AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಸಾವೋ ಅಥವಾ ಕೊಲೆಯೋ? ಬೆಂಗಳೂರಲ್ಲಿ ಸಂಬಂಧಿಕರನ್ನು ಕಳೆದುಕೊಂಡು ಸರ್ಕಾರಕ್ಕೆ ಹಿಡಿಶಾಪ ಹಾಕಿದ ಬಾಲಿವುಡ್​ ನಟಿ

ಆಸ್ಪತ್ರೆಯಲ್ಲಿ ಆಕ್ಸಿಜನ್​ ಹಾಗೂ ಬೆಡ್​ ಸಿಗುವವರೆಗೆ ನಾನು ಜಿಎಸ್​ಟಿ ಪಾವತಿಸುವುದಿಲ್ಲ ಎಂದು ಬಿಜೆಪಿ ಇಂಡಿಯಾ ಹಾಗೂ ಪಿಎಂಒ ಇಂಡಿಯಾಗೆ ಟ್ಯಾಗ್​ ಮಾಡಿದ್ದಾರೆ ಮೀರಾ.

ಇದು ಸಾವೋ ಅಥವಾ ಕೊಲೆಯೋ? ಬೆಂಗಳೂರಲ್ಲಿ ಸಂಬಂಧಿಕರನ್ನು ಕಳೆದುಕೊಂಡು ಸರ್ಕಾರಕ್ಕೆ ಹಿಡಿಶಾಪ ಹಾಕಿದ ಬಾಲಿವುಡ್​ ನಟಿ
ಮೀರಾ ಚೋಪ್ರಾ
ರಾಜೇಶ್ ದುಗ್ಗುಮನೆ
|

Updated on: May 17, 2021 | 6:58 PM

Share

ನಟಿ ಮೀರಾ ಚೋಪ್ರಾ ಸಿನಿಮಾದಲ್ಲಿ ಅಷ್ಟಾಗಿ ಆ್ಯಕ್ಟಿವ್​ ಆಗಿಲ್ಲ. ಆದಾಗ್ಯೂ ಕೆಲ ವಿಚಾರಕ್ಕೆ ಅವರು ಸುದ್ದಿಯಾಗುತ್ತಲೇ ಇರುತ್ತಾರೆ. ಅಭಿಮಾನಿಗಳ ಸಂಪರ್ಕದಲ್ಲಿರುವ ಉದ್ದೇಶದಿಂದ ಅವರು ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟಿವ್​ ಆಗಿದ್ದಾರೆ. ಈಗ ಕೊರೊನಾದಿಂದ ಕುಟುಂಬದ ಇಬ್ಬರು ಸದಸ್ಯರನ್ನು ಕಳೆದುಕೊಂಡ ಬಗ್ಗೆ ಅವರು ಕಣ್ಣೀರು ಹಾಕಿದ್ದಾರೆ.

ಕೊರೊನಾ ವೈರಸ್​ಗೆ ಅನೇಕರು ಬಲಿಯಾಗುತ್ತಿದ್ದಾರೆ. ಸಾಕಷ್ಟು ಸೆಲೆಬ್ರಿಟಿಗಳು ಕೊವಿಡ್​ನಿಂದ ಬಲಿಯಾಗಿದ್ದಾರೆ. ಅನೇಕ ನಟ-ನಟಿಯರಿಗೆ ಕೊರೊನಾ ಬಂದಿದ್ದರೂ ಅವರು ಗುಣಮುಖರಾಗಿದ್ದಾರೆ. ಮೀರಾ ಕುಟುಂಬದಲ್ಲೂ ಕೊರೊನಾ ಅಬ್ಬರ ಜೋರಾಗಿದೆ. ಪರಿಣಾಮ ಅವರ ಮನೆಯ ಸದಸ್ಯರು ಮೃತಪಟ್ಟಿದ್ದಾರೆ.

ನನ್ನ ಸೋದರ ಸಂಬಂಧಿ ಬೆಂಗಳೂರಿನಲ್ಲಿರುತ್ತಿದ್ದರು. ಅವರು ಕೊವಿಡ್​ನಿಂದ ಮೃತಪಟ್ಟಿದ್ದಾರೆ. ಆಮ್ಲಜನಕ ಮಟ್ಟ ತೀವ್ರವಾಗಿ ಕುಸಿದಿತ್ತು. 24 ಗಂಟೆ ಆದರೂ ಐಸಿಯು ಬೆಡ್​ ಸಿಕ್ಕಿಲ್ಲ. ಇನ್ನೇನು ಉಸಿರು ಹೋಗುತ್ತದೆ ಎನ್ನುವಾಗ ಬೆಡ್​ ಸಿಕ್ಕಿದೆ. ಪ್ರಯೋಜನ ಏನು? ಇದು ಸಾವೋ ಅಥವಾ ಕೊಲೆಯೋ? ಸರ್ಕಾರದಿಂದಾಗಿ ನಾವು ವೈದ್ಯಕೀಯವಾಗಿ ಅಂಗವಿಕಲರಾಗಿದ್ದೇವೆ’ ಎಂದು ಟ್ವೀಟ್​ ಮಾಡಿದ್ದಾರೆ.

ಕಳೆದ ಒಂದು ವಾರದಲ್ಲಿ ನಮ್ಮ ಕುಟುಂಬದಲ್ಲಿ ಇಬ್ಬರು ಮೃತಪಟ್ಟಿದ್ದಾರೆ, ಈ ರೀತಿ ಅಸಹಾಯಕ ಭಾವನೆ ಯಾವಾಗಲೂ ಕಾಡಿರಲಿಲ್ಲ. ನನ್ನ ದೇಹ ಜಡತ್ವ ಪಡೆದುಕೊಂಡು ಕೋಪವೂ ಬರದಂತಾಗಿದೆ ಎಂದು ನೋವು ಹೊರಹಾಕಿದ್ದಾರೆ.

ಆಸ್ಪತ್ರೆಯಲ್ಲಿ ಆಕ್ಸಿಜನ್​ ಹಾಗೂ ಬೆಡ್​ ಸಿಗುವವರೆಗೆ ನಾನು ಜಿಎಸ್​ಟಿ ಪಾವತಿಸುವುದಿಲ್ಲ ಎಂದು ಬಿಜೆಪಿ ಇಂಡಿಯಾ ಹಾಗೂ ಪಿಎಂಒ ಇಂಡಿಯಾಗೆ ಟ್ಯಾಗ್​ ಮಾಡಿದ್ದಾರೆ ಮೀರಾ.

ಮೀರಾ ಚೋಪ್ರಾ ಟಾಲಿವುಡ್​ನ ಕೆಲ ಸಿನಿಮಾಗಳಲ್ಲಿ ನಟಿಸಿದ್ದಾರೆ. ಪವನ್​ ಕಲ್ಯಾಣ್​ ನಟನೆಯ ಬಂಗಾರಮ್ ಸೇರಿ ದಕ್ಷಿಣ ಭಾರತದ ಕೆಲವು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ದರ್ಶನ್​ ನಟನೆಯ ಅರ್ಜುನ್​ ಸಿನಿಮಾದಲ್ಲಿ ಮೀರಾ ನಟಿಸಿದ್ದರು. ಅವರಿಗೆ ಚಿತ್ರರಂಗದಲ್ಲಿ ಹೇಳಿಕೊಳ್ಳುವಂಥ ಯಶಸ್ಸು ಸಿಗಲೇ ಇಲ್ಲ. ಬಾಲಿವುಡ್ ಕೂಡ ಅವರ ಕೈ ಹಿಡಿಯಲಿಲ್ಲ. ಇದೆಲ್ಲದಕ್ಕೂ ಪ್ರಿಯಾಂಕಾ ಚೋಪ್ರಾ ಅವರೇ ಕಾರಣ ಎಂದು ಮೀರಾ ಚೋಪ್ರಾ ಆರೋಪಿಸಿದ್ದರು.

ಇದನ್ನೂ ಓದಿ: ಪ್ರಿಯಾಂಕಾ ಚೋಪ್ರಾ ನನ್ನ ಅವಕಾಶ ಕಿತ್ತುಕೊಂಡರು; ಮೀರಾ ಚೋಪ್ರಾ ಗಂಭೀರ ಆರೋಪ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!