ರೇಪ್ ಕಮೆಂಟ್: ಕ್ಷಮೆ ಕೇಳಿ ಉಲ್ಟಾ ಹೊಡೆದ ಮನ್ಸೂರ್; ತ್ರಿಷಾ ವಿರುದ್ಧ ಮಾನನಷ್ಟ ಕೇಸ್?

Mansoor Ali Khan: ಮನ್ಸೂರ್ ಅವರ ಹೇಳಿಕೆ ವಿರುದ್ಧ ತ್ರಿಷಾ ಅಸಮಾಧಾನ ಹೊರಹಾಕಿದ್ದರು. ಚಿರಂಜೀವಿ, ಖುಷ್ಬೂ ಮೊದಲಾದವರು ತ್ರಿಷಾ ಅವರನ್ನು ಬೆಂಬಲಿಸಿದರು. ತ್ರಿಷಾ, ಚಿರಂಜೀವಿ ಹಾಗೂ ಖುಷ್ಬೂ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಮನ್ಸೂರ್ ಅಲಿ ಖಾನ್ ಮುಂದಾಗಿದ್ದಾರೆ.

ರೇಪ್ ಕಮೆಂಟ್: ಕ್ಷಮೆ ಕೇಳಿ ಉಲ್ಟಾ ಹೊಡೆದ ಮನ್ಸೂರ್; ತ್ರಿಷಾ ವಿರುದ್ಧ ಮಾನನಷ್ಟ ಕೇಸ್?
ಮನ್ಸೂರ್-ತ್ರಿಷಾ
Follow us
|

Updated on:Dec 01, 2023 | 8:18 AM

ತ್ರಿಷಾ (Trisha) ಬಗ್ಗೆ ಕೆಟ್ಟದಾಗಿ ಮಾತನಾಡುವ ಮೂಲಕ ನಟ ಮನ್ಸೂರ್ ಅಲಿ ಖಾನ್ ಅವರು ಸುದ್ದಿಯಲ್ಲಿದ್ದರು. ಆ ಬಳಿಕ ಅವರು ‘ತ್ರಿಷಾ ಅವರೇ ನನ್ನನ್ನು ಕ್ಷಮಿಸಿ’ ಎಂದು ಕೋರಿದ್ದರು. ಈ ಮೂಲಕ ಈ ವಿವಾದ ಕೊನೆ ಆಯಿತು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಘಟನೆಗೆ ಈಗ ಟ್ವಿಸ್ಟ್ ಸಿಕ್ಕಿದೆ. ತ್ರಿಷಾ, ಚಿರಂಜೀವಿ ಹಾಗೂ ಖುಷ್ಬೂ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಮನ್ಸೂರ್ ಅಲಿ ಖಾನ್ ಮುಂದಾಗಿದ್ದಾರೆ. ಇದರಿಂದ ಅವರ ಹೆಸರು ಮತ್ತೆ ಮುನ್ನೆಲೆಗೆ ಬಂದಿದೆ.

‘ಲಿಯೋ’ ಸಿನಿಮಾದಲ್ಲಿ ಮನ್ಸೂರ್ ಅಲಿ ಖಾನ್ ವಿಲನ್ ಪಾತ್ರ ಮಾಡಿದ್ದಾರೆ. ತೆರೆಮೇಲೆ ಅವರು ತ್ರಿಷಾ ಜೊತೆ ಕಾಣಿಸುವುದಿಲ್ಲ. ಈ ವಿಚಾರದ ಬಗ್ಗೆ ಹೇಳುವಾಗ ಮನ್ಸೂರ್ ಬಾಯಿಗೆ ಬಂದಂತೆ ಮಾತನಾಡಿದ್ದರು. ‘ತ್ರಿಷಾ ಜೊತೆ ನನಗೆ ಬೆಡ್​ರೂಂ ದೃಶ್ಯ ಸಿಗುತ್ತದೆ ಎಂದುಕೊಂಡಿದ್ದೆ. ಸಿನಿಮಾಗಳಲ್ಲಿ ಹಲವು ರೇಪ್ ದೃಶ್ಯಗಳನ್ನು ಮಾಡಿದ್ದೇನೆ. ಅವರನ್ನು ನೋಡಲು ನನಗೆ ಅವಕಾಶ ನೀಡಲಿಲ್ಲ’ ಎಂದು ಮನ್ಸೂರ್ ಅಲಿ ಖಾನ್ ಹೇಳಿದ್ದರು.

ಮನ್ಸೂರ್ ಅವರ ಹೇಳಿಕೆ ವಿರುದ್ಧ ತ್ರಿಷಾ ಅಸಮಾಧಾನ ಹೊರಹಾಕಿದ್ದರು. ನಾನು ಎಂದಿಗೂ ಇಂಥವರ ಜೊತೆ ಕೆಲಸ ಮಾಡುವುದಿಲ್ಲ ಎಂದು ಹೇಳಿದ್ದರು. ಈ ವಿಚಾರದಲ್ಲಿ ತ್ರಿಷಾ ಮೇಲೆ ಕೇಸ್​ ಹಾಕಲು ಮನ್ಸೂರ್ ಅಲಿ ಖಾನ್ ರೆಡಿ ಆಗಿದ್ದಾರೆ. ಇಷ್ಟೇ ಅಲ್ಲ, ಅವರನ್ನು ಬೆಂಬಲಿಸಿದ ಚಿರಂಜೀವಿ, ಖುಷ್ಬೂ ವಿರುದ್ಧವೂ ಕೇಸ್ ಹಾಕಲು ಮನ್ಸೂರ್ ಅಲಿ ಖಾನ್ ಆಲೋಚಿಸಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಈ ಪ್ರಕರಣ ಬೇರೆಯದೇ ತಿರುವು ಪಡೆದುಕೊಳ್ಳುತ್ತಿದೆ.

ಇದನ್ನೂ ಓದಿ: ರೇಪ್ ಕಮೆಂಟ್: ಕೊನೆಗೂ ನಟಿ ತ್ರಿಷಾ ಬಳಿ ಕ್ಷಮೆ ಕೇಳಿದ ಮನ್ಸೂರ್ ಅಲಿ ಖಾನ್

ಹಾಗಾದರೆ, ಕ್ಷಮೆ ಕೇಳಿದ್ದು ಏಕೆ ಎಂಬ ಪ್ರಶ್ನೆಗೆ ಮನ್ಸೂರ್ ಉತ್ತರಿಸಿದ್ದು, ‘ಅದೊಂದು ದೊಡ್ಡ ಜೋಕ್’ ಎಂದಿದ್ದಾರೆ. ಈ ಮೂಲಕ ಎಲ್ಲರಿಗೂ ಶಾಕ್ ಕೊಟ್ಟಿದ್ದಾರೆ. ಈಗ ಅವರು ಪ್ಲೇಟ್ ಬದಲಾಯಿಸಿದ್ದು, ಇದೆಲ್ಲ ಪ್ರಚಾರದ ಗಿಮಿಕ್ ಎಂದು ಅನೇಕರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:04 am, Fri, 1 December 23

ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘