AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramanujacharya Sahasrabdi: ಸಮಾನತೆಯ ಪ್ರತಿಮೆ ಸ್ಥಳಕ್ಕೆ ಭೇಟಿ ನೀಡಿದ ಮೆಗಾಸ್ಟಾರ್ ಚಿರಂಜೀವಿ

ಜ್ಯೂನಿಯರ್ ಎನ್‌ಟಿಆರ್ ಅವರ ಕುಟುಂಬ ಸದಸ್ಯರು ಕೂಡ ಸಮಾನತೆಯ ಮೂರ್ತಿ ಭವ್ಯ ಪ್ರತಿಮೆ ಇರುವ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಖ್ಯಾತ ನಿರ್ಮಾಪಕ ದಿಲ್ ರಾಜು ಸಹಿತ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ. ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಿನ್ನೆ ಸಮತಾ ಮೂರ್ತಿ ಸ್ಥಳಕ್ಕೆ ಭೇಟಿ ನೀಡಿದ್ದರು.

Ramanujacharya Sahasrabdi: ಸಮಾನತೆಯ ಪ್ರತಿಮೆ ಸ್ಥಳಕ್ಕೆ ಭೇಟಿ ನೀಡಿದ ಮೆಗಾಸ್ಟಾರ್ ಚಿರಂಜೀವಿ
ಸಮಾನತೆಯ ಪ್ರತಿಮೆ ಸ್ಥಳಕ್ಕೆ ಭೇಟಿ ನೀಡಿದ ಮೆಗಾಸ್ಟಾರ್ ಚಿರಂಜೀವಿ
Follow us
TV9 Web
| Updated By: ganapathi bhat

Updated on: Feb 12, 2022 | 8:05 PM

ಹೈದರಾಬಾದ್: ಇಲ್ಲಿನ ರಂಗಾರೆಡ್ಡಿ ಜಿಲ್ಲೆಯ ಮುಚ್ಚಿಂತಲ್‌ನಲ್ಲಿ ಇರುವ ಸಮಾನತೆಯ ಮೂರ್ತಿ ಸನ್ನಿಧಿಯಲ್ಲಿ 11ನೇ ದಿನದ ರಾಮಾನುಜಾಚಾರ್ಯರ ಸಹಸ್ರಮಾನೋತ್ಸವದ ಸಂಭ್ರಮ ನಡೆಯುತ್ತಿದೆ. ಸ್ಥಳದಲ್ಲಿ ವೇದ ಮಂತ್ರಗಳು, ಅಷ್ಟೋತ್ತರ ನಾಮಗಳು ಮತ್ತು ಶ್ರೀ ಲಕ್ಷ್ಮೀನರಸಿಂಹನ ಸ್ತೋತ್ರಗಳಿಂದ ಶ್ರೀರಾಮನಗರವು ಭಕ್ತಿಭಾವದಲ್ಲಿ ತುಂಬಿದೆ. ಮಹಾಯಾಗ, ಮಂತ್ರಪಠಣ ಸಹಿತ ಹಲವು ಧಾರ್ಮಿಕ ಕಾರ್ಯಕ್ರಮಗಳು ಜರಗುತ್ತಿವೆ.  ಶ್ರೀ ರಾಮನಗರದಲ್ಲಿನ ರಾಮಾನುಜರ ಸಹಸ್ರಾಬ್ದಿ ಕಾರ್ಯಕ್ರಮಕ್ಕೆ ವಿವಿಧ ವಲಯಗಳ ಗಣ್ಯಾತಿಗಣ್ಯರು ಭೇಟಿ ನೀಡುತ್ತಿದ್ದಾರೆ. ಅಂತೆಯೇ ಕಾರ್ಯಕ್ರಮದ 11ನೇ ದಿನವಾದ ಶನಿವಾರ (ಫೆಬ್ರವರಿ 12) ತೆಲುಗು ಚಿತ್ರರಂಗದ ಹಿರಿಯ ನಟ, ಮೆಗಾಸ್ಟಾರ್ ಚಿರಂಜೀವಿ, ದಂಪತಿ ಸಮೇತರಾಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.

ಜ್ಞಾನ, ಸಮಾನತೆ, ಆಧ್ಯಾತ್ಮಿಕ ಭಾವವನ್ನು ನೀಡುವ ಸಮಾನತೆಯ ಮೂರ್ತಿಯ ಪ್ರತಿಮೆಯ ಕಣ್ತುಂಬಿಕೊಳ್ಳಲು ರಾಜಕಾರಣಿಗಳು ಮತ್ತು ಚಿತ್ರರಂಗದ ಗಣ್ಯರು ಅಲ್ಲಿಗೆ ಬರುತ್ತಿದ್ದಾರೆ. ಫೆಬ್ರವರಿ 5 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ಸಮಾನತೆಯ ಪ್ರತಿಮೆ ವಿಶ್ವದಲ್ಲೇ ಎರಡನೇ ಅತ್ಯಂತ ಎತ್ತರದ ಕುಳಿತ ಭಂಗಿಯಲ್ಲಿ ಇರುವ ವಿಗ್ರಹ ಎಂದು ಖ್ಯಾತಿ ಪಡೆದಿದೆ. ಸ್ಥಳಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಹಿತ ಗಣ್ಯರು ಆಗಮಿಸಿದ್ದಾರೆ.

ಅದರಂತೆ, ಚಿರಂಜೀವಿ ಸಮಾನತೆಯ ಪ್ರತಿಮೆಯ ಸಹಿತ 108 ದಿವ್ಯ ದೇಶಗಳಿಗೆ ಭೇಟಿ ನೀಡಿದ್ದಾರೆ. ಮೈ ಹೋಮ್ ಗ್ರೂಪ್​ನ ಚೇರ್ಮನ್ ಡಾ. ರಾಮೇಶ್ವರ್ ರಾವ್ ಚಿರಂಜೀವಿ ದಂಪತಿಗಳಿಗೆ ಸಮಾನತೆಯ ಪ್ರತಿಮೆಯನ್ನು, ದಿವ್ಯದೇಶ ಪ್ರದೇಶವನ್ನು ವಿವರಣೆ ನೀಡಿದ್ದಾರೆ. ಅಲ್ಲದೆ, ಜ್ಯೂನಿಯರ್ ಎನ್‌ಟಿಆರ್ ಅವರ ಕುಟುಂಬ ಸದಸ್ಯರು ಕೂಡ ಸಮಾನತೆಯ ಮೂರ್ತಿ ಭವ್ಯ ಪ್ರತಿಮೆ ಇರುವ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಯಜ್ಞಶಾಲೆಗಳಿಗೆ ಭೇಟಿ ನೀಡಿ ಪೂಜಾ ಕಾರ್ಯಗಳಲ್ಲಿ ಪಾಲ್ಗೊಂಡಿದ್ದಾರೆ. ಖ್ಯಾತ ನಿರ್ಮಾಪಕ ದಿಲ್ ರಾಜು ಸಹಿತ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ. ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಿನ್ನೆ ಸಮತಾ ಮೂರ್ತಿ ಸ್ಥಳಕ್ಕೆ ಭೇಟಿ ನೀಡಿದ್ದರು.

ಸಹಸ್ರಾಬ್ದಿಯ 11ನೇ ದಿನವಾದ ಇಂದು, ಭೀಷ್ಮ ಏಕಾದಶಿ ನಿಮಿತ್ತ ವಿಷ್ಣು ಸಹಸ್ರನಾಮ ಪಠಿಸಲಾಗಿತ್ತು. ದೀಪೋತ್ಸವ, ಪ್ರದಕ್ಷಿಣೆಯಲ್ಲಿ ಭಕ್ತರು ಮಗ್ನರಾಗಿದ್ದರು.

ಇದನ್ನೂ ಓದಿ: Ramanujacharya Sahasrabdi: ರಾಮಾನುಜಾಚಾರ್ಯರ ಬೋಧನೆಗಳು ಎಲ್ಲರಿಗೂ ಆದರ್ಶ: ಅಮಿತ್ ಶಾ

ಇದನ್ನೂ ಓದಿ: ಜಾತಿ ವ್ಯವಸ್ಥೆ ತೊಡೆದುಹಾಕಿದ ಸಂತ ರಾಮಾನುಜಾಚಾರ್ಯ; ಅವರ ಜ್ಞಾನ ಇಡೀ ವಿಶ್ವಕ್ಕೇ ವ್ಯಾಪಿಸಲಿ: ಪ್ರಧಾನಿ ಮೋದಿ

ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ