AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಳಪತಿ ವಿಜಯ್​ಗೆ 100 ಕೋಟಿ ಸಂಭಾವನೆ ಕೊಡಲು ಮುಂದಾದ ನಿರ್ಮಾಪಕ; ಅಬ್ಬಬ್ಬಾ ಯಾವುದು ಈ ಸಿನಿಮಾ?

Thalapathy Vijay Remuneration: ಇದೇ ಮೊದಲ ಬಾರಿಗೆ ಟಾಲಿವುಡ್​ಗೆ ದಳಪತಿ ವಿಜಯ್​ ಕಾಲಿಡುತ್ತಿರುವುದರಿಂದ ಸಹಜವಾಗಿಯೇ ಈ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಿದೆ. ತೆಲುಗಿನ ಜೊತೆ ತಮಿಳಿನಲ್ಲಿಯೂ ಈ ಚಿತ್ರ ಸಿದ್ಧವಾಗಲಿದೆ.

ದಳಪತಿ ವಿಜಯ್​ಗೆ 100 ಕೋಟಿ ಸಂಭಾವನೆ ಕೊಡಲು ಮುಂದಾದ ನಿರ್ಮಾಪಕ; ಅಬ್ಬಬ್ಬಾ ಯಾವುದು ಈ ಸಿನಿಮಾ?
ದಳಪತಿ ವಿಜಯ್​
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ|

Updated on: Jun 17, 2021 | 4:12 PM

Share

ನಟ ದಳಪತಿ ವಿಜಯ್​ಗೆ ದೊಡ್ಡ ಫ್ಯಾನ್​ ಫಾಲೋಯಿಂಗ್​ ಇದೆ. ತಮಿಳು ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಸ್ಟಾರ್​ ಆಗಿ ಮೆರೆಯುತ್ತಿರುವ ಅವರು ಗಮನಾರ್ಹ ಸಿನಿಮಾಗಳನ್ನು ನೀಡುತ್ತ ಬಂದಿದ್ದಾರೆ. ತಮಿಳುನಾಡು ಮಾತ್ರವಲ್ಲದೆ ಅಕ್ಕಪಕ್ಕದ ರಾಜ್ಯಗಳಲ್ಲೂ ವಿಜಯ್​ ಸಿನಿಮಾಗಳು ಭರ್ಜರಿ ಪ್ರದರ್ಶನ ಕಾಣುತ್ತವೆ. ಸ್ಟಾರ್​ ನಿರ್ದೇಶಕ, ನಿರ್ಮಾಪಕರೆಲ್ಲ ವಿಜಯ್​ ಕಾಲ್​ಶೀಟ್​ಗಾಗಿ ಕಾದು ಕುಳಿತಿರುತ್ತಾರೆ. ಇಷ್ಟು ದಿನ ತಮಿಳುನಲ್ಲಿ ಬ್ಯುಸಿ ಆಗಿದ್ದ ವಿಜಯ್​ ಇದೇ ಮೊದಲ ಬಾರಿಗೆ ತೆಲುಗು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಆ ಸಿನಿಮಾದಲ್ಲಿ ಅವರು ಪಡೆಯಲಿರುವ ಸಂಭಾವನೆ ಬಗ್ಗೆ ಗುಸುಗುಸು ಕೇಳಿಬರುತ್ತಿದೆ.

2021ರ ಜನವರಿಯಲ್ಲಿ ತೆರೆಕಂಡ ‘ಮಾಸ್ಟರ್’​ ಸಿನಿಮಾದಿಂದ ವಿಜಯ್​ಗೆ ದೊಡ್ಡ ಗೆಲುವು ಸಿಕ್ಕಿತು. ಸದ್ಯ ಅವರು ತಮ್ಮ 65ನೇ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಆ ಚಿತ್ರದ ಕೆಲಸಗಳು ಪ್ರಗತಿಯಲ್ಲಿ ಇರುವಾಗಲೇ 66ನೇ ಸಿನಿಮಾ ಬಗ್ಗೆ ಒಂದಕ್ಕಿಂತ ಒಂದು ಅಚ್ಚರಿಯ ಸುದ್ದಿ ಕೇಳಿಬರುತ್ತಿದೆ. ಅವರ 66ನೇ ಚಿತ್ರಕ್ಕೆ ಟಾಲಿವುಡ್​ನ ಖ್ಯಾತ ನಿರ್ಮಾಪಕ ದಿಲ್​ ರಾಜು ಬಂಡವಾಳ ಹೂಡಲಿದ್ದಾರೆ. ಕೇಳಿಬರುತ್ತಿರುವ ಮಾಹಿತಿ ಪ್ರಕಾರ, ವಿಜಯ್​ಗೆ ಅವರು ಬರೋಬ್ಬರಿ 100 ಕೋಟಿ ರೂ. ಸಂಭಾವನೆ ಕೊಡಲು ಸಿದ್ಧರಿದ್ದಾರಂತೆ!

ಇದೇ ಮೊದಲ ಬಾರಿಗೆ ಟಾಲಿವುಡ್​ಗೆ ವಿಜಯ್​ ಕಾಲಿಡುತ್ತಿರುವುದರಿಂದ ಸಹಜವಾಗಿಯೇ ಈ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಿದೆ. ತೆಲುಗಿನ ಜೊತೆ ತಮಿಳಿನಲ್ಲಿಯೂ ಈ ಚಿತ್ರ ಸಿದ್ಧವಾಗಲಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬೇರೆ ಬೇರೆ ಭಾಷೆಗಳಲ್ಲಿ ಡಬ್​ ಮಾಡಿ ಬಿಡುಗಡೆ ಮಾಡುವ ಆಲೋಚನೆ ಕೂಡ ನಿರ್ಮಾಪಕರಿಗೆ ಇದೆ. ತೆಲುಗಿನ ಖ್ಯಾತ ನಿರ್ದೇಶಕ ವಂಶಿ ಪೈಡಿಪಲ್ಲಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿಲಿದ್ದಾರೆ. 100 ಕೋಟಿ ರೂ. ಸಂಭಾವನೆಯಲ್ಲಿ ಈಗಾಗಲೇ ಮುಂಗಡವಾಗಿ 10 ಕೋಟಿ ರೂ.ಗಳನ್ನು ವಿಜಯ್​ಗೆ ನೀಡಲಾಗಿದೆ ಎನ್ನುವ ಮಾಹಿತಿ ಕೇಳಿಬರುತ್ತಿದೆ. ಸಿನಿಮಾ ಸೆಟ್ಟೇರಿದ ಬಳಿಕ ಇನ್ನುಳಿದ ಮೊತ್ತವನ್ನು ನೀಡಲಾಗುವುದು ಎಂಬ ಸುದ್ದಿ ಟಾಲಿವುಡ್​ ಅಂಗಳಲ್ಲಿ ಹರಿದಾಡುತ್ತಿದೆ.

ಸಂಭಾವನೆ ವಿಚಾರವಾಗಿ ವಿಜಯ್​ ಅವರಾಗಲಿ, ದಿಲ್​ ರಾಜು ಅವರಾಗಲಿ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ. ಹರಿದಾಡುತ್ತಿರುವ ಅಂತೆ-ಕಂತೆಗಳಿಗೂ ಅವರು ಉತ್ತರ ನೀಡಿಲ್ಲ. ಸದ್ಯ ಕೊರೊನಾ ಹಾವಳಿ ಇರುವುದರಿಂದ ಪ್ರೀ ಪ್ರೊಡಕ್ಷನ್​ ಕೆಲಸಗಳನ್ನು ಚಿತ್ರತಂಡ ಮುಗಿಸಿಕೊಳ್ಳುತ್ತಿದೆ. ಕೊರೊನಾ ಕಾಟ ಕಡಿಮೆ ಆದ ಬಳಿಕ ಅದ್ದೂರಿಯಾಗಿ ಸಿನಿಮಾ ಲಾಂಚ್​ ಮಾಡಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ:

ದಳಪತಿ 65 ಸಿನಿಮಾಗೆ ನಟಿ ಪೂಜಾ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ?

ತೆಲುಗಿನ ಖ್ಯಾತ ನಿರ್ದೇಶಕನೊಂದಿಗೆ ದಳಪತಿ ವಿಜಯ್​ ಮುಂದಿನ ಸಿನಿಮಾ; ಫ್ಯಾನ್ಸ್​ ಫುಲ್​ಖುಷ್​

ಪರಿಸ್ಥಿತಿಯ ಲಾಭ ಪಡೆಯಲು ಸುಲಿಗೆಗಿಳಿದ ಖಾಸಗಿ ಸಾರಿಗೆ ಸಂಸ್ಥೆಗಳು
ಪರಿಸ್ಥಿತಿಯ ಲಾಭ ಪಡೆಯಲು ಸುಲಿಗೆಗಿಳಿದ ಖಾಸಗಿ ಸಾರಿಗೆ ಸಂಸ್ಥೆಗಳು
ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು
ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು
ಚಾಮುಂಡೇಶ್ವರಿ ತಾಯಿಯೇ ಕರೆಸಿಕೊಳ್ಳುತ್ತಿದ್ದಾಳೆ: ಟೀಕೆಗಳಿಗೆ ಬಾನು ಟಾಂಗ್
ಚಾಮುಂಡೇಶ್ವರಿ ತಾಯಿಯೇ ಕರೆಸಿಕೊಳ್ಳುತ್ತಿದ್ದಾಳೆ: ಟೀಕೆಗಳಿಗೆ ಬಾನು ಟಾಂಗ್
ಪ್ರವಾಹದಿಂದ ಕೊಚ್ಚಿ ಹೋದ ಮನಾಲಿ ರಸ್ತೆ; ನದಿಯಲ್ಲಿ ಉರುಳಿ ಬಿದ್ದ ಕಾರು
ಪ್ರವಾಹದಿಂದ ಕೊಚ್ಚಿ ಹೋದ ಮನಾಲಿ ರಸ್ತೆ; ನದಿಯಲ್ಲಿ ಉರುಳಿ ಬಿದ್ದ ಕಾರು
ಮಟ್ಟಣ್ಣನವರ್ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು: ದೂರುದಾರ
ಮಟ್ಟಣ್ಣನವರ್ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು: ದೂರುದಾರ
ಕಳ್ಳರ ಕೈಯಲ್ಲಿ ಪಿಸ್ಟಲ್ ಕಂಡ ಮಾಲೀಕ ಪ್ಯಾನಿಕ್ ಆಗದೆ ಕಿರುಚಿದರು
ಕಳ್ಳರ ಕೈಯಲ್ಲಿ ಪಿಸ್ಟಲ್ ಕಂಡ ಮಾಲೀಕ ಪ್ಯಾನಿಕ್ ಆಗದೆ ಕಿರುಚಿದರು
ಬಾನು ಮುಷ್ತಾಕ್ ಕನ್ನಡದ ಬಗ್ಗೆ ಯಾವತ್ತೂ ಕೆಟ್ಟದ್ದಾಗಿ ಮಾತಾಡಿಲ್ಲ: ಸಚಿವ
ಬಾನು ಮುಷ್ತಾಕ್ ಕನ್ನಡದ ಬಗ್ಗೆ ಯಾವತ್ತೂ ಕೆಟ್ಟದ್ದಾಗಿ ಮಾತಾಡಿಲ್ಲ: ಸಚಿವ
ನಸುಕಿನ ಜಾವ 5 ಗಂಟೆಗೆ SIT ಕಚೇರಿಗೆ ಬಂದು ಕುಳಿತ ಸುಜಾತಾ ಭಟ್
ನಸುಕಿನ ಜಾವ 5 ಗಂಟೆಗೆ SIT ಕಚೇರಿಗೆ ಬಂದು ಕುಳಿತ ಸುಜಾತಾ ಭಟ್
ದಶಕಗಳಿಂದ ಕಾಂಗ್ರೆಸ್​ನಲ್ಲಿರುವ ನನ್ನ ಮೇಲೆ ಜವಾಬ್ದಾರಿ ಹೆಚ್ಚು: ಪ್ರಸಾದ್
ದಶಕಗಳಿಂದ ಕಾಂಗ್ರೆಸ್​ನಲ್ಲಿರುವ ನನ್ನ ಮೇಲೆ ಜವಾಬ್ದಾರಿ ಹೆಚ್ಚು: ಪ್ರಸಾದ್
ಯಾವ ನೈತಿಕತೆಯೊಂದಿಗೆ ಯತ್ನಾಳ್ ಮಾತಾಡುತ್ತಾರೆ? ಶಿವರಾಜ್ ತಂಗಡಿಗಿ
ಯಾವ ನೈತಿಕತೆಯೊಂದಿಗೆ ಯತ್ನಾಳ್ ಮಾತಾಡುತ್ತಾರೆ? ಶಿವರಾಜ್ ತಂಗಡಿಗಿ