ಜಾತಿ ನಿಂದನೆ ಆರೋಪದಡಿ ಬಿಗ್​ ಬಾಸ್​ ಸ್ಪರ್ಧಿ ಅರೆಸ್ಟ್​; ಬಂಧನಕ್ಕೂ ಮೊದಲು ರಂಪಾಟ ಮಾಡಿದ ನಟಿ

ಮೀರಾ ಕಾಲಿವುಡ್​ನಲ್ಲಿ ಅಷ್ಟು ಚಿರಪರಿಚಿತ ಮುಖವಲ್ಲ. ಅವರು ನಟಿಸಿದ್ದು ಬೆರಳೆಣಿಕೆ ಸಿನಿಮಾಗಳು. ಮೀರಾಗೆ, ಚಿತ್ರರಂಗದಲ್ಲಿ ಹೇಳಿಕೊಳ್ಳುವಂತಹ ಪಾತ್ರ ಸಿಕ್ಕಿಲ್ಲ.

ಜಾತಿ ನಿಂದನೆ ಆರೋಪದಡಿ ಬಿಗ್​ ಬಾಸ್​ ಸ್ಪರ್ಧಿ ಅರೆಸ್ಟ್​; ಬಂಧನಕ್ಕೂ ಮೊದಲು ರಂಪಾಟ ಮಾಡಿದ ನಟಿ
ಮೀರಾ ಮಿಥುನ್​
Follow us
| Updated By: ರಾಜೇಶ್ ದುಗ್ಗುಮನೆ

Updated on: Aug 14, 2021 | 4:17 PM

ಜಾತಿ ನಿಂದನೆ ಆರೋಪದಡಿ ಕಾಲಿವುಡ್​ ನಟಿ, ಮಾಡೆಲ್​ ಹಾಗೂ ತಮಿಳು ಬಿಗ್​ ಬಾಸ್​ ಮಾಜಿ ಸ್ಪರ್ಧಿ ಮೀರಾ ಮಿಥುನ್​ ಅವರನ್ನು ಕೇಂದ್ರ ಅಪರಾಧ ತನಿಖಾ ದಳ ಇಂದು (ಆಗಸ್ಟ್ 14) ಬಂಧಿಸಿದೆ. ಇದಕ್ಕೂ ಮೊದಲು ಅವರು ಕೂಗಾಟ ನಡೆಸಿದ್ದು, ವಿಡಿಯೋ ವೈರಲ್​ ಆಗಿದೆ.

‘ಅನೈತಿಕ ಚಟುವಟಿಕೆ ಮತ್ತು ಅಪರಾಧ ಕೃತ್ಯಗಳಲ್ಲಿ ಪರಿಶಿಷ್ಟ ಜಾತಿ ಜನರು ಪಾಲ್ಗೊಂಡಿರುವುದರಿಂದ ಅವರು ಸಮಸ್ಯೆ ಎದುರಿಸುತ್ತಾರೆ. ಕಾರಣ ಇಲ್ಲದೇ ಯಾರೂ ಯಾರ ಬಗ್ಗೆಯೂ ಕೆಟ್ಟದ್ದು ಮಾತನಾಡುವುದಿಲ್ಲ. ಚಿತ್ರರಂಗದಲ್ಲಿ ಆಗುತ್ತಿರುವ ಕೆಡುಕುಗಳಿಗೆ ಪರಿಶಿಷ್ಟ ಜಾತಿಯ ನಿರ್ದೇಶಕರು ಕಾರಣ. ಅಂಥವರನ್ನೆಲ್ಲ ಚಿತ್ರರಂಗದಿಂದ ತೊಲಗಿಸಲು ಇದು ಸರಿಯಾದ ಸಮಯ ಅಂತ ನನಗೆ ಅನಿಸುತ್ತದೆ’ ಎಂದು ಸಂದರ್ಶನವೊಂದರಲ್ಲಿ ಮೀರಾ ಹೇಳಿಕೆ ನೀಡಿದ್ದರು.

ಮೀರಾ ಮಿಥುನ್​ ಹೇಳಿಕೆಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ, ಜಾತಿ ನಿಂದನೆ ಆರೋಪದಡಿಯಲ್ಲಿ ಮೀರಾ ವಿರುದ್ಧ ಸಾಕಷ್ಟು ಪ್ರಕರಣಗಳು ಕೂಡ ದಾಖಲಾಗಿದ್ದವು. ಈ ಸಂಬಂಧ ಪೊಲೀಸರು ಅವರಿಗೆ ಸಮನ್ಸ್​ ಜಾರಿ ಮಾಡಿದ್ದರು. ಈಗ ಮೀರಾ ಬಂಧನ ನಡೆದಿದೆ. ನಟಿ ವಿರುದ್ಧ ಐಪಿಸಿ ಸೆಕ್ಷನ್​ 153, 153ಎ(1)(ಎ), 505(1)(ಬಿ), 505 (2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಬಂಧನಕ್ಕೂ ಮೊದಲು ಮೀರಾ ಲೈವ್​ ಬಂದಿದ್ದಾರೆ. ಈ ವೇಳೆ ಪೊಲೀಸರು ಮೊಬೈಲ್​ ನೀಡುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಮೀರಾ ನಿರಾಕರಿಸಿದ್ದಾರೆ. ಅಲ್ಲದೆ, ಪೊಲೀಸರು ನನಗೆ ಕಿರುಕುಳ ನೀಡೋಕೆ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿ, ರಂಪಾಟ ಮಾಡಿದ್ದಾರೆ. ಸದ್ಯ, ಈ ವಿಡಿಯೋ ಕೂಡ ವೈರಲ್​ ಆಗಿದೆ.

ಮೀರಾ ಕಾಲಿವುಡ್​ನಲ್ಲಿ ಅಷ್ಟು ಚಿರಪರಿಚಿತ ಮುಖವಲ್ಲ. ಅವರು ನಟಿಸಿದ್ದು ಬೆರಳೆಣಿಕೆ ಸಿನಿಮಾಗಳು. ಮೀರಾಗೆ, ಚಿತ್ರರಂಗದಲ್ಲಿ ಹೇಳಿಕೊಳ್ಳುವಂತಹ ಪಾತ್ರ ಸಿಕ್ಕಿಲ್ಲ. ತಮಿಳು ಬಿಗ್​ ಬಾಸ್​ ಸೀಸನ್​ 3ರ ಸ್ಪರ್ಧಿಯಾಗಿ ಮೀರಾ ಎಂಟ್ರಿ ಕೊಟ್ಟಿದ್ದರು. ನಂತರ ಅವರ ಜನಪ್ರಿಯತೆ ಕೊಂಚ ಹೆಚ್ಚಿತ್ತು.

ಇದನ್ನೂ ಓದಿ: ‘ಪರಿಶಿಷ್ಟ ಜಾತಿ ಜನರನ್ನು ಚಿತ್ರರಂಗದಿಂದ ಓಡಿಸಬೇಕು’; ವಿವಾದಾತ್ಮಕ ಹೇಳಿಕೆ ನೀಡಿದ ನಟಿ ಮೀರಾ ವಿರುದ್ಧ ಕೇಸ್​

ಬಿಗ್​ ಬಾಸ್​ ಮಿನಿ ಸೀಸನ್​ ನಿರೂಪಣೆಗೆ ಸುದೀಪ್​ ಬರೋದು ಪಕ್ಕಾ; ಆದರೆ ಯಾವಾಗ?

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ