AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pradeep Patwardhan: ಹೃದಯಾಘಾತದಿಂದ ನಟ ಪ್ರದೀಪ್​ ಪಟವರ್ಧನ್​ ನಿಧನ; ಸಂತಾಪ ಸೂಚಿಸಿದ ಮಹಾರಾಷ್ಟ್ರ ಸಿಎಂ

Pradeep Patwardhan Death: ಪ್ರದೀಪ್​ ಪಟವರ್ಧನ್ ಅವರಿಗೆ 64 ವರ್ಷ ವಯಸ್ಸಾಗಿತ್ತು. ಅವರ ನಿಧನದಿಂದ ಚಿತ್ರರಂಗದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ.

Pradeep Patwardhan: ಹೃದಯಾಘಾತದಿಂದ ನಟ ಪ್ರದೀಪ್​ ಪಟವರ್ಧನ್​ ನಿಧನ; ಸಂತಾಪ ಸೂಚಿಸಿದ ಮಹಾರಾಷ್ಟ್ರ ಸಿಎಂ
ಪ್ರದೀಪ್ ಪಟವರ್ಧನ್
TV9 Web
| Edited By: |

Updated on:Aug 09, 2022 | 1:27 PM

Share

ಮರಾಠಿ ಚಿತ್ರರಂಗದ ಹಿರಿಯ ನಟ ಪ್ರದೀಪ್​ ಪಟವರ್ಧನ್ (Pradeep Patwardhan)​ ನಿಧನರಾಗಿದ್ದಾರೆ. ಹೃದಯಾಘಾತದಿಂದ (Heart Attack) ಅವರು ಕೊನೆಯುಸಿರು ಎಳೆದಿದ್ದಾರೆ ಎಂದು ತಿಳಿದುಬಂದಿದೆ. ಪ್ರದೀಪ್​ ಪಟವರ್ಧನ್​ ಅಗಲಿಕೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್​​ ಶಿಂಧೆ (Eknath Shinde) ಸಂತಾಪ ಸೂಚಿಸಿದ್ದಾರೆ. ಅನೇಕ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಪ್ರದೀಪ್​ ಪಟವರ್ಧನ್ ಅವರಿಗೆ 64 ವರ್ಷ ವಯಸ್ಸಾಗಿತ್ತು. ಅವರ ನಿಧನದಿಂದ ಇಡೀ ಮರಾಠಿ ಚಿತ್ರರಂಗದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ.

ರಂಗಭೂಮಿ ಹಿನ್ನೆಲೆಯಿಂದ ಬಂದ ಪ್ರದೀಪ್​ ಪಟವರ್ಧನ್ ಅವರು ಪ್ರತಿಭಾವಂತ ಕಲಾವಿದನಾಗಿದ್ದರು. ಅವರ ಜೊತೆ ಚಿತ್ರರಂಗದ ಅನೇಕರಿಗೆ ಅತ್ಯುತ್ತಮ ಒಡನಾಟ ಇತ್ತು. ಅನೇಕ ಸಿನಿಮಾ ಮತ್ತು ಕಿರುತೆರೆ ಧಾರಾವಾಹಿಯಲ್ಲಿ ಅವರು ನಟಿಸಿದ್ದರು. ಬಾಲಿವುಡ್​ ಸಿನಿಮಾಗಳಲ್ಲೂ ಅವರು ಬಣ್ಣ ಹಚ್ಚಿದ್ದರು.

ಇದನ್ನೂ ಓದಿ
Image
ಯೋಗರಾಜ್ ಭಟ್ ಮಾವ, ಸ್ಯಾಂಡಲ್​ವುಡ್ ಕಲಾವಿದ ಸತ್ಯ ನಾರಾಯಣ್ ಹೃದಯಾಘಾತದಿಂದ ನಿಧನ
Image
Edava Basheer Death: ಹಾಡುವಾಗಲೇ ವೇದಿಕೆಯಲ್ಲಿ ಕುಸಿದು ಬಿದ್ದು ಆರ್ಕೆಸ್ಟ್ರಾ ಗಾಯಕ ಎಡವ ಬಶೀರ್​ ನಿಧನ; ವಿಡಿಯೋ ವೈರಲ್​
Image
Chalapathi Chowdary Death: ಹಿರಿಯ ನಟ ಕ್ಯಾಪ್ಟನ್​ ಚಲಪತಿ ಚೌದ್ರಿ ನಿಧನ
Image
Mohan Juneja: ಖ್ಯಾತ ನಟ ಮೋಹನ್​ ಜುನೇಜ ನಿಧನ; ‘ಕೆಜಿಎಫ್​’ ಚಿತ್ರದಲ್ಲಿ ಅಭಿನಯಿಸಿದ್ದ ಜನಪ್ರಿಯ ಕಲಾವಿದ ಇನ್ನಿಲ್ಲ

‘ಮರಾಠಿ ಸಿನಿಮಾಗಳಲ್ಲಿನ ತಮ್ಮ ಅದ್ಭುತ ನಟನೆಯಿಂದಾಗಿ ಪ್ರದೀಪ್​ ಪಟವರ್ಧನ್​ ಅವರು ಪ್ರೇಕ್ಷಕರ ಹೃದಯ ಗೆದ್ದಿದ್ದರು. ಇಂದು ಅವರು ನಿಧನರಾಗಿದ್ದಾರೆ. ಅವರ ಅಗಲಿಕೆಯಿಂದ ಮರಾಠಿ ಕಲಾ ಪ್ರಪಂಚಕ್ಕೆ ತೀವ್ರ ನಷ್ಟ ಆಗಿದೆ’ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್​ ಶಿಂಧೆ ಟ್ವೀಟ್​ ಮಾಡಿದ್ದಾರೆ.

ನಟಿ ರೇಣುಕಾ ಶಹಾನೆ ಅವರು ಸಂತಾಪ ಸೂಚಿಸಿದ್ದಾರೆ. ‘ಪಟ್ಯಾ ದಾದಾ.. ಯಾಕೆ ನಮ್ಮನ್ನು ಬಿಟ್ಟು ಹೋದ್ರಿ. ಇದು ನಿಜಕ್ಕೂ ಆತಂಕಕಾರಿ ಆಗಿದೆ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಅವರು ಫೇಸ್​ಬುಕ್​ನಲ್ಲಿ ಪೋಸ್ಟ್​ ಮಾಡಿದ್ದಾರೆ. ‘ನಾನು ಮೊದಲ ಬಾರಿಗೆ ವೃತ್ತಿಪರ ನಾಟಕ ಮಾಡಿದ್ದು ನಿಮ್ಮ ಜೊತೆ. ನನ್ನ ಪಾಲಿಗೆ ನೀವು ತುಂಬ ವಿಶೇಷ ವ್ಯಕ್ತಿ ಆಗಿದ್ರಿ. ನಿಮ್ಮ ನೆನಪುಗಳು ಹೃದಯದಲ್ಲಿವೆ. ತುಂಬ ಬೇಗ ನೀವು ನಮ್ಮನ್ನು ಬಿಟ್ಟು ಹೋದ್ರಿ’ ಎಂದು ನಟ ರೋಹನ್​ ಪೆಡ್ನೇಕರ್​ ಬರೆದುಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:06 pm, Tue, 9 August 22

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು