AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಪ್ ಕಮೆಂಟ್: ಕ್ಷಮೆ ಕೇಳಿ ಉಲ್ಟಾ ಹೊಡೆದ ಮನ್ಸೂರ್; ತ್ರಿಷಾ ವಿರುದ್ಧ ಮಾನನಷ್ಟ ಕೇಸ್?

Mansoor Ali Khan: ಮನ್ಸೂರ್ ಅವರ ಹೇಳಿಕೆ ವಿರುದ್ಧ ತ್ರಿಷಾ ಅಸಮಾಧಾನ ಹೊರಹಾಕಿದ್ದರು. ಚಿರಂಜೀವಿ, ಖುಷ್ಬೂ ಮೊದಲಾದವರು ತ್ರಿಷಾ ಅವರನ್ನು ಬೆಂಬಲಿಸಿದರು. ತ್ರಿಷಾ, ಚಿರಂಜೀವಿ ಹಾಗೂ ಖುಷ್ಬೂ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಮನ್ಸೂರ್ ಅಲಿ ಖಾನ್ ಮುಂದಾಗಿದ್ದಾರೆ.

ರೇಪ್ ಕಮೆಂಟ್: ಕ್ಷಮೆ ಕೇಳಿ ಉಲ್ಟಾ ಹೊಡೆದ ಮನ್ಸೂರ್; ತ್ರಿಷಾ ವಿರುದ್ಧ ಮಾನನಷ್ಟ ಕೇಸ್?
ಮನ್ಸೂರ್-ತ್ರಿಷಾ
ರಾಜೇಶ್ ದುಗ್ಗುಮನೆ
|

Updated on:Dec 01, 2023 | 8:18 AM

Share

ತ್ರಿಷಾ (Trisha) ಬಗ್ಗೆ ಕೆಟ್ಟದಾಗಿ ಮಾತನಾಡುವ ಮೂಲಕ ನಟ ಮನ್ಸೂರ್ ಅಲಿ ಖಾನ್ ಅವರು ಸುದ್ದಿಯಲ್ಲಿದ್ದರು. ಆ ಬಳಿಕ ಅವರು ‘ತ್ರಿಷಾ ಅವರೇ ನನ್ನನ್ನು ಕ್ಷಮಿಸಿ’ ಎಂದು ಕೋರಿದ್ದರು. ಈ ಮೂಲಕ ಈ ವಿವಾದ ಕೊನೆ ಆಯಿತು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಘಟನೆಗೆ ಈಗ ಟ್ವಿಸ್ಟ್ ಸಿಕ್ಕಿದೆ. ತ್ರಿಷಾ, ಚಿರಂಜೀವಿ ಹಾಗೂ ಖುಷ್ಬೂ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಮನ್ಸೂರ್ ಅಲಿ ಖಾನ್ ಮುಂದಾಗಿದ್ದಾರೆ. ಇದರಿಂದ ಅವರ ಹೆಸರು ಮತ್ತೆ ಮುನ್ನೆಲೆಗೆ ಬಂದಿದೆ.

‘ಲಿಯೋ’ ಸಿನಿಮಾದಲ್ಲಿ ಮನ್ಸೂರ್ ಅಲಿ ಖಾನ್ ವಿಲನ್ ಪಾತ್ರ ಮಾಡಿದ್ದಾರೆ. ತೆರೆಮೇಲೆ ಅವರು ತ್ರಿಷಾ ಜೊತೆ ಕಾಣಿಸುವುದಿಲ್ಲ. ಈ ವಿಚಾರದ ಬಗ್ಗೆ ಹೇಳುವಾಗ ಮನ್ಸೂರ್ ಬಾಯಿಗೆ ಬಂದಂತೆ ಮಾತನಾಡಿದ್ದರು. ‘ತ್ರಿಷಾ ಜೊತೆ ನನಗೆ ಬೆಡ್​ರೂಂ ದೃಶ್ಯ ಸಿಗುತ್ತದೆ ಎಂದುಕೊಂಡಿದ್ದೆ. ಸಿನಿಮಾಗಳಲ್ಲಿ ಹಲವು ರೇಪ್ ದೃಶ್ಯಗಳನ್ನು ಮಾಡಿದ್ದೇನೆ. ಅವರನ್ನು ನೋಡಲು ನನಗೆ ಅವಕಾಶ ನೀಡಲಿಲ್ಲ’ ಎಂದು ಮನ್ಸೂರ್ ಅಲಿ ಖಾನ್ ಹೇಳಿದ್ದರು.

ಮನ್ಸೂರ್ ಅವರ ಹೇಳಿಕೆ ವಿರುದ್ಧ ತ್ರಿಷಾ ಅಸಮಾಧಾನ ಹೊರಹಾಕಿದ್ದರು. ನಾನು ಎಂದಿಗೂ ಇಂಥವರ ಜೊತೆ ಕೆಲಸ ಮಾಡುವುದಿಲ್ಲ ಎಂದು ಹೇಳಿದ್ದರು. ಈ ವಿಚಾರದಲ್ಲಿ ತ್ರಿಷಾ ಮೇಲೆ ಕೇಸ್​ ಹಾಕಲು ಮನ್ಸೂರ್ ಅಲಿ ಖಾನ್ ರೆಡಿ ಆಗಿದ್ದಾರೆ. ಇಷ್ಟೇ ಅಲ್ಲ, ಅವರನ್ನು ಬೆಂಬಲಿಸಿದ ಚಿರಂಜೀವಿ, ಖುಷ್ಬೂ ವಿರುದ್ಧವೂ ಕೇಸ್ ಹಾಕಲು ಮನ್ಸೂರ್ ಅಲಿ ಖಾನ್ ಆಲೋಚಿಸಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಈ ಪ್ರಕರಣ ಬೇರೆಯದೇ ತಿರುವು ಪಡೆದುಕೊಳ್ಳುತ್ತಿದೆ.

ಇದನ್ನೂ ಓದಿ: ರೇಪ್ ಕಮೆಂಟ್: ಕೊನೆಗೂ ನಟಿ ತ್ರಿಷಾ ಬಳಿ ಕ್ಷಮೆ ಕೇಳಿದ ಮನ್ಸೂರ್ ಅಲಿ ಖಾನ್

ಹಾಗಾದರೆ, ಕ್ಷಮೆ ಕೇಳಿದ್ದು ಏಕೆ ಎಂಬ ಪ್ರಶ್ನೆಗೆ ಮನ್ಸೂರ್ ಉತ್ತರಿಸಿದ್ದು, ‘ಅದೊಂದು ದೊಡ್ಡ ಜೋಕ್’ ಎಂದಿದ್ದಾರೆ. ಈ ಮೂಲಕ ಎಲ್ಲರಿಗೂ ಶಾಕ್ ಕೊಟ್ಟಿದ್ದಾರೆ. ಈಗ ಅವರು ಪ್ಲೇಟ್ ಬದಲಾಯಿಸಿದ್ದು, ಇದೆಲ್ಲ ಪ್ರಚಾರದ ಗಿಮಿಕ್ ಎಂದು ಅನೇಕರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:04 am, Fri, 1 December 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!