AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

The Kashmir Files: ಮೀಟುಗೋಲು; ಈಗ ವಿವಾದಗಳು ತಾವಾಗಿಯೇ ಹುಟ್ಟುವುದಿಲ್ಲ, ಹುಟ್ಟಿಸಲಾಗುತ್ತದೆ

Cinema : ಇಂದಿನ ಭಾರತದ ಸನ್ನಿವೇಶದಲ್ಲಿ ಆಧುನಿಕ ಮಾಧ್ಯಮಗಳ ಮೂಲಕ ವಿಷಯಗಳ ಸೆನ್ಸೇಷನಲೈಜ಼ೇಷನ್ ಬಹಳ ಸಾಮಾನ್ಯವಾದ ವಿಷಯವಾಗಿದೆ. ಯುವಜನಾಂಗದ ರಕ್ತ ಕುದಿಯುವ ಹಾಗೆ ಮಾಡಿದ್ದ ಸಿನಿಮಾಗಳು ಆಗಲೂ ಇದ್ದವು.

The Kashmir Files: ಮೀಟುಗೋಲು; ಈಗ ವಿವಾದಗಳು ತಾವಾಗಿಯೇ ಹುಟ್ಟುವುದಿಲ್ಲ, ಹುಟ್ಟಿಸಲಾಗುತ್ತದೆ
ಲೇಖಕಿ ನೂತನ ದೋಶೆಟ್ಟಿ
ಶ್ರೀದೇವಿ ಕಳಸದ
|

Updated on:Mar 16, 2022 | 10:53 AM

Share

ಮೀಟುಗೋಲು | Meetugolu : ಯಾರ ಲೀಲೆಗೋ ಯಾರೋ ಏನೋ ಗುರಿಯಿರದೆ ಬಿಟ್ಟ ಬಾಣಕ್ಕೆ ಓಡುತ್ತಲೇ ಇರುತ್ತೇವೆ, ಇದ್ದೇವೆ. ಆದರೂ ಬಿಡುವು ಮಾಡಿಕೊಂಡು ಒಂದು ಸಿನೆಮಾ ನೋಡುವ ಮನಸ್ಸು ಮಾಡುತ್ತೇವೆ; ಅರೆ! ಇಂಥದೇ ಒಂದು ಪಾತ್ರ, ಇಂಥದೇ ಒಂದು ಸನ್ನಿವೇಶ, ಇಂಥದೇ ಒಂದು ತಂತುವಿನೊಂದಿಗೆ ಜೀವಿಸುತ್ತಿದ್ದೇವಲ್ಲ ಎನ್ನಿಸಲಾರಂಭಿಸುತ್ತದೆ. ಎದುರಿನ ಪರದೆಯೊಳಗಿನ ಅಂತಃಸಾರ ಎದೆಮೆದುಳಿಗಿಳಿದು ಮೆಲ್ಲನೆ ಅಲೆಗಳನ್ನು ಹರಡುತ್ತದೆ. ಇಳಿದದ್ದು ಕಾಡದೇ ಇರದು, ಕಾಡುವುದು ಸುಮ್ಮನಿರಲು ಬಿಡದು. ಹಿಂಜಾಡಿ ಹಿಂಜಾಡಿ ಏನೇನೋ ನೆನಪುಗಳನ್ನುಕ್ಕಿಸುತ್ತದೆ, ಪ್ರಶ್ನೆಗಳನ್ನೆಬ್ಬಿಸುತ್ತದೆ. ಏಕೆಂದರೆ ಕಲೆ ಎನ್ನುವುದು ‘ರುಚಿಯವಿಚಾರ’, ನಮ್ಮ ಭಾವಭಿತ್ತಿಯನ್ನು ಮೀಟಿ, ಮೀರಿ ಪಾಕಗಟ್ಟುವ ಆತ್ಮಾವಲೋಕನದ ಪ್ರಕಾರ. ಈ ಪ್ರಕ್ರಿಯೆಯಲ್ಲಿ ನಮ್ಮನ್ನು ನಾವೇ  ಕೆದಕಿಕೊಳ್ಳುತ್ತ ಅರಿವಿಲ್ಲದೆ ನಾವೇ ಒಂದು ಪಾತ್ರವಾಗಿಯೂ ನಿಂತುಬಿಡಬಹುದು! ಅಂತಹ ಅಭಿವ್ಯಕ್ತಿಗೊಂದು ವೇದಿಕೆಯಾಗಿ ‘ಟಿವಿ9 ಕನ್ನಡ ಡಿಜಿಟಲ್ : ಮೀಟುಗೋಲು’ ನೀವು ಬರೆದಾಗೆಲ್ಲ ಇದು ಪ್ರಕಟವಾಗುತ್ತದೆ. ಬರೆಯುತ್ತಿರಿ: tv9kannadadigital@gmail.com

ಸಿನೆಮಾ : ದಿ ಕಾಶ್ಮೀರ ಫೈಲ್ಸ್ (The Kashmir Files) | ಲೇಖಕಿ : ನೂತನ ದೋಶೆಟ್ಟಿ (Nutan Doshetty

(ಭಾಗ 1)

ಈ ಸಿನಿಮಾ ಈಗ ಸದ್ದು ಮಾಡುತ್ತಿದೆ. ವಿವಾದಾತ್ಮಕ ವಿಷಯಗಳಿರುವ ಚಿತ್ರಗಳು ಸದ್ದು ಮಾಡುತ್ತಿರುವುದು ಹೊಸದೇನಲ್ಲ. ಈ ಹಿಂದೆಯೂ ಫೈರ್, ಪದ್ಮಾವತ್, ಲಕ್ಷ್ಮೀ ಬಾಂಬ್, ಪಿಕೆ ಮೊದಲಾದ ಹಿಂದಿ ಚಲನಚಿತ್ರಗಳು ಬಿಡುಗಡೆಗೆ ಮೊದಲೇ ದೊಡ್ಡ ಚರ್ಚೆಗೆ ಒಳಗಾಗಿದ್ದವು. ದೇಶದ ಕೆಲ ಭಾಗಗಳಲ್ಲಿ ಈ ಸಿನಿಮಾಗಳ ಬಿಡುಗಡೆ ವಿರೋಧಿಸಿ ಪ್ರದರ್ಶನಗಳು ನಡೆದವು. ಕೆಲ ದಿನಗಳಲ್ಲೇ ಜನ ಮುಗಿಬಿದ್ದು ಚಿತ್ರಗಳನ್ನು ನೋಡಿದ್ದಲ್ಲದೇ ಕೆಲವು ಗಲ್ಲಾಪೆಟ್ಟಿಗೆಯಲ್ಲಿ ಯಶಸ್ವಿಯಾದರೆ ಕೆಲವು ಪ್ರಶಸ್ತಿಗಳನ್ನು ಬಾಚಿಕೊಂಡವು. ಕಾಶ್ಮೀರದ ಭಯೋತ್ಪಾದನೆಯ ಕುರಿತಂತೆ ಕೆಲವಾರು ಚಿತ್ರಗಳು ಹಿಂದೆ ಬಂದಿದ್ದರೂ ಈ ಮಟ್ಟದ ಸುದ್ದಿ ಮಾಡಿರಲಿಲ್ಲ. ಹಾಗಾದರೆ ಈ ಸಿನಿಮಾ ಏಕೆ ಇಷ್ಟು ಸುದ್ದಿಯಲ್ಲಿದೆ?

ಇದನ್ನೂ ಓದಿ : Amazon Prime Video : ‘ನೆನಪುಗಳು ಮನಸ್ಸಿನಲ್ಲಿರಲಿ ಅಂತ ಇಟ್ಟುಕೊಳ್ಳಬೇಕು, ಯಾರನ್ನಾದರೂ ದೂಷಿಸುವುದಕ್ಕಂತ ಅಲ್ಲ’

ಕಾಶ್ಮೀರ ಫೈಲ್ಸ್ ಚಿತ್ರ ಸತ್ಯ ಘಟನೆಯಾಧಾರಿತ ಹಾಗೂ ಈ ಸತ್ಯ ಇದುವರೆಗೂ ಜಗದ ಕಣ್ಣಿಂದ ಮರೆಮಾಚಲ್ಪಟ್ಟಿದ್ದು ಎಂಬುದಷ್ಟೇ ಈ ಕುತೂಹಲಕ್ಕೆ ಕಾರಣ ಇರಲಾರದು. ಇಂದಿನ ಭಾರತದ ಸನ್ನಿವೇಶದಲ್ಲಿ ಆಧುನಿಕ ಮಾಧ್ಯಮಗಳ ಮೂಲಕ ವಿಷಯಗಳ ಸೆನ್ಸೇಷನಲೈಜ಼ೇಷನ್ ಬಹಳ ಸಾಮಾನ್ಯವಾದ ವಿಷಯವಾಗಿದೆ. 70-80ರ ದಶಕದಲ್ಲಿ ಈ ಕೆಲಸವನ್ನು ಸಿನಿಮಾಗಳು ಬಹಳ ಪರಿಣಾಮಕಾರಿಯಾಗಿ ಮಾಡಿದ್ದವು. ಯುವಜನಾಂಗದ ರಕ್ತ ಕುದಿಯುವ ಹಾಗೆ ಮಾಡಿದ್ದ ಅನೇಕ ಸಿನಿಮಾಗಳು ಆಗ ಇದ್ದವು . ಆದರೆ ಆಗಿನ ಸಾಮಾಜಿಕ ಹಾಗೂ ಮಾಧ್ಯಮ ಸನ್ನಿವೇಶಗಳು ಭಿನ್ನವಾಗಿದ್ದು, ರೋಷವನ್ನು ಅವುಡುಗಚ್ಚಿ ಸಹಿಸುವದನ್ನು ಕುಟುಂಬದ ಸಂಯಮಿಕ ವಾತಾವರಣ ಕಲಿಸಿತ್ತು. ಜೊತೆಗೆ ಕ್ಷಣಾರ್ಧದಲ್ಲಿ ಜಗತ್ತನ್ನು ಸುತ್ತುವ ಇಂದಿನ ಆಧುನಿಕ ಮಾಧ್ಯಮಗಳೂ ಇರಲಿಲ್ಲ. ಆದರೆ ಈಗ ವಿವಾದಗಳು ತಾವಾಗಿ ಹುಟ್ಟುವುದಿಲ್ಲ. ಅವುಗಳನ್ನು ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರಣಗಳಿಗಾಗಿ ಹುಟ್ಟಿಸಲಾಗುತ್ತದೆ ಎಂಬುದನ್ನು ಕಳೆದ ಕೆಲ ದಶಕಗಳ ಬೆಳವಣಿಗೆಗಳನ್ನು ಗಮನಿಸಿ ತಿಳಿಯಬಹುದಾಗಿದೆ.

(ಮುಂದಿನ ಭಾಗಕ್ಕಾಗಿ ನಿರೀಕ್ಷಿಸಿ)

ಇದನ್ನೂ ಓದಿ : Modern Love : ಮೀಟುಗೋಲು ; ಈಕೆ ರಾತ್ರಿಯ ಹುಡುಗಿ ಅವನು ಹಗಲಿನ ಹುಡುಗ

ಎಲ್ಲ ಭಾಗಗಳನ್ನೂ ಇಲ್ಲಿ ಓದಿ : https://tv9kannada.com/tag/meetugolu

Published On - 9:28 am, Wed, 16 March 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!