AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ, ಹೆಂಡತಿ ಬಿಟ್ಟುಹೋದ ನೋವು; ಇದು ಮನೋಜ್​ ಬಾಜ​​ಪೇಯಿ ಜೀವನದ ಕಥೆ

ಸಾಕಷ್ಟು ಸಿನಿಮಾಗಳಲ್ಲಿ ನಟಿಸೋ ಅವಕಾಶ ಕೈ ತಪ್ಪಿ ಹೋಗಿತ್ತು. ನಂತರ ನಿಧಾನವಾಗಿ ನೆಲೆ ಕಂಡುಕೊಂಡರು. ಇನ್ನು, ಮನೋಜ್​ ಅವರು ದೆಹಲಿ ಮೂಲದ ಹುಡುಗಿಯನ್ನು ಮದುವೆ ಕೂಡ ಆದರು.

ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ, ಹೆಂಡತಿ ಬಿಟ್ಟುಹೋದ ನೋವು; ಇದು ಮನೋಜ್​ ಬಾಜ​​ಪೇಯಿ ಜೀವನದ ಕಥೆ
ಮನೋಜ್​ ಬಾಜಪೇಯಿ
ರಾಜೇಶ್ ದುಗ್ಗುಮನೆ
|

Updated on:Apr 23, 2022 | 8:39 AM

Share

 ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸೀರಿಸ್​ ಮೂಲಕ ಮನೋಜ್​ ಬಾಜ​ಪೇಯಿ​ ತಾವು ಎಂತಹ ಆ್ಯಕ್ಟರ್​ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಅವರ ನಟನೆ ನೋಡಿ ಫಿದಾ ಆದವರ ಸಂಖ್ಯೆ ದೊಡ್ಡದಿದೆ. ಆದರೆ, ಮನೋಜ್​ ಅವರ ಬದುಕು ಅಷ್ಟು ಸಲಭದ್ದಾಗಿರಲಿಲ್ಲ. ಅವರು ಒಮ್ಮೆ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೂ ಬಂದಿದ್ದರು.

ಮನೋಜ್​ ಬಿಹಾರದ ಸಣ್ಣ ಹಳ್ಳಿಯಲ್ಲಿ ಹುಟ್ಟಿದವರು. ಗುಡಿಸಲಲ್ಲಿ ನಡೆಸುತ್ತಿದ್ದ ಶಾಲೆಗೆ ಮನೋಜ್​ ತೆರಳುತ್ತಿದ್ದರು. ಅವರಿಗೆ ಅಮಿತಾಭ್​ ಎಂದರೆ ಬಹಳ ಇಷ್ಟ. ಆಗಲೇ ನಟನೆ ಬಗ್ಗೆ ಆಸಕ್ತಿ ಬೆಳೆಸಿಕೊಂಡರು. 17ನೇ ವಯಸ್ಸಿಗೆ ದೆಹಲಿಗೆ ಬಂದರು. ಅಲ್ಲಿ ಕಾಲೇಜಿಗೆ ಹೋಗುವುದರ ಜತೆಗೆ ಥಿಯೇಟರ್​ಗೂ ತೆರಳಿ ನಟನೆ ಕಲಿಯಲು ಆರಂಭಿಸಿದರು. ನಂತರ ಈ ವಿಚಾರ ಮನೆಯವರಿಗೆ ಹೇಳಿದಾಗ ಅವರು ಖುಷಿಪಟ್ಟರು.

‘ಪ್ರತಿಷ್ಠಿತ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾಕ್ಕೆ ಸೇರಬೇಕೆಂಬುದು ನನ್ನ ಕನಸಾಗಿತ್ತು. ಆದರೆ, ಅದು ಸಾಧ್ಯವಾಗದ ಕಾರಣ ನಾನು ಆತ್ಮಹತ್ಯೆ ಮಾಡಿಕೊಳ್ಳುವ ಆಲೋಚನೆ ಮಾಡಿದ್ದೆ. ನಾನು ಬಹಳ ಹತ್ತಿರವೂ ಹೋಗಿದ್ದೆ. ಈ ವಿಚಾರ ನನ್ನ ಗೆಳೆಯರಿಗೆ ಗೊತ್ತಾಗಿತ್ತು. ಹೀಗಾಗಿ, ಅವರು ನನ್ನನ್ನು ಬಿಟ್ಟು ಹೋಗುತ್ತಲೇ ಇರಲಿಲ್ಲ. ಅವರು ನನಗೆ ಸ್ಫೂರ್ತಿ ನೀಡಿದರು ಎಂದಿದ್ದಾರೆ ಮನೋಜ್​.

ಸಾಕಷ್ಟು ಸಿನಿಮಾಗಳಲ್ಲಿ ನಟಿಸೋ ಅವಕಾಶ ಕೈ ತಪ್ಪಿ ಹೋಗಿತ್ತು. ನಂತರ ನಿಧಾನವಾಗಿ ನೆಲೆ ಕಂಡುಕೊಂಡರು. ಇನ್ನು, ಮನೋಜ್​ ಅವರು ದೆಹಲಿ ಮೂಲದ ಹುಡುಗಿಯನ್ನು ಮದುವೆ ಕೂಡ ಆದರು. ಆದರೆ, ಮನೋಜ್​ ಕಷ್ಟದ ದಿನಗಳಲ್ಲಿ ಹೆಂಡತಿ ಬಿಟ್ಟು ಹೋದರು. ನಂತರ ನಟಿ ಶಬಾನಾ ರಾಜಾ ಅವರನ್ನು ಮನೋಜ್​ ಮದುವೆ ಆದರು.

ಜೂನ್​ 4ರಂದು ದಿ ಫ್ಯಾಮಿಲಿ ಮ್ಯಾನ್​ 2 ರಿಲೀಸ್​ ಆಗಿದೆ. ಈ ವೆಬ್​ ಸೀರಿಸ್​ ನೋಡಿದ ನಂತರದಲ್ಲಿ ಮನೋಜ್​ ನಟನೆಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ವೆಬ್​ ಸೀರಿಸ್​ ಮೂಲಕ ಮನೋಜ್​ ಅವರು ತಾವು ಯಾರೆಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ.

ಇದನ್ನೂ ಓದಿ: The Family Man 2 Review: ಲೈಂಗಿಕ ದೌರ್ಜನ್ಯ ನಡೆದರೂ ಸುಮ್ಮನಿರುವ ರಾಜಿ ಹಿಂದಿದೆ ಒಂದು ಕ್ರೌರ್ಯದ ಮುಖ

Published On - 3:22 pm, Sun, 6 June 21

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?