AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಬ್​ ಸಿರೀಸ್​ ರೂಪದಲ್ಲಿ ಬರಲಿದೆ ಕನ್ನಡದ ಸೂಪರ್​ ಹಿಟ್​ ಧಾರಾವಾಹಿ ಮಾಯಾಮೃಗ; ಪ್ರೇಕ್ಷಕರಿಗೆ ಗುಡ್​ ನ್ಯೂಸ್​

TN Seetharam: 1998ರಲ್ಲಿ ಪ್ರಸಾರ ಆರಂಭಿಸಿದ ‘ಮಾಯಾಮೃಗ’ ಧಾರಾವಾಹಿ ನಂತರ 2014ರಲ್ಲಿ ಜೀ ಕನ್ನಡ ವಾಹಿನಿಯಲ್ಲಿ ಮರುಪ್ರಸಾರವನ್ನೂ ಕಂಡಿತ್ತು. ಈಗ ಹೊಸ ತಲೆಮಾರಿನ ಪ್ರೇಕ್ಷಕರಿಗೆ ಮತ್ತೆ ಮಾಯಾಮೃಗವನ್ನು ಪರಿಚಯಿಸಲಾಗುತ್ತಿದೆ. ವೆಬ್​ ಸಿರೀಸ್​ ರೂಪದಲ್ಲಿ ಇದನ್ನು ಜನರ ಮುಂದಿಡಲು ಸಿದ್ಧತೆ ನಡೆದಿದೆ.

ವೆಬ್​ ಸಿರೀಸ್​ ರೂಪದಲ್ಲಿ ಬರಲಿದೆ ಕನ್ನಡದ ಸೂಪರ್​ ಹಿಟ್​ ಧಾರಾವಾಹಿ ಮಾಯಾಮೃಗ; ಪ್ರೇಕ್ಷಕರಿಗೆ ಗುಡ್​ ನ್ಯೂಸ್​
ಮಾಯಾಮೃಗ - ನಿರ್ದೇಶಕ ಟಿಎನ್​ ಸೀತಾರಾಮ್​
ಮದನ್​ ಕುಮಾರ್​
| Edited By: |

Updated on: May 27, 2021 | 3:19 PM

Share

ಕನ್ನಡ ಕಿರುತೆರೆ ಲೋಕದಲ್ಲಿ ‘ಮಾಯಾಮೃಗ’ ಧಾರಾವಾಹಿ ಮಾಡಿದ ಮೋಡಿ ದೊಡ್ಡದು. ಟಿ.ಎನ್​. ಸೀತಾರಾಮ್​ ನಿರ್ದೇಶನದ ಈ ಸೀರಿಯಲ್​ ದೂರದರ್ಶನ ವಾಹಿನಿಯಲ್ಲಿ ಸಿಕ್ಕಾಪಟ್ಟೆ ಫೇಮಸ್​ ಆಗಿತ್ತು. ಇಂದಿಗೂ ಆ ಧಾರಾವಾಹಿಯನ್ನು ಜನರು ನೆನಪು ಮಾಡಿಕೊಳ್ಳುತ್ತಾರೆ. ಅಂಥ ಎಲ್ಲ ಪ್ರೇಕ್ಷಕರಿಗಾಗಿ ನಿರ್ದೇಶಕ ಟಿ.ಎನ್​. ಸೀತಾರಾಮ್​ ಅವರು ಒಂದು ಗುಡ್​ ನ್ಯೂಸ್​ ನೀಡಿದ್ದಾರೆ. ವೀಕ್ಷಕರು ಮತ್ತೆ ಮಾಯಾಮೃಗ ಧಾರಾವಾಹಿಯನ್ನು ಕಣ್ತುಂಬಿಕೊಳ್ಳುವ ಅವಕಾಶ ಸಿಗುತ್ತಿದೆ. ಅದು ಕೂಡ ಹೊಸ ರೂಪದಲ್ಲಿ ಎಂಬುದು ವಿಶೇಷ.

1998ರಲ್ಲಿ ಪ್ರಸಾರ ಆರಂಭಿಸಿದ ‘ಮಾಯಾಮೃಗ’ ಸೀರಿಯಲ್​ನಲ್ಲಿ ಎಚ್​.ಜಿ. ದತ್ತಾತ್ರೇಯಾ (ದತ್ತಣ್ಣ), ಮಾಳವಿಕಾ ಅವಿನಾಶ್​, ಮಂಜು ಭಾಷಿಣಿ, ಎಂ.ಡಿ. ಪಲ್ಲವಿ, ಮುಖ್ಯಮಂತ್ರಿ ಚಂದ್ರು, ವೈಶಾಲಿ ಕಾಸರವಳ್ಳಿ, ಅವಿನಾಶ್​, ಜಯಶ್ರೀ, ಲಕ್ಷ್ಮೀ ಚಂದ್ರಶೇಖರ್​ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡಿದ್ದರು. 2014ರಲ್ಲಿ ಈ ಧಾರಾವಾಹಿ ಜೀ ಕನ್ನಡ ವಾಹಿನಿಯಲ್ಲಿ ಮರುಪ್ರಸಾರವನ್ನೂ ಕಂಡಿತ್ತು. ಈಗ ಹೊಸ ತಲೆಮಾರಿನ ಪ್ರೇಕ್ಷಕರಿಗೆ ಮತ್ತೆ ಮಾಯಾಮೃಗವನ್ನು ಪರಿಚಯಿಸಲಾಗುತ್ತಿದೆ. ವೆಬ್​ ಸಿರೀಸ್​ ರೂಪದಲ್ಲಿ ಇದನ್ನು ಜನರ ಮುಂದಿಡಲು ಸಿದ್ಧತೆ ನಡೆದಿದೆ. ಯೂಟ್ಯೂಬ್​ನಲ್ಲಿ ಪ್ರಸಾರ ಮಾಡಲಾಗುವುದು ಎಂದು ಸ್ವತಃ ಟಿ.ಎನ್​. ಸೀತಾರಾಮ್​ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಟಿಎನ್​ ಸೀತಾರಾಮ್​ ಪೋಸ್ಟ್ ಮಾಡಿದ್ದಾರೆ. ‘ಮಾಯಾಮೃಗ ಧಾರಾವಾಹಿ ಕನ್ನಡದ ಶ್ರೇಷ್ಠ ಧಾರಾವಾಹಿಗಳಲ್ಲಿ ಒಂದು. ಅದೊಂದು ದಂತಕಥೆ. ಅಂಥ ಮಾಯಾಮೃಗ ಇನ್ನೊಂದು ವಾರದಲ್ಲಿ ವೆಬ್​ ಸಿರೀಸ್​ ರೂಪದಲ್ಲಿ ನಿಮ್ಮ ಮುಂದೆ ಬರಲಿದೆ’ ಎಂದು ಅವರು ಬರೆದುಕೊಂಡಿದ್ದಾರೆ. ಆ ಮೂಲಕ ಪ್ರೇಕ್ಷಕರಲ್ಲಿ ಹೊಸ ನಿರೀಕ್ಷೆ ಹುಟ್ಟು ಹಾಕಿದ್ದಾರೆ. ಭೂಮಿಕಾ ಟಾಕೀಸ್​ ಯೂಟ್ಯೂಬ್​ನಲ್ಲಿ ವೀಕ್ಷಣೆಗೆ ಲಭ್ಯವಾಗಲಿದೆ. ಸೀತಾರಾಮ್​ ಜೊತೆಯಲ್ಲಿ ಪಿ. ಶೇಷಾದ್ರಿ ಅವರು ಕೂಡ ‘ಮಾಯಾಮೃಗ’ಕ್ಕೆ ನಿರ್ದೇಶನ ಮಾಡಿದ್ದರು.

ಮಾಯಾಮೃಗ ಬಳಿಕ ಸೀತಾರಾಮ್​ ಅವರ ಬತ್ತಳಿಕೆಯಿಂದ ಹಲವು ಧಾರಾವಾಹಿಗಳು ಮೂಡಿಬಂದವು. ಆದರೂ ಅವುಗಳ ಪೈಕಿ ಮಾಯಾಮೃಗಕ್ಕೆ ವಿಶೇಷ ಸ್ಥಾನಮಾನವಿದೆ.​ ವೆಬ್​ ಸಿರೀಸ್​ ರೂಪದಲ್ಲಿ ಈ ಸೀರಿಯಲ್ ಬರುತ್ತಿರುವುದಕ್ಕೆ ಪ್ರೇಕ್ಷಕರು ಸಂತಸ ವ್ಯಕ್ತಪಡಿಸಿದ್ದಾರೆ. ‘ಸಬ್​ ಟೈಟಲ್​ ಅಳವಡಿಸಿ. ಆ ಮೂಲಕ ಬೇರೆ ಭಾಷೆಯವರು ಕೂಡ ಮಾಯಾಮೃಗ​ ನೋಡುವಂತಾಗಲಿ’ ಎಂಬ ಸಲಹೆ ಜನರಿಂದ ಸಿಕ್ಕಿದೆ. ಕೊರೊನಾ ಕಾಲದಲ್ಲಿ ಎಲ್ಲರೂ ಮನೆಯಲ್ಲಿ ಲಾಕ್​ ಆಗಿರುವಾಗ ಇಂಥ ಒಳ್ಳೆಯ ಧಾರಾವಾಹಿಯ ಪ್ರಸಾರ ನಿಜಕ್ಕೂ ಉತ್ತಮ ಬೆಳವಣಿಗೆ ಎಂದು ಜನರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

ಟಿ.ಎನ್.​ ಸೀತಾರಾಮ್ ಹೊಸ ಧಾರಾವಾಹಿಗೆ ಟೈಟಲ್​ ಫಿಕ್ಸ್​; ಮೇಧಾ ವಿದ್ಯಾಭೂಷಣ​ ನಾಯಕಿ!

ಬಾಲಿವುಡ್​ ಕಲಾವಿದ ಕಬೀರ್​ ಬೇಡಿ ಇಟಲಿಯಲ್ಲಿ ‘ಮಾದಕ ನಟ’ ಎನಿಸಿಕೊಳ್ಳಲು ಕಾರಣ ಆಗಿದ್ದು ಆ ಒಂದು ಧಾರಾವಾಹಿ

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ