AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಪ್ ಕಮೆಂಟ್: ಕ್ಷಮೆ ಕೇಳಿ ಉಲ್ಟಾ ಹೊಡೆದ ಮನ್ಸೂರ್; ತ್ರಿಷಾ ವಿರುದ್ಧ ಮಾನನಷ್ಟ ಕೇಸ್?

Mansoor Ali Khan: ಮನ್ಸೂರ್ ಅವರ ಹೇಳಿಕೆ ವಿರುದ್ಧ ತ್ರಿಷಾ ಅಸಮಾಧಾನ ಹೊರಹಾಕಿದ್ದರು. ಚಿರಂಜೀವಿ, ಖುಷ್ಬೂ ಮೊದಲಾದವರು ತ್ರಿಷಾ ಅವರನ್ನು ಬೆಂಬಲಿಸಿದರು. ತ್ರಿಷಾ, ಚಿರಂಜೀವಿ ಹಾಗೂ ಖುಷ್ಬೂ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಮನ್ಸೂರ್ ಅಲಿ ಖಾನ್ ಮುಂದಾಗಿದ್ದಾರೆ.

ರೇಪ್ ಕಮೆಂಟ್: ಕ್ಷಮೆ ಕೇಳಿ ಉಲ್ಟಾ ಹೊಡೆದ ಮನ್ಸೂರ್; ತ್ರಿಷಾ ವಿರುದ್ಧ ಮಾನನಷ್ಟ ಕೇಸ್?
ಮನ್ಸೂರ್-ತ್ರಿಷಾ
ರಾಜೇಶ್ ದುಗ್ಗುಮನೆ
|

Updated on:Dec 01, 2023 | 8:18 AM

Share

ತ್ರಿಷಾ (Trisha) ಬಗ್ಗೆ ಕೆಟ್ಟದಾಗಿ ಮಾತನಾಡುವ ಮೂಲಕ ನಟ ಮನ್ಸೂರ್ ಅಲಿ ಖಾನ್ ಅವರು ಸುದ್ದಿಯಲ್ಲಿದ್ದರು. ಆ ಬಳಿಕ ಅವರು ‘ತ್ರಿಷಾ ಅವರೇ ನನ್ನನ್ನು ಕ್ಷಮಿಸಿ’ ಎಂದು ಕೋರಿದ್ದರು. ಈ ಮೂಲಕ ಈ ವಿವಾದ ಕೊನೆ ಆಯಿತು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಘಟನೆಗೆ ಈಗ ಟ್ವಿಸ್ಟ್ ಸಿಕ್ಕಿದೆ. ತ್ರಿಷಾ, ಚಿರಂಜೀವಿ ಹಾಗೂ ಖುಷ್ಬೂ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಮನ್ಸೂರ್ ಅಲಿ ಖಾನ್ ಮುಂದಾಗಿದ್ದಾರೆ. ಇದರಿಂದ ಅವರ ಹೆಸರು ಮತ್ತೆ ಮುನ್ನೆಲೆಗೆ ಬಂದಿದೆ.

‘ಲಿಯೋ’ ಸಿನಿಮಾದಲ್ಲಿ ಮನ್ಸೂರ್ ಅಲಿ ಖಾನ್ ವಿಲನ್ ಪಾತ್ರ ಮಾಡಿದ್ದಾರೆ. ತೆರೆಮೇಲೆ ಅವರು ತ್ರಿಷಾ ಜೊತೆ ಕಾಣಿಸುವುದಿಲ್ಲ. ಈ ವಿಚಾರದ ಬಗ್ಗೆ ಹೇಳುವಾಗ ಮನ್ಸೂರ್ ಬಾಯಿಗೆ ಬಂದಂತೆ ಮಾತನಾಡಿದ್ದರು. ‘ತ್ರಿಷಾ ಜೊತೆ ನನಗೆ ಬೆಡ್​ರೂಂ ದೃಶ್ಯ ಸಿಗುತ್ತದೆ ಎಂದುಕೊಂಡಿದ್ದೆ. ಸಿನಿಮಾಗಳಲ್ಲಿ ಹಲವು ರೇಪ್ ದೃಶ್ಯಗಳನ್ನು ಮಾಡಿದ್ದೇನೆ. ಅವರನ್ನು ನೋಡಲು ನನಗೆ ಅವಕಾಶ ನೀಡಲಿಲ್ಲ’ ಎಂದು ಮನ್ಸೂರ್ ಅಲಿ ಖಾನ್ ಹೇಳಿದ್ದರು.

ಮನ್ಸೂರ್ ಅವರ ಹೇಳಿಕೆ ವಿರುದ್ಧ ತ್ರಿಷಾ ಅಸಮಾಧಾನ ಹೊರಹಾಕಿದ್ದರು. ನಾನು ಎಂದಿಗೂ ಇಂಥವರ ಜೊತೆ ಕೆಲಸ ಮಾಡುವುದಿಲ್ಲ ಎಂದು ಹೇಳಿದ್ದರು. ಈ ವಿಚಾರದಲ್ಲಿ ತ್ರಿಷಾ ಮೇಲೆ ಕೇಸ್​ ಹಾಕಲು ಮನ್ಸೂರ್ ಅಲಿ ಖಾನ್ ರೆಡಿ ಆಗಿದ್ದಾರೆ. ಇಷ್ಟೇ ಅಲ್ಲ, ಅವರನ್ನು ಬೆಂಬಲಿಸಿದ ಚಿರಂಜೀವಿ, ಖುಷ್ಬೂ ವಿರುದ್ಧವೂ ಕೇಸ್ ಹಾಕಲು ಮನ್ಸೂರ್ ಅಲಿ ಖಾನ್ ಆಲೋಚಿಸಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಈ ಪ್ರಕರಣ ಬೇರೆಯದೇ ತಿರುವು ಪಡೆದುಕೊಳ್ಳುತ್ತಿದೆ.

ಇದನ್ನೂ ಓದಿ: ರೇಪ್ ಕಮೆಂಟ್: ಕೊನೆಗೂ ನಟಿ ತ್ರಿಷಾ ಬಳಿ ಕ್ಷಮೆ ಕೇಳಿದ ಮನ್ಸೂರ್ ಅಲಿ ಖಾನ್

ಹಾಗಾದರೆ, ಕ್ಷಮೆ ಕೇಳಿದ್ದು ಏಕೆ ಎಂಬ ಪ್ರಶ್ನೆಗೆ ಮನ್ಸೂರ್ ಉತ್ತರಿಸಿದ್ದು, ‘ಅದೊಂದು ದೊಡ್ಡ ಜೋಕ್’ ಎಂದಿದ್ದಾರೆ. ಈ ಮೂಲಕ ಎಲ್ಲರಿಗೂ ಶಾಕ್ ಕೊಟ್ಟಿದ್ದಾರೆ. ಈಗ ಅವರು ಪ್ಲೇಟ್ ಬದಲಾಯಿಸಿದ್ದು, ಇದೆಲ್ಲ ಪ್ರಚಾರದ ಗಿಮಿಕ್ ಎಂದು ಅನೇಕರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:04 am, Fri, 1 December 23

ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ