AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ, ಹೆಂಡತಿ ಬಿಟ್ಟುಹೋದ ನೋವು; ಇದು ಮನೋಜ್​ ಬಾಜ​​ಪೇಯಿ ಜೀವನದ ಕಥೆ

ಸಾಕಷ್ಟು ಸಿನಿಮಾಗಳಲ್ಲಿ ನಟಿಸೋ ಅವಕಾಶ ಕೈ ತಪ್ಪಿ ಹೋಗಿತ್ತು. ನಂತರ ನಿಧಾನವಾಗಿ ನೆಲೆ ಕಂಡುಕೊಂಡರು. ಇನ್ನು, ಮನೋಜ್​ ಅವರು ದೆಹಲಿ ಮೂಲದ ಹುಡುಗಿಯನ್ನು ಮದುವೆ ಕೂಡ ಆದರು.

ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ, ಹೆಂಡತಿ ಬಿಟ್ಟುಹೋದ ನೋವು; ಇದು ಮನೋಜ್​ ಬಾಜ​​ಪೇಯಿ ಜೀವನದ ಕಥೆ
ಮನೋಜ್​ ಬಾಜಪೇಯಿ
ರಾಜೇಶ್ ದುಗ್ಗುಮನೆ
|

Updated on:Apr 23, 2022 | 8:39 AM

Share

 ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸೀರಿಸ್​ ಮೂಲಕ ಮನೋಜ್​ ಬಾಜ​ಪೇಯಿ​ ತಾವು ಎಂತಹ ಆ್ಯಕ್ಟರ್​ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಅವರ ನಟನೆ ನೋಡಿ ಫಿದಾ ಆದವರ ಸಂಖ್ಯೆ ದೊಡ್ಡದಿದೆ. ಆದರೆ, ಮನೋಜ್​ ಅವರ ಬದುಕು ಅಷ್ಟು ಸಲಭದ್ದಾಗಿರಲಿಲ್ಲ. ಅವರು ಒಮ್ಮೆ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೂ ಬಂದಿದ್ದರು.

ಮನೋಜ್​ ಬಿಹಾರದ ಸಣ್ಣ ಹಳ್ಳಿಯಲ್ಲಿ ಹುಟ್ಟಿದವರು. ಗುಡಿಸಲಲ್ಲಿ ನಡೆಸುತ್ತಿದ್ದ ಶಾಲೆಗೆ ಮನೋಜ್​ ತೆರಳುತ್ತಿದ್ದರು. ಅವರಿಗೆ ಅಮಿತಾಭ್​ ಎಂದರೆ ಬಹಳ ಇಷ್ಟ. ಆಗಲೇ ನಟನೆ ಬಗ್ಗೆ ಆಸಕ್ತಿ ಬೆಳೆಸಿಕೊಂಡರು. 17ನೇ ವಯಸ್ಸಿಗೆ ದೆಹಲಿಗೆ ಬಂದರು. ಅಲ್ಲಿ ಕಾಲೇಜಿಗೆ ಹೋಗುವುದರ ಜತೆಗೆ ಥಿಯೇಟರ್​ಗೂ ತೆರಳಿ ನಟನೆ ಕಲಿಯಲು ಆರಂಭಿಸಿದರು. ನಂತರ ಈ ವಿಚಾರ ಮನೆಯವರಿಗೆ ಹೇಳಿದಾಗ ಅವರು ಖುಷಿಪಟ್ಟರು.

‘ಪ್ರತಿಷ್ಠಿತ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾಕ್ಕೆ ಸೇರಬೇಕೆಂಬುದು ನನ್ನ ಕನಸಾಗಿತ್ತು. ಆದರೆ, ಅದು ಸಾಧ್ಯವಾಗದ ಕಾರಣ ನಾನು ಆತ್ಮಹತ್ಯೆ ಮಾಡಿಕೊಳ್ಳುವ ಆಲೋಚನೆ ಮಾಡಿದ್ದೆ. ನಾನು ಬಹಳ ಹತ್ತಿರವೂ ಹೋಗಿದ್ದೆ. ಈ ವಿಚಾರ ನನ್ನ ಗೆಳೆಯರಿಗೆ ಗೊತ್ತಾಗಿತ್ತು. ಹೀಗಾಗಿ, ಅವರು ನನ್ನನ್ನು ಬಿಟ್ಟು ಹೋಗುತ್ತಲೇ ಇರಲಿಲ್ಲ. ಅವರು ನನಗೆ ಸ್ಫೂರ್ತಿ ನೀಡಿದರು ಎಂದಿದ್ದಾರೆ ಮನೋಜ್​.

ಸಾಕಷ್ಟು ಸಿನಿಮಾಗಳಲ್ಲಿ ನಟಿಸೋ ಅವಕಾಶ ಕೈ ತಪ್ಪಿ ಹೋಗಿತ್ತು. ನಂತರ ನಿಧಾನವಾಗಿ ನೆಲೆ ಕಂಡುಕೊಂಡರು. ಇನ್ನು, ಮನೋಜ್​ ಅವರು ದೆಹಲಿ ಮೂಲದ ಹುಡುಗಿಯನ್ನು ಮದುವೆ ಕೂಡ ಆದರು. ಆದರೆ, ಮನೋಜ್​ ಕಷ್ಟದ ದಿನಗಳಲ್ಲಿ ಹೆಂಡತಿ ಬಿಟ್ಟು ಹೋದರು. ನಂತರ ನಟಿ ಶಬಾನಾ ರಾಜಾ ಅವರನ್ನು ಮನೋಜ್​ ಮದುವೆ ಆದರು.

ಜೂನ್​ 4ರಂದು ದಿ ಫ್ಯಾಮಿಲಿ ಮ್ಯಾನ್​ 2 ರಿಲೀಸ್​ ಆಗಿದೆ. ಈ ವೆಬ್​ ಸೀರಿಸ್​ ನೋಡಿದ ನಂತರದಲ್ಲಿ ಮನೋಜ್​ ನಟನೆಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ವೆಬ್​ ಸೀರಿಸ್​ ಮೂಲಕ ಮನೋಜ್​ ಅವರು ತಾವು ಯಾರೆಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ.

ಇದನ್ನೂ ಓದಿ: The Family Man 2 Review: ಲೈಂಗಿಕ ದೌರ್ಜನ್ಯ ನಡೆದರೂ ಸುಮ್ಮನಿರುವ ರಾಜಿ ಹಿಂದಿದೆ ಒಂದು ಕ್ರೌರ್ಯದ ಮುಖ

Published On - 3:22 pm, Sun, 6 June 21

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು