AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಕರ್​​ಗೆ ಭಾರತದ ಅಧಿಕೃತ ಆಯ್ಕೆ ಮರಾಠಿ ಸಿನಿಮಾ ‘ಗೋಂಧಲ್’: ಏನಿದರ ವಿಶೇಷತೆ?

‘ಆರ್​​ಆರ್​​ಆರ್’ ಸಿನಿಮಾ ಆಸ್ಕರ್ ಅಂಗಳಕ್ಕೆ ಕಾಲಿರಿಸಿದ್ದು ಮಾತ್ರವೇ ಅಲ್ಲದೆ ಆಸ್ಕರ್ ಗೆದ್ದು ಇತಿಹಾಸ ಸೃಷ್ಟಿಸಿದೆ. ಭಾರತದ ಕೆಲ ಡಾಕ್ಯುಮೆಂಟರಿಗಳು ಸಹ ಆಸ್ಕರ್ ಗೆದ್ದಿವೆ. ಮಾತ್ರವಲ್ಲದೆ ಖುದ್ದು ಆಸ್ಕರ್, ಹಲವು ಭಾರತೀಯ ಸಿನಿಮಾಗಳನ್ನು ಗುರುತಿಸಿ ವಿಶೇಷ ಗೌರವವನ್ನು ನೀಡಿದೆ. ಹೀಗಿರುವಾಗ ಇದೀಗ ಮತ್ತೊಂದು ಆಸ್ಕರ್ ಹತ್ತಿರವಾಗುತ್ತಿದ್ದು, ಭಾರತದಿಂದ ಈ ಬಾರಿ ಅಳೆದು-ತೂಗಿ ಮರಾಠಿ ಸಿನಿಮಾ ಒಂದನ್ನು ಅಧಿಕೃತ ಆಯ್ಕೆಯನ್ನಾಗಿ ಪರಿಗಣಿಸಿ ಕಳಿಸಲಾಗಿದೆ.

ಆಸ್ಕರ್​​ಗೆ ಭಾರತದ ಅಧಿಕೃತ ಆಯ್ಕೆ ಮರಾಠಿ ಸಿನಿಮಾ ‘ಗೋಂಧಲ್’: ಏನಿದರ ವಿಶೇಷತೆ?
Gondhal
ಮಂಜುನಾಥ ಸಿ.
|

Updated on: Sep 18, 2026 | 4:57 PM

Share

ಮುಖ್ಯಾಂಶಗಳು

  • ಆಸ್ಕರ್ ರೇಸಿಗೆ ಭಾರತದ ಸಿನಿಮಾ
  • ಭಾರತದಿಂದ ಅಧಿಕೃತವಾಗಿ ಆಯ್ಕೆ ಆಯ್ತು ಮರಾಠಿ ಸಿನಿಮಾ
  • ಮರಾಠಿ ಸಿನಿಮಾ ‘ಗೋಂಧಲ್’ ಅಧಿಕೃತವಾಗಿ ಆಯ್ಕೆ ಆಗಿದೆ.

ಕೋವಿಡ್ ಬಳಿಕ ಭಾರತದ ಸಿನಿಮಾಗಳು ವಿಶ್ವಮಟ್ಟದಲ್ಲಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡುತ್ತಿವೆ. ಅದರಲ್ಲೂ ಭಾರತದ ಪ್ರಾದೇಶಿಕ ಭಾಷೆಯ ಸಿನಿಮಾಗಳು ವಿಶ್ವ ಮಟ್ಟದಲ್ಲಿ ಗಮನ ಸೆಳೆಯುತ್ತಿದೆ. ಪ್ರೇಕ್ಷಕರನ್ನು ಸೆಳೆಯುವುದು ಮಾತ್ರವೇ ಅಲ್ಲದೆ, ಆಸ್ಕರ್ ಅಂಥಹಾ ವಿಶ್ವ ಶ್ರೇಷ್ಠ ವೇದಿಕೆಗಳಲ್ಲಿ ಸ್ಥಾನ ಪಡೆಯುತ್ತಿದೆ. ‘ಆರ್​​ಆರ್​​ಆರ್’ ಸಿನಿಮಾ ಆಸ್ಕರ್ ಅಂಗಳಕ್ಕೆ ಕಾಲಿರಿಸಿದ್ದು ಮಾತ್ರವೇ ಅಲ್ಲದೆ ಆಸ್ಕರ್ ಗೆದ್ದು ಇತಿಹಾಸ ಸೃಷ್ಟಿಸಿದೆ. ಭಾರತದ ಕೆಲ ಡಾಕ್ಯುಮೆಂಟರಿಗಳು ಸಹ ಆಸ್ಕರ್ ಗೆದ್ದಿವೆ. ಮಾತ್ರವಲ್ಲದೆ ಖುದ್ದು ಆಸ್ಕರ್, ಹಲವು ಭಾರತೀಯ ಸಿನಿಮಾಗಳನ್ನು ಗುರುತಿಸಿ ವಿಶೇಷ ಗೌರವವನ್ನು ನೀಡಿದೆ. ಹೀಗಿರುವಾಗ ಇದೀಗ ಮತ್ತೊಂದು ಆಸ್ಕರ್ ಹತ್ತಿರವಾಗುತ್ತಿದ್ದು, ಭಾರತದಿಂದ ಈ ಬಾರಿ ಅಳೆದು-ತೂಗಿ ಮರಾಠಿ ಸಿನಿಮಾ ಒಂದನ್ನು ಅಧಿಕೃತ ಆಯ್ಕೆಯನ್ನಾಗಿ ಪರಿಗಣಿಸಿ ಕಳಿಸಲಾಗಿದೆ.

99ನೇ ಆಸ್ಕರ್ ಈ ಬಾರಿ ನಡೆಯಲಿದ್ದು, ಈ ಬಾರಿಯ ಆಸ್ಕರ್​​ಗೆ ಭಾರತದಿಂದ ಮರಾಠಿ ಸಿನಿಮಾ ‘ಗೊಂಧಲ್’ ಭಾರತದ ಸಿನಿಮಾ ಫೆಡರೇಷನ್ ಕಳಿಸಿಕೊಟ್ಟಿದೆ. ‘ಗೊಂಧಲ್’ ಸಿನಿಮಾವು ಆಸ್ಕರ್​​ನ ವಿದೇಶಿ ಸಿನಿಮಾ ವಿಭಾಗದಲ್ಲಿ ಪ್ರಶಸ್ತಿಗಾಗಿ ಸ್ಪರ್ಧೆ ಮಾಡಲಿದೆ. ‘ಗೊಂಧಲ್’ ಸಿನಿಮಾವು ಮಹಾರಾಷ್ಟ್ರದಲ್ಲಿ ನಡೆಯುವ ಒಂದು ಆಚರಣೆಯ ಕುರಿತಾದ ಕತೆಯನ್ನು ಒಳಗೊಂಡಿರುವ ಸಿನಿಮಾ ಆಗಿದೆ. ಸಂಸ್ಕೃತಿ, ಆಚರಣೆಯನ್ನು ಸಾರುವ ಕತೆಯನ್ನು ಸಿನಿಮಾ ಒಳಗೊಂಡಿದೆ.

ಈ ಬಾರಿ ‘ಧುರಂಧರ್’ ಸಿನಿಮಾವನ್ನು ಆಸ್ಕರ್​​ಗೆ ಕಳಿಸಬೇಕು ಎಂಬ ಒತ್ತಡ ಜ್ಯೂರಿ ಸದಸ್ಯರ ಮೇಲಿತ್ತು. ಅದರ ಜೊತೆಗೆ ನಾಗಾ ಸಿನಿಮಾ ‘ಅಂಗ’ ಮತ್ತು ತಮಿಳು ಸಿನಿಮಾ ‘ಡೊರೊತಿ’ ಸಹ ರೇಸಿನಲ್ಲಿದ್ದವು. ಆದರೆ ಅದ್ಯಾವುದನ್ನೂ ಅಲ್ಲದೆ, ಮರಾಠಿ ಸಿನಿಮಾ ‘ಗೋಂಧಲ್’ ಅನ್ನು ಸದಸ್ಯರು ಆಯ್ಕೆ ಮಾಡಿದ್ದಾರೆ. ಭಾರತೀಯ ಸಂಸ್ಕೃತಿ, ಆಚರಣೆಗಳ ಜೊತೆಗೆ ಸಿನಿಮಾದ ಕತೆಯಲ್ಲಿರುವ ಮಾನವನ ವ್ಯಕ್ತಿತ್ವದ ಅನಾವರಣ ಈ ಸಿನಿಮಾವನ್ನು ಆಸ್ಕರ್​​ ಆಯ್ಕೆಗೆ ಅರ್ಹವೆಂದು ಜ್ಯೂರಿ ಸದಸ್ಯರು ಪರಿಗಣಿಸಿದ್ದಾರೆ.

ಇದನ್ನೂ ಓದಿ:‘ಆಸ್ಕರ್ ಸಿಗಲೇ ಬೇಕು’: ‘ರಾಮಾಯಣ’ ಸಿನಿಮಾವನ್ನು ಕೊಂಡಾಡಿದ ಮಹಾರಾಷ್ಟ್ರ ಸಿಎಂ

ಗೋಂಧಾಲ್ ಕತೆ ಏನು?

‘ಗೋಂಧಾಲ್’ ಎಂಬುದು ರಾತ್ರಿ ಪೂರ್ತಿ ನಡೆಯುವ ಒಂದು ಪೂಜೆ ಆಚರಣೆ. ಈಗ ಆಸ್ಕರ್​​ಗೆ ಆಯ್ಕೆ ಆಗಿರುವ ಸಿನಿಮಾ ‘ಗೋಂಧಾಲ್’ ‘ಸುಮನ್’ ಎಂಬ ಪಾತ್ರದ ಸುತ್ತುವ ಕತೆಯನ್ನು ಒಳಗೊಂಡಿದೆ. ಹಳ್ಳಿಯೊಂದಕ್ಕೆ ಸೊಸೆಯಾಗಿ ಬರುವ ಸುಮನ್, ಪತಿ ಆನಂದ್ ಜೊತೆಗೆ ಆರಾಮದ ಜೀವನ ನಡೆಸುತ್ತಿರುತ್ತಾಳೆ. ಆದರೆ ಆಕೆ, ‘ಗೋಂಧಾಲ್’ ಆಚರಣೆಯಲ್ಲಿ ಪ್ರಮುಖನಾದ ಗೋಂಧಾಲಿ ಸಾಹೇಬ ಎಂಬಾತನ ಮೇಲೆ ಪ್ರೀತಿ ಬೆಳೆಸಿಕೊಳ್ಳುತ್ತಾಳೆ. ಆಕೆ ತನ್ನ ಪತಿಯಿಂದ ದೂರಾಗಲು ಪತಿಯ ಸಂಬಂಧಿಯೊಬ್ಬನ ಸಹಾಯ ಪಡೆಯುತ್ತಾಳೆ. ಆದರೆ ಆಕೆ ಮದುವೆ ಸಂಕೋಲೆಯಿಂದ ಸ್ವಾತಂತ್ರ್ಯ ಪಡೆಯಲು ಮಾಡುವ ಈ ಪ್ರಯತ್ನದಲ್ಲಿ ಒಂದು ಕೊಲೆ ನಡೆದು ಹೋಗುತ್ತದೆ. ಬಳಿಕ ಪ್ರತಿಯೊಬ್ಬರೂ ಸಹ ತಮ್ಮನ್ನು ತಾವು ಕಾಪಾಡಿಕೊಳ್ಳುವ ಮಾಡುವ ಪ್ರಯತ್ನಗಳು ಸಿನಿಮಾದ ಕತೆಗೆ ಥ್ರಿಲ್ಲರ್ ಗುಣವನ್ನು ಸೇರಿಸಿದೆ. ಈ ಸಿನಿಮಾವನ್ನು ಸಂತೋಷ್ ದಾವ್ಕರ್ ನಿರ್ದೇಶನ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು
ಹುಲಿ ವೇಷದ ತಾಸೆಯ ಪೆಟ್ಟಿಗೆ ಬಸನಗೌಡ ಪಾಟೀಲ್ ಭರ್ಜರಿ ಸ್ಟೆಪ್ಸ್
ಹುಲಿ ವೇಷದ ತಾಸೆಯ ಪೆಟ್ಟಿಗೆ ಬಸನಗೌಡ ಪಾಟೀಲ್ ಭರ್ಜರಿ ಸ್ಟೆಪ್ಸ್