AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಮಂತಾ ಎಲ್ಲವನ್ನೂ ಮರೆತು ಮುಂದೆ ಹೋಗಿದ್ದಾರೆ’; ನಾಗ ಚೈತನ್ಯ ನೇರ ಮಾತು

ಆಮಿರ್ ಖಾನ್ ನಟನೆಯ ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾದಲ್ಲಿ ನಾಗ ಚೈತನ್ಯ ಅವರು ಪ್ರಮುಖ ಪಾತ್ರ ಒಂದನ್ನು ನಿಭಾಯಿಸಿದ್ದಾರೆ. ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ಅವರು ಕೂಡ ಪಾಲ್ಗೊಳ್ಳುತ್ತಿದ್ದಾರೆ. ಈ ವೇಳೆ ಅವರಿಗೆ ವಿಚ್ಛೇದನದ ಬಗ್ಗೆ ಪ್ರಶ್ನೆ ಎದುರಾಗಿದೆ.

‘ಸಮಂತಾ ಎಲ್ಲವನ್ನೂ ಮರೆತು ಮುಂದೆ ಹೋಗಿದ್ದಾರೆ’; ನಾಗ ಚೈತನ್ಯ ನೇರ ಮಾತು
ಸಮಂತಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 01, 2022 | 2:46 PM

Share

ಸಮಂತಾ (Samantha) ಹಾಗೂ ನಾಗ ಚೈತನ್ಯ (Naga Chaitanya) ವಿಚ್ಛೇದನಕ್ಕೆ ಇನ್ನು ಕೆಲವೇ ತಿಂಗಳಲ್ಲಿ ಒಂದು ವರ್ಷ ತುಂಬಲಿದೆ. ಆದರೆ, ಈ ಬಗ್ಗೆ ಟಾಕ್ ಮಾತ್ರ ನಿಂತಿಲ್ಲ. ಅನೇಕರು ಅನೇಕ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಆದರೆ, ಇವರ ವಿಚ್ಛೇದನಕ್ಕೆ ಅಸಲಿ ಕಾರಣ ಮಾತ್ರ ಈವರೆಗೆ ತಿಳಿದು ಬಂದಿಲ್ಲ. ಕೆಲವರು ಇದನ್ನು ಸಮಂತಾ ಅವರ ನಿರ್ಧಾರ ಎಂದು ಹೇಳಿದರೆ, ಇನ್ನೂ ಕೆಲವರು ನಾಗ ಚೈತನ್ಯ ಅವರ ಮೇಲೆ ಆರೋಪ ಹೊರಿಸುತ್ತಿದ್ದಾರೆ. ಈ ಬಗ್ಗೆ ನಾಗ ಚೈತನ್ಯ ಅವರಿಗೆ ಈಗಲೂ ಪ್ರಶ್ನೆ ಎದುರಾಗುತ್ತಿದೆ. ಆದರೆ, ಈ ಬಗ್ಗೆ ಮಾತನಾಡಲು ಅವರು ನಿರಾಕರಿಸಿದ್ದಾರೆ.

ಆಮಿರ್ ಖಾನ್ ನಟನೆಯ ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾದಲ್ಲಿ ನಾಗ ಚೈತನ್ಯ ಅವರು ಪ್ರಮುಖ ಪಾತ್ರ ಒಂದನ್ನು ನಿಭಾಯಿಸಿದ್ದಾರೆ. ಈ ಸಿನಿಮಾ ಆಗಸ್ಟ್​ 11ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ಅವರು ಕೂಡ ಪಾಲ್ಗೊಳ್ಳುತ್ತಿದ್ದಾರೆ. ಈ ವೇಳೆ ಅವರಿಗೆ ವಿಚ್ಛೇದನದ ಬಗ್ಗೆ ಪ್ರಶ್ನೆ ಎದುರಾಗಿದೆ. ಇದಕ್ಕೆ ಅವರು ನೇರವಾಗಿ ಉತ್ತರಿಸಿದ್ದಾರೆ.

ಇಟೈಮ್ಸ್​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ನಾಗ ಚೈತನ್ಯ, ‘ನಾವಿಬ್ಬರೂ ಏನು ಹೇಳಬೇಕು ಎಂದುಕೊಂಡಿದ್ದೆವೋ ಅದನ್ನು ಪ್ರಕಟಣೆ ಮೂಲಕ ತಿಳಿಸಿದ್ದೇವೆ. ಅದು ಒಳ್ಳೆಯದಿರಲಿ ಅಥವಾ ಕೆಟ್ಟದಿರಲಿ ನಾನು ಏನು ಹೇಳಬೇಕು ಎಂದುಕೊಂಡಿದ್ದೇನೋ ಅದನ್ನು ಹೇಳಿದ್ದೇನೆ. ನಾನು ಹಾಗೂ ಸಮಂತಾ ಇಬ್ಬರೂ ಎಲ್ಲವನ್ನೂ ಮರೆತು ಮುಂದೆ ಬಂದಿದ್ದೇವೆ. ಆ ಬಗ್ಗೆ ನಾನು ವಿಶ್ವದ ಎದುರು ಮಾತನಾಡುವ ಅವಶ್ಯಕತೆ ಇಲ್ಲ’ ಎಂದಿದ್ದಾರೆ ನಾಗ ಚೈತನ್ಯ.

ಇದನ್ನೂ ಓದಿ
Image
Samantha: ಸಮಂತಾಗೆ ಜೋಡಿಯಾಗಲು ಸಿದ್ಧವಾಗಿದೆ ಬಾಲಿವುಡ್​ ಹೀರೋಗಳ ಪಟ್ಟಿ; ಆದ್ರೂ ಫ್ಯಾನ್ಸ್​ಗೆ ಸಮಾಧಾನ ಇಲ್ಲ
Image
ದೇಶದ ಅತ್ಯಂತ ಜನಪ್ರಿಯ ನಟಿ ಸಮಂತಾ; ರಶ್ಮಿಕಾ ಮಂದಣ್ಣಗೆ ಎಷ್ಟನೇ ಸ್ಥಾನ?
Image
No Entry 2: ಸಲ್ಮಾನ್​ ಖಾನ್​ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ, ಸಮಂತಾ? ‘ನೋ ಎಂಟ್ರಿ’ಯಲ್ಲೂ ಸಿಗಬಹುದು ಎಂಟ್ರಿ
Image
ಅತಿ ಹೆಚ್ಚು ಸಂಬಳ ಪಡೆಯುವ ದಕ್ಷಿಣ ಭಾರತದ ಟಾಪ್​ 10 ನಟಿಯರು ಇವರು; ರಶ್ಮಿಕಾ, ಸಮಂತಾ ಸಂಭಾವನೆ ಎಷ್ಟು?

‘ನನ್ನ ಗೆಳೆಯರು, ಕುಟುಂಬದವರು ನನ್ನ ಆಪ್ತರಿಗೆ ಈ ಬಗ್ಗೆ ಗೊತ್ತಿದೆ. ಒಂದು ಸುದ್ದಿ ಮತ್ತೊಂದು ಸುದ್ದಿಯನ್ನು ರಿಪ್ಲೇಸ್ ಮಾಡುತ್ತದೆ. ವದಂತಿಗಳು ಕೇವಲ ತಾತ್ಕಾಲಿಕ. ನಾನು ಆ ಬಗ್ಗೆ ಪ್ರತಿಕ್ರಿಯಿಸಿದರೆ ಮತ್ತೊಂದಷ್ಟು ಸುದ್ದಿಗಳು ಹುಟ್ಟಿಕೊಳ್ಳುತ್ತವೆ. ಜೀವನದಲ್ಲಿ ಘಟಿಸಿದ ಎಲ್ಲವೂ ಒಂದು ದಿನ ಮಾಸುತ್ತದೆ’ ಎಂದಿದ್ದಾರೆ ನಾಗ ಚೈತನ್ಯ.

ಇದನ್ನೂ ಓದಿ:  ನಾಗ ಚೈತನ್ಯ ಜತೆ ವಾಸಿಸಿದ್ದ ಮನೆಯನ್ನು ದುಬಾರಿ ಬೆಲೆ ಕೊಟ್ಟು ಖರೀದಿಸಿದ ಸಮಂತಾ; ಏನಿದು ಸೆಂಟಿಮೆಂಟ್​?

ನಾಗ ಚೈತನ್ಯ ಹಾಗೂ ಸಮಂತಾ 2021ರ ಅಕ್ಟೋಬರ್ ತಿಂಗಳಲ್ಲಿ ವಿಚ್ಛೇದನ ಪಡೆದರು. ವಿಚ್ಛೇದನದ ಬಳಿಕ ನಾನಾ ಸುದ್ದಿಗಳು ಹುಟ್ಟಿಕೊಂಡವು. ಈ ಬಗ್ಗೆ ದಂಪತಿ ಅಷ್ಟಾಗಿ ತಲೆಕೆಡಿಸಿಕೊಳ್ಳಲಿಲ್ಲ.

ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ