AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿ ವಿಚಾರ ಹೇಳದ ವರುಣ್ ತೇಜ್ ಮೇಲೆ ಚಿರಂಜೀವಿಗೆ ಇನ್ನೂ ಇದೆ ಕೋಪ

ವರುಣ್ ತೇಜ್ ಮತ್ತು ಲಾವಣ್ಯ ಎರಡು ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದಾರೆ. ‘ಮಿಸ್ಟರ್’ ಹಾಗೂ ‘ಅಂತರಿಕ್ಷಮ್ 9000 ಕೆಎಂಪಿಎಚ್​’ ಚಿತ್ರಗಳಲ್ಲಿ ಇವರು ಬಣ್ಣ ಹಚ್ಚಿದ್ದಾರೆ. ಇವರು ಮದುವೆ ಆಗಿದ್ದು ಇಟಲಿಯಲ್ಲಿ. ಕಳೆದ ವರ್ಷ ನವೆಂಬರ್​ನಲ್ಲಿ ಇವರ ಮದುವೆ ನಡೆಯಿತು. ವರುಣ್ ತೇಜ್ ಮೇಲೆ ಇರುವ ಸಿಟ್ಟಿನ ಬಗ್ಗೆ ಚಿರಂಜೀವಿ ಮಾತನಾಡಿದ್ದಾರೆ.

ಪ್ರೀತಿ ವಿಚಾರ ಹೇಳದ ವರುಣ್ ತೇಜ್ ಮೇಲೆ ಚಿರಂಜೀವಿಗೆ ಇನ್ನೂ ಇದೆ ಕೋಪ
ಚಿರಂಜೀವಿ, ವರುಣ್​ ತೇಜ್​
 ಶ್ರೀಲಕ್ಷ್ಮೀ ಎಚ್
| Edited By: |

Updated on: Feb 26, 2024 | 10:23 PM

Share

ವರುಣ್ ತೇಜ್ (Varun Tej) ಅವರು ಲಾವಣ್ಯ ತ್ರಿಪಾಠಿ (Lavanya Tripathi) ಅವರನ್ನು ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಇವರು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ಸೆಟ್​ನಲ್ಲಿ ಇವರ ಮಧ್ಯೆ ಪ್ರೀತಿ ಮೂಡಿತು. ಇವರ ಪ್ರೀತಿ ವಿಚಾರವನ್ನು ಗುಟ್ಟಾಗಿಯೇ ಇಡಲಾಗಿತ್ತು. ವರುಣ್ ತೇಜ್ ಪ್ರೀತಿ ವಿಚಾರ ಅವರ ಅಂಕಲ್ ಚಿರಂಜೀವಿಗೆ ಗೊತ್ತಿರಲಿಲ್ಲ. ಹಾಗಂತ ಇದು ಗಾಸಿಪ್ ಅಲ್ಲ. ಚಿರಂಜೀವಿ (Chiranjeevi) ಅವರೇ ಈ ವಿಚಾರವನ್ನು ರಿವೀಲ್ ಮಾಡಿದ್ದಾರೆ. ಅವರು ಈವೆಂಟ್ ಒಂದರಲ್ಲಿ ಈ ಬಗ್ಗೆ ಮಾತನಾಡಿದ್ದಾರೆ.

ವರುಣ್ ತೇಜ್ ಅವರು ‘ಆಪರೇಷನ್ ವ್ಯಾಲೆಂಟೈನ್’ ಸಿನಿಮಾದಲ್ಲಿ ನಟಿಸಿದ್ದಾರೆ. ಅವರಿಗೆ ಜೊತೆಯಾಗಿ ಮಾನುಷಿ ಚಿಲ್ಲರ್ ನಟಿಸಿದ್ದಾರೆ. ಈ ಸಿನಿಮಾ ಮಾರ್ಚ್ 1ರಂದು ರಿಲೀಸ್ ಆಗಲಿದೆ. ತೆಲುಗಿನ ಜೊತೆ ಹಿಂದಿ ಭಾಷೆಯಲ್ಲೂ ಸಿನಿಮಾ ಬಿಡುಗಡೆ ಆಗಲಿದೆ. ಈ ಚಿತ್ರದ ಪ್ರೀ-ರಿಲೀಸ್ ಇವೆಂಟ್ ಇತ್ತೀಚೆಗೆ ನಡೆದಿದೆ. ಈ ಕಾರ್ಯಕ್ರಮಕ್ಕೆ ಚಿರಂಜೀವಿ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ಅವರು ವರುಣ್ ತೇಜ್ ಬಗ್ಗೆ ಇರೋ ಸಿಟ್ಟಿನ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ಚಿರಂಜೀವಿ ಚಿತ್ರಕ್ಕೆ ಎಂಟ್ರಿ ಕೊಟ್ಟ ನಟಿ ತ್ರಿಷಾ ಕೃಷ್ಣ

‘ಲಾವಣ್ಯ ಹಾಗೂ ವರುಣ್ ತೇಜ್ ಲವ್ ವಿಚಾರವನ್ನು ನೀವು ಏಕೆ ಲೀಕ್ ಮಾಡಿಲ್ಲ’ ಎಂದು ಚಿರಂಜೀವಿ ಬಳಿ ಕೇಳಿದರು ಆ್ಯಂಕರ್ ಸುಮಾ. ಇದಕ್ಕೆ ಉತ್ತರ ನೀಡಿದ್ದಾರೆ ಚಿರಂಜೀವಿ. ‘ವರುಣ್ ಈವರೆಗೆ ಎಲ್ಲವನ್ನೂ ಹೇಳಿದ್ದಾರೆ. ಆದರೆ, ಈ ವಿಚಾರವನ್ನು ಅವರು ಮುಚ್ಚಿಟ್ಟಿದ್ದರು. ಒಂದು ಹಿಂಟ್ ಕೂಡ ನೀಡಲಿಲ್ಲ. ನನ್ನಿಂದ ಸ್ಫೂರ್ತಿ ಪಡೆದಿದ್ದೇನೆ ಎಂದು ಅವರು ಹೇಳುತ್ತಲೇ ಇರುತ್ತಾರೆ. ಆದರೆ, ಲಾವಣ್ಯ ಜೊತೆ ಡೇಟ್ ಮಾಡುತ್ತಿದ್ದೇನೆ ಎಂಬುದನ್ನು ಹೇಳಿಲ್ಲ. ತಂದೆಗೆ ಹೇಳದೇ ಇರುವ ವಿಚಾರವನ್ನೂ ಅವರು ನನ್ನ ಬಳಿ ಹೇಳಿದ್ದಿದೆ. ಹೀಗಾಗಿ ಈ ವಿಚಾರ ಮುಚ್ಚಿಟ್ಟ ಅವರ ಬಗ್ಗೆ ನನಗೆ ಈಗಲೂ ಸಿಟ್ಟಿದೆ’ ಎಂದಿದ್ದಾರೆ ಚಿರಂಜೀವಿ.

ಇದನ್ನೂ ಓದಿ: ಮೆಗಾಸ್ಟಾರ್ ಚಿರಂಜೀವಿಗೆ ಅಭಿನಂದನೆ ಕೋರಿದ ನಟ ಶಿವಣ್ಣ

ಇದೇ ವೇದಿಕೆ ಮೇಲೆ ವರುಣ್ ತೇಜ್ ಅವರು ಉತ್ತರಿಸಿದ್ದಾರೆ. ‘ಪ್ರೀತಿ ವಿಚಾರವನ್ನು ನಾನು ಹೇಳಿದ ಮೊದಲಿಗ ಎಂದರೆ ಅದು ಚಿರಂಜೀವಿ. ಇದನ್ನು ಮೊದಲು ಹೇಳಿಲ್ಲ. ಇದಕ್ಕೆ ಕಾರಣ ನಾನು ಈ ಬಗ್ಗೆ ಭಯಗೊಂಡಿದ್ದೆ’ ಎಂದಿದ್ದಾರೆ ವರುಣ್ ತೇಜ್. ಅವರ ಮಾತುಕತೆ ಚರ್ಚೆ ಆಗುತ್ತಿದೆ. ‘ಆಪರೇಷನ್ ವ್ಯಾಲೆಂಟೈನ್​’ ಸಿನಿಮಾ ವರುಣ್ ತೇಜ್ ನಟನೆಯ ಮೊದಲ ಹಿಂದಿ ಸಿನಿಮಾ. ಇದು ತೆಲುಗಿನಲ್ಲೂ ರಿಲೀಸ್ ಆಗುತ್ತಿರುವುದರಿಂದ ‘ಮಿಸ್ ವರ್ಲ್ಡ್​’ ಆಗಿರೋ ಮಾನುಷಿ ಚಿಲ್ಲರ್​ಗೆ ಇದು ಮೊದಲ ದಕ್ಷಿಣದ ಸಿನಿಮಾ. ಈ ಚಿತ್ರವನ್ನು ಸೋನಿ ಪಿಕ್ಚರ್ಸ್ ಇಂಟರ್​ನ್ಯಾಷನಲ್ ಪ್ರೊಡಕ್ಷನ್ಸ್ ನಿರ್ಮಾಣ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ