AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರಂಜೀವಿ ಜನ್ಮದಿನಕ್ಕೆ ಘೋಷಣೆ ಆಯ್ತು ಹೊಸ ಸಿನಿಮಾ; 157ನೇ ಚಿತ್ರಕ್ಕೆ ನಿರ್ದೇಶಕ ಯಾರು?

ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ‘ಯುವಿ ಕ್ರಿಯೇಷನ್ಸ್‌’ ಮೂಲಕ #Mega157 ಸಿನಿಮಾ ಮೂಡಿಬರಲಿದೆ. ‘ಮೆಗಾ ಸ್ಟಾರ್​’ ಚಿರಂಜೀವಿ ಅವರ ಹುಟ್ಟುಹಬ್ಬದ ಪ್ರಯುಕ್ತ ಈ ಸಿನಿಮಾ ಅನೌನ್ಸ್​ ಆಗಿದೆ. ಸದ್ಯಕ್ಕೆ ಬಿಡುಗಡೆ ಆಗಿರುವ ಪೋಸ್ಟರ್​ ವಿನ್ಯಾಸ ಗಮನ ಸೆಳೆಯುತ್ತಿದೆ. ಇದು ಫ್ಯಾಂಟಸಿ ಕಥಾಹಂದರದ ಸಿನಿಮಾ ಆಗಿರಲಿದೆ.

ಚಿರಂಜೀವಿ ಜನ್ಮದಿನಕ್ಕೆ ಘೋಷಣೆ ಆಯ್ತು ಹೊಸ ಸಿನಿಮಾ; 157ನೇ ಚಿತ್ರಕ್ಕೆ ನಿರ್ದೇಶಕ ಯಾರು?
ಮೆಗಾಸ್ಟಾರ್​ ಚಿರಂಜೀವಿ
ಮದನ್​ ಕುಮಾರ್​
|

Updated on: Aug 22, 2023 | 12:28 PM

Share

ಖ್ಯಾತ ನಟ ಮೆಗಾ ಸ್ಟಾರ್​ ಚಿರಂಜೀವಿ (Megastar Chiranjeevi) ಅವರಿಗೆ ಇಂದು (ಆಗಸ್ಟ್​ 22) ಜನ್ಮದಿನದ ಸಂಭ್ರಮ. ಅಭಿಮಾನಿಗಳು ಈ ದಿನವನ್ನು ಬಹಳ ಸಡಗರದಿಂದ ಆಚರಿಸುತ್ತಿದ್ದಾರೆ. ಇದೇ ಖುಷಿಯಲ್ಲಿ ಚಿರಂಜೀವಿ ಅವರ ಹೊಸ ಸಿನಿಮಾ ಬಗ್ಗೆ ಮಾಹಿತಿ ಬಹಿರಂಗ ಆಗಿದೆ. ನೂರಾರು ಸಿನಿಮಾಗಳ ಮೂಲಕ ಜನರನ್ನು ರಂಜಿಸಿರುವ ಚಿರಂಜೀವಿ ಅವರು ಈಗ 157ನೇ ಸಿನಿಮಾಗೆ (#Mega157) ಸಜ್ಜಾಗುತ್ತಿದ್ದಾರೆ. ಅವರ ಹುಟ್ಟುಹಬ್ಬದ (Chiranjeevi Birthday) ದಿನವೇ ಈ ಸಿನಿಮಾದ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ವಿಶೇಷ ವಿನ್ಯಾಸದಿಂದ ಈ ಪೋಸ್ಟರ್​ ಗಮನ ಸೆಳೆಯುತ್ತಿದೆ. ದೊಡ್ಡ ಬ್ಯಾನರ್​ನಲ್ಲಿ ನಿರ್ಮಾಣ ಆಗುತ್ತಿರುವ ಈ ಸಿನಿಮಾ ಬಗ್ಗೆ ಅಭಿಮಾನಿಗಳು ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಯುವ ನಿರ್ದೇಶಕ ವಸಿಷ್ಠ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ.

1990ರಲ್ಲಿ ಚಿರಂಜೀವಿ ಮತ್ತು ಶ್ರೀದೇವಿ ಅವರು ‘ಜಗದೇಕ ವೀರುಡು ಅತಿಲೋಕ ಸುಂದರಿ’ ಸಿನಿಮಾದಲ್ಲಿ ನಟಿಸಿದ್ದರು. ಫ್ಯಾಂಟಸಿ ಕಥಾಹಂದರ ಹೊಂದಿದ್ದ ಆ ಚಿತ್ರವನ್ನು ಪ್ರೇಕ್ಷಕರು ಬಹಳ ಮೆಚ್ಚಿಕೊಂಡಿದ್ದರು. ಟಾಲಿವುಡ್​ನ ಎವರ್‌ಗ್ರೀನ್ ಸಿನಿಮಾಗಳಲ್ಲಿ ಒಂದಾಗಿ ಈ ಸಿನಿಮಾ ಉಳಿದುಕೊಂಡಿದೆ. ಈಗ ಅದೇ ರೀತಿಯ ಮತ್ತೊಂದು ಸಿನಿಮಾದಲ್ಲಿ ಅಭಿನಯಿಸಲು ಚಿರಂಜೀವಿ ತಯಾರಿ ಮಾಡಿಕೊಂಡಿದ್ದಾರೆ. ಅವರ 157ನೇ ಚಿತ್ರದಲ್ಲಿ ಅಂತಹ ಕಥಾಹಂದರ ಇರಲಿದೆ ಎಂಬುದು ವಿಶೇಷ. ಆ ಕಾರಣದಿಂದ ಅಭಿಮಾನಿಗಳಲ್ಲಿ ಈ ಪ್ರಾಜೆಕ್ಟ್​ ಬಗ್ಗೆ ಕುತೂಹಲ ಮೂಡಿದೆ.

ಯುವಿ ಕ್ರಿಯೇಷನ್ಸ್​ ಟ್ವೀಟ್​:

2022ರಲ್ಲಿ ತೆಲುಗಿನ ‘ಬಿಂಬಿಸಾರ’ ಸಿನಿಮಾ ಬಿಡುಗಡೆಯಾಗಿ ಸೂಪರ್​ ಹಿಟ್​ ಆಯಿತು. ಆ ಸಿನಿಮಾಗೆ ನಿರ್ದೇಶನ ಮಾಡಿದ್ದ ವಸಿಷ್ಠ ಅವರಿಗೆ ಈಗ ಬಂಪರ್​ ಚಾನ್ಸ್​ ಸಿಕ್ಕಿದೆ. ಚಿರಂಜೀವಿ ನಟನೆಯ 157ನೇ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುವ ಅವಕಾಶವನ್ನು ಅವರು ಪಡೆದುಕೊಂಡಿದ್ದಾರೆ. ಸದ್ಯಕ್ಕೆ ಈ ಸಿನಿಮಾವನ್ನು #Mega157 ಎಂದು ಕರೆಯಲಾಗುತ್ತಿದೆ. ಶೀಘ್ರದಲ್ಲೇ ಶೀರ್ಷಿಕೆ ಏನು ಎಂಬುದು ಬಹಿರಂಗ ಆಗಲಿದೆ. ತಾಂತ್ರಿಕ ಬಳಗದಲ್ಲಿ ಯಾರೆಲ್ಲ ಇದ್ದಾರೆ? ಚಿರಂಜೀವಿ ಜೊತೆ ಬೇರೆ ಯಾವೆಲ್ಲ ಕಲಾವಿದರು ನಟಿಸಲಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಫ್ಯಾನ್ಸ್​ ಕಾದಿದ್ದಾರೆ.

‘ಮೆಗಾ ಸ್ಟಾರ್​’ ಚಿರಂಜೀವಿಗೆ ದೆಹಲಿಯಲ್ಲಿ ಮೊಣಕಾಲಿನ ಶಸ್ತ್ರಚಿಕಿತ್ಸೆ; ಬೇಕಿದೆ ಒಂದು ವಾರ ವಿಶ್ರಾಂತಿ

ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ‘ಯುವಿ ಕ್ರಿಯೇಷನ್ಸ್‌’ ಮೂಲಕ ವಿ. ವಂಶಿಕೃಷ್ಣ ರೆಡ್ಡಿ, ಪ್ರಮೋದ್ ಉಪ್ಪಲಪಟ್ಟಿ ಹಾಗೂ ವಿಕ್ರಮ್ ರೆಡ್ಡಿ ಅವರು ಈ ಸಿನಿಮಾವನ್ನು ನಿರ್ಮಿಸಲಿದ್ದಾರೆ. ಚಿರಂಜೀವಿ ಅವರ ಸಿನಿಪಯಣದಲ್ಲಿ ಇದು ಅತ್ಯಂತ ದುಬಾರಿ ಸಿನಿಮಾ ಆಗಲಿದೆ ಎಂದು ಹೇಳಲಾಗುತ್ತಿದೆ. ನಿರ್ದೇಶಕ ವಸಿಷ್ಠ ಈ ಚಿತ್ರದಲ್ಲಿ ಬೇರೆಯದೇ ಲೋಕವನ್ನು ಪರಿಚಯಿಸಲಿದ್ದಾರೆ. ಬೆಂಕಿ, ಭೂಮಿ, ಗಾಳಿ, ನೀರು, ಆಕಾಶ ಮುಂತಾದ ಅಂಶಗಳನ್ನು ಸೇರಿಸಿ, ತ್ರಿಶೂಲದೊಂದಿಗೆ ನಕ್ಷತ್ರಾಕಾರದಲ್ಲಿ ವಿನ್ಯಾಸಗೊಂಡಿರುವ #Mega157 ಸಿನಿಮಾದ ಪೋಸ್ಟರ್​ ಗಮನ ಸೆಳೆಯುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?