆ ಎಂದು ಅವನಿಗೆ ಎಚ್ಚರಿಸಿದ್ದೆ. ನಾನು ಸಾಕಷ್ಟು ರಿಜೆಕ್ಷನ್ಗಳನ್ನು ನೋಡಿದ್ದೇನೆ. ನನ್ನದು ಒರಟು ಚರ್ಮ. ನನ್ನ ಅನೇಕ ಗೆಳೆಯರಿಗೆ ನನ್ನ ರೀತಿಯ ಗುಣ ಇಲ್ಲ. ನನ್ನಂತೆ ಅವರು ರಿಜೆಕ್ಷನ್ಗಳನ್ನು ಎದುರಿಸಲು ಸಾಧ್ಯವಾಗಿಲ್ಲ’ ಎಂದಿದ್ದಾರೆ ಮನೋಜ್ ಬಾಜಪೇಯಿ.

‘ಸುಶಾಂತ್ ಯಾವಾಗಲೂ ಮೂಡಿ ಆಗಿದ್ದ. ಅಶುತೋಶ್ ರಾಣಾ, ರಣವೀರ್ ಶೋರೆ, ಸುಶಾಂತ್ ಸಿಂಗ್ ಹಾಗ ನಾನು ಒಂದೇ ರೀತಿ ಆಲೋಚಿಸುತ್ತಿದ್ದೆವು. ನಾವು ಆಗಾಗ ಭೇಟಿ ಮಾಡುತ್ತಿದ್ದೆವು. ಕೊವಿಡ್ ಬರುವುದಕ್ಕೂ ಮೊದಲು ಸುಶಾಂತ್ ನನಗೆ ಕರೆ ಮಾಡಿ, ನೀವು ಮಾಡುವ ಮಟನ್ ಕರಿ ತಿನ್ನಬೇಕು ಎನಿಸುತ್ತಿದೆ ಎಂದಿದ್ದರು. ಮುಂದೆ ಯಾವಾಗದರೂ ಮಾಡಿದರೆ ನನ್ನನ್ನು ಕರೆಯಿರಿ ಎಂದಿದ್ದರು’ ಎಂಬುದಾಗಿ ಹಳೆಯ ಘಟನೆ ಬಗ್ಗೆ ಮನೋಜ್ ಹೇಳಿದ್ದಾರೆ.

ಇದನ್ನೂ ಓದಿ:ಕನ್ಫ್ಯೂಸ್ ಆಗ್ಬೇಡಿ; ಸುಶಾಂತ್ ಸಿಂಗ್ ರೀತಿ ಕಾಣಿಸುತ್ತಾರೆ ಈ ಯುವಕ

‘ಅವನಿಗೆ ಏನಾಗಿದೆ ಎಂದು ಯಾರಿಗೂ ತಿಳಿದಿಲ್ಲ. ನಾವು ಎಲ್ಲವನ್ನೂ ಊಹಿಸಬಹುದಷ್ಟೇ. ನಾನು ಅವನ ಜೊತೆ ಕೆಲಸ ಮಾಡಿದ್ದೇನೆ. ಅವನು ಈ ರೀತಿಯ ಹುಡುಗನಲ್ಲ. ಅವನು ಯಾವಾಗಲೂ ಓದುತ್ತಾ ಇರುತ್ತಿದ್ದ. ಸೆಟ್ ಒಳಗೂ, ಹೊರಗೂ ಇದೇ ರೀತಿ ಇರುತ್ತಿದ್ದ’ ಎಂದಿದ್ದಾರೆ ಮನೋಜ್.

‘ಅವನಿಗೆ ಫಿಸಿಕ್ಸ್ ಬಗ್ಗೆ ಸಾಕಷ್ಟು ಜ್ಞಾನ ಇತ್ತು. ಆಧ್ಯತ್ಮದ ಬಗ್ಗೆ ಮಾತನಾಡುತ್ತಿದ್ದ. ಅದನ್ನು ಕ್ವಾಂಟಂ ಫಿಸಿಕ್ಸ್ ಜೊತೆ ಹೋಲಿಕೆ ಮಾಡುತ್ತಿದ್ದ. ಅವನಿಗೆ ಅದ್ಭುತ ಜ್ಞಾನ ಇತ್ತು. ಅವನಿಗೆ ಏನಾಗಿದೆ ಎಂಬುದು ನನಗೆ ಗೊತ್ತಿಲ್ಲ. ಸಿಬಿಐ ಕೂಡ ತನಿಖೆ ನಡೆಸುತ್ತಲೇ ಇದೆ. ಅವನು ಸತ್ತಾಗ ನಾನು ಮೂರು ತಿಂಗಳು ದುಃಖದಲ್ಲೇ ಇದ್ದೆ’ ಎಂದಿದ್ದಾರೆ ಅವರು. ಮನೋಜ್ ಅವರು ‘ದಿ ಫ್ಯಾಮಿಲಿ ಮ್ಯಾನ್ 3’ ಸೀರಿಸ್ನಲ್ಲಿ ಬ್ಯುಸಿ ಆಗಬೇಕಿದೆ. ಈ ವರ್ಷ ಈ ಸೀರಿಸ್ ಬರುವ ನಿರೀಕ್ಷೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:25 pm, Thu, 9 January 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ