AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಂತು ಹೋಗಿದ್ದ ವಿಷ್ಣುವರ್ಧನ್ ಸಿನಿಮಾನ ರಿಲೀಸ್ ಮಾಡಲು ಮುಂದಾದ ಕಮಲ್ ಹಾಸನ್

ಕಮಲ್ ಹಾಸನ್ ಅವರ ಬಹುನಿರೀಕ್ಷಿತ ‘ಮರುಧನಾಯಗಂ’ ಸಿನಿಮಾ 1996ರಲ್ಲಿ ಶುರುವಾಗಿ ಹಣಕಾಸಿನ ಕಾರಣಗಳಿಂದ ಸ್ಥಗಿತಗೊಂಡಿತ್ತು. ಕ್ವೀನ್ ಎಲಿಜಬೆತ್ ಉಪಸ್ಥಿತಿಯಲ್ಲಿ ಅದ್ಧೂರಿಯಾಗಿ ಲಾಂಚ್ ಆಗಿದ್ದ ಈ ಪ್ಯಾನ್ ಇಂಡಿಯಾ ಚಿತ್ರದಲ್ಲಿ ವಿಷ್ಣುವರ್ಧನ್ ಸಹ ಇದ್ದರು. ಈಗ ಕಮಲ್ ಹಾಸನ್ ಇದನ್ನು ಮತ್ತೆ ತೆರೆಗೆ ತರುವ ಚಿಂತೆಯಲ್ಲಿದ್ದಾರೆ.

ನಿಂತು ಹೋಗಿದ್ದ ವಿಷ್ಣುವರ್ಧನ್ ಸಿನಿಮಾನ ರಿಲೀಸ್ ಮಾಡಲು ಮುಂದಾದ ಕಮಲ್ ಹಾಸನ್
ಕಮಲ್-ವಿಷ್ಣು
ರಾಜೇಶ್ ದುಗ್ಗುಮನೆ
|

Updated on: Nov 21, 2025 | 11:29 AM

Share

ಕಮಲ್ ಹಾಸನ್ ಅವರು ನಿರ್ಮಾಣ ಹಾಗೂ ನಟನೆಯಲ್ಲಿ ಬ್ಯುಸಿ ಇದ್ದಾರೆ. ಈಗ ಅವರು ಒಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. 1996ರಲ್ಲಿ ‘ಇಂಡಿಯನ್’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತು. ಇದಾದ ಬಳಿಕ ಅವರು ನಿರ್ದೇಶನಕ್ಕೆ ಇಳಿದರು. ಈ ಚಿತ್ರಕ್ಕೆ ‘ಮರುಧನಾಯಗಂ’ ಎಂದು ಶೀರ್ಷಿಕೆ ಇಡಲಾಗಿತ್ತು. ಈ ಸಿನಿಮಾದಲ್ಲಿ ಕಮಲ್ ಜೊತೆ ವಿಷ್ಣುವರ್ಧನ್ ಕೂಡ ನಟಿಸಿದ್ದರು. ಈ ಸಿನಿಮಾದ ಶೂಟಿಂಗ್ ಎರಡು ವರ್ಷ ನಡೆಯಿತು. ನಂತರ ಸಿನಿಮಾ ರಿಲೀಸ್ ಆಗದೆ ನಿಂತು ಹೋಯಿತು. ಈಗ ಇದನ್ನು ರಿಲೀಸ್ ಮಾಡುವ ಬಗ್ಗೆ ಕಮಲ್ ಹಾಸನ್ ಯೋಚಿಸಿದ್ದಾರೆ.

‘ಮರುಧನಾಯಗಂ’ ಸಿನಿಮಾ ಆಗಿನ ಕಾಲಕ್ಕೆ ಸಾಕಷ್ಟು ಸದ್ದು ಮಾಡಿತ್ತು. ಮದ್ರಾಸ್ ಫಿಲ್ಮ್ ಸಿಟಿಯಲ್ಲಿ  ಈ ಸಿನಿಮಾದ ಲಾಂಚ್ ನಡೆಯಿತು. ಕ್ವೀನ್ ಎಲಿಜಬೆತ್ ಹಾಗೂ ಅಂದಿನ ತಮಿಳುನಾಡು ಸಿಯಂ ಕರುಣಾನಿಧಿ ಅತಿಥಿಯಾಗಿ ಬಂದಿದ್ದರು. ಪ್ಯಾನ್ ಇಂಡಿಯಾ ಸಿನಿಮಾ ಇದಾಗಿತ್ತು. ವಿಷ್ಣುವರ್ಧನ ಕೂಡ ಸಿನಿಮಾದಲ್ಲಿ ಇದ್ದರು. ಅವರು ವಾಜಿದ್ ಖಾನ್ ಹೆಸರಿನ ಪಾತ್ರ ಮಾಡಿದ್ದರು.

ಈ ಚಿತ್ರಕ್ಕೆ ಎರಡು ವರ್ಷ ಶೂಟಿಂಗ್ ಮಾಡಲಾಯಿತು. ಆದರೆ, ಇದಕ್ಕೆ ಹಣ ಹಾಕಿದವರಲ್ಲಿ ಒಬ್ಬರಾದ ಹಾಲಿವುಡ್ ನಿರ್ಮಾಣ ಸಂಸ್ಥೆ ಹಿಂದಕ್ಕೆ ಸರಿಯಿತು. ಚಿತ್ರದ ಬಜೆಟ್ 50 ಕೋಟಿ ರೂಪಾಯಿ ಎಂದು ಅಂದಾಜು ಮಾಡಲಾಗಿತ್ತು. ಆಗಿನ ಕಾಲದಲ್ಲಿ ಟಿಕೆಟ್ ಬೆಲೆ 10-20 ರೂಪಾಯಿ ಇತ್ತು. ಈ ಟಿಕೆಟ್ ಬೆಲೆಯಲ್ಲಿ ಬಜೆಟ್ ರಿಕವರಿ ಮಾಡೋದು ಅಸಾಧ್ಯ ಎನಿಸಿತ್ತು. ವಿಶೇಷ ಎಂದರೆ ಈ ಸಿನಿಮಾಗೆ ನಾಯಕಿ ಆಗಿ ಐಶ್ವರ್ಯಾ ರೈ ಅಥವಾ ‘ಟೈಟಾನಿಕ್’ ಸಿನಿಮಾ ನಾಯಕಿ ಕೇಟ್ ವಿನ್ಸ್ಲೆಟ್​ನ ಆಯ್ಕೆ ಮಾಡುವ ಆಲೋಚನೆಯಲ್ಲಿ ಕಮಲ್ ಇದ್ದರು. ಈ ಚಿತ್ರದ ಪ್ರೀ ಪ್ರೊಡಕ್ಷನ್​ಗೆ ಕಮಲ್ ಸಾಕಷ್ಟು ಹಣ ವ್ಯಯ ಮಾಡಿದ್ದರು.

ಈ ಸಿನಿಮಾ ಮುಂದುವರಿಯಲೇ ಇಲ್ಲ. ಈ ಸಿನಿಮಾ ನಿಂತಿದೆ ಎಂದು ಘೋಷಣೆ ಮಾಡಿದರು. ಈ ಸಿನಿಮಾನ ಪೂರ್ಣಗೊಳಿಸಲು ಅವರು ಹಲವು ಬಾರಿ ಪ್ರಯತ್ನಿಸಿದರೂ ಯಶಸ್ಸು ಕಾಣಲಿಲ್ಲ. ಈ ಸಿನಿಮಾ ಬರೋದೇ ಇಲ್ಲ ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ, ಈಗ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಈ ಸಿನಿಮಾನ ಪೂರ್ಣಗೊಳಿಸುವ ಎಲ್ಲಾ ಸಾಧ್ಯತೆ ಇದೆ’ ಎಂದು ಕಮಲ್ ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯೋತ್ಸವ ವಿಶೇಷ: ‘ಕಮಲ್-ರಜನಿ ಸೇರಿಸಿದರೆ ವಿಷ್ಣುವರ್ಧನ್’; ಸುಹಾಸಿನಿ

ಇತ್ತೀಚೆಗೆ ‘ವಾರಣಾಸಿ’ ಸಿನಿಮಾದಲ್ಲಿ ಮಹೇಶ್ ಬಾಬು ಅವರು ಎತ್ತಿನ ಮೇಲೆ ಬರೋ ದೃಶ್ಯ ಇದೆ. ಈ ದೃಶ್ಯವನ್ನು ಕಮಲ್ ಅವರು ‘ಮರುಧನಾಯಗಂ’ ಸಿನಿಮಾದಲ್ಲೇ ಟ್ರೈ ಮಾಡಿದ್ದರು. ಅದರ ಪೋಸ್ಟರ್ ವೈರಲ್ ಆಗುತ್ತಾ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸೂರಜ್‌ಕುಂಡ್ ಜಾತ್ರೆ ದುರಂತ; ಸುನಾಮಿ ಉಯ್ಯಾಲೆ ತುಂಡಾಗಿ ಪೊಲೀಸ್ ಸಾವು
ಸೂರಜ್‌ಕುಂಡ್ ಜಾತ್ರೆ ದುರಂತ; ಸುನಾಮಿ ಉಯ್ಯಾಲೆ ತುಂಡಾಗಿ ಪೊಲೀಸ್ ಸಾವು
ರೊಮಾರಿಯೊ ಶೆಫರ್ಡ್​ಗೆ ಹ್ಯಾಟ್ರಿಕ್ ವಿಕೆಟ್; ವಿಂಡೀಸ್​ಗೆ ಜಯ
ರೊಮಾರಿಯೊ ಶೆಫರ್ಡ್​ಗೆ ಹ್ಯಾಟ್ರಿಕ್ ವಿಕೆಟ್; ವಿಂಡೀಸ್​ಗೆ ಜಯ
ಮಲೇಷ್ಯಾದ 800 ಕಲಾವಿದರಿಂದ ಪ್ರಧಾನಿ ಮೋದಿಗೆ ಶಾಸ್ತ್ರೀಯ ನೃತ್ಯದ ಸ್ವಾಗತ
ಮಲೇಷ್ಯಾದ 800 ಕಲಾವಿದರಿಂದ ಪ್ರಧಾನಿ ಮೋದಿಗೆ ಶಾಸ್ತ್ರೀಯ ನೃತ್ಯದ ಸ್ವಾಗತ
ಎಲೆಕ್ಟ್ರಾನಿಕ್ಸ್ ಘಟಕ ನಿರ್ಮಾಣಕ್ಕೆ ಕರ್ನಾಟಕಕ್ಕೆ 10,000 ಕೋಟಿ ಅನುದಾನ
ಎಲೆಕ್ಟ್ರಾನಿಕ್ಸ್ ಘಟಕ ನಿರ್ಮಾಣಕ್ಕೆ ಕರ್ನಾಟಕಕ್ಕೆ 10,000 ಕೋಟಿ ಅನುದಾನ
ಯುವತಿ ತಲೆ ಮೇಲೆ ಹರಿದ BMTC ಎಲೆಕ್ಟ್ರಿಕ್ ಬಸ್
ಯುವತಿ ತಲೆ ಮೇಲೆ ಹರಿದ BMTC ಎಲೆಕ್ಟ್ರಿಕ್ ಬಸ್
ಮಲೇಷ್ಯಾಗೆ ತೆರಳಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ಮಲೇಷ್ಯಾಗೆ ತೆರಳಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆಶಿ
ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆಶಿ
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ